Homeಮುಖಪುಟಅಕ್ಕಿ ಕದ್ದನೆಂದು ಆದಿವಾಸಿಯ ಹತ್ಯೆ ಪ್ರಕರಣ; 14 ಮಂದಿ ಮೇಲೆ ಆರೋಪ ಸಾಬೀತು

ಅಕ್ಕಿ ಕದ್ದನೆಂದು ಆದಿವಾಸಿಯ ಹತ್ಯೆ ಪ್ರಕರಣ; 14 ಮಂದಿ ಮೇಲೆ ಆರೋಪ ಸಾಬೀತು

- Advertisement -
- Advertisement -

2018ರಲ್ಲಿ ಪಾಲಕ್ಕಾಡ್ ಜಿಲ್ಲೆಯ ಅತ್ತಪ್ಪಾಡಿ ತಾಲೂಕಿನಲ್ಲಿ ಆದಿವಾಸಿ ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ತಪ್ಪಿತಸ್ಥರೆಂದು ಕೇರಳದ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 5 ರಂದು ಪ್ರಕಟಿಸಲಿದೆ ಎಂದು ‘ಬಾರ್‌ ಅಂಡ್‌ ಬೆಂಚ್’ ವರದಿ ಮಾಡಿದೆ.

ಸ್ಥಳೀಯ ಅಂಗಡಿಗಳಿಂದ ಅಕ್ಕಿ ಮತ್ತು ಕರಿಬೇವು ಕಳ್ಳತನ ಮಾಡಿದ್ದಾರೆ ಎಂಬ ಶಂಕೆಯ ಮೇರೆಗೆ 2018ರ ಫೆಬ್ರವರಿ 22 ರಂದು ಗುಂಪೊಂದು ಆದಿವಾಸಿ ಯುವಕ ಮಧು ಅವರನ್ನು ಹತ್ಯೆ ಮಾಡಿತ್ತು. ಆರೋಪಿಗಳು ಹತ್ಯೆಯನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು.

ಈ ಪ್ರಕರಣದಲ್ಲಿ ಕೇರಳ ಪೊಲೀಸರು 16 ಮಂದಿಯನ್ನು ಬಂಧಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಆಯುಧಗಳಿಂದ ಗಾಯಗೊಳಿಸುವಿಕೆ, ಕಾನೂನುಬಾಹಿರ ಸಭೆ ಮತ್ತು ಆಯುಧಗಳಿಂದ ಗಲಭೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರದ ತೀರ್ಪಿನಲ್ಲಿ, ನ್ಯಾಯಾಲಯವು ಅನೀಶ್ ಮತ್ತು ಅಬ್ದುಲ್ ಕರೀಂ ಎಂಬ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ. ಹಲ್ಲೆಯ ಫೋಟೋಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪ ಆರೋಪ ಅನೀಶ್ ಮೇಲಿದ್ದರೆ, ಮಧು ಅವರನ್ನು ಕಳ್ಳ ಎಂದು ಅಬ್ದುಲ್ ಆರೋಪಿಸಿದ್ದಾರೆ.

ಹುಸೇನ್, ಮರಕ್ಕರ್, ಶಂಶುದ್ದೀನ್, ರಾಧಾಕೃಷ್ಣನ್, ಅಬೂಬಕರ್, ಸಿದ್ದಿಕ್, ಉಬೈದ್, ನಜೀಬ್, ಜೈಜುಮೋನ್, ಸಜೀವ್, ಸತೀಶ್, ಹರೀಶ್, ಬಿಜು ಮತ್ತು ಮುನೀರ್ ಶಿಕ್ಷೆಗೊಳಗಾದವರು.

ಮೂವರು ಪ್ರಾಸಿಕ್ಯೂಷನ್ ವಕೀಲರು ಪ್ರಕರಣದಿಂದ ಹಿಂದೆ ಸರಿದಿದ್ದರಿಂದ ಪ್ರಕರಣದ ವಿಚಾರಣೆ ವಿಳಂಬವಾಯಿತು. ಪ್ರಾಸಿಕ್ಯೂಷನ್ ಮಂಡಿಸಿದ 27 ಸಾಕ್ಷಿಗಳಲ್ಲಿ ಕನಿಷ್ಠ 22 ಮಂದಿ ಪ್ರತಿಕೂಲವಾಗಿ ಮಾರ್ಪಟ್ಟಿದ್ದರು.

ನಾಲ್ಕು ವರ್ಷಗಳ ನಂತರ ವಿಚಾರಣೆ ಆರೋಪ

2018ರಲ್ಲಿ ನಡೆದ ಘಟನೆಯ ವಿಚಾರಣೆ ನಾಲ್ಕು ವರ್ಷಗಳಾದರೂ ಆರಂಭವಾಗಿಲ್ಲ ಎಂಬ ಆಕ್ಷೇಪ ಕೇಳಿಬಂದಿತ್ತು. “ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡಿದ್ದರು.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿತ್ತು. 2022ರ ಫೆಬ್ರವರಿ 22ಕ್ಕೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂದು ತಾಯಿ ಮಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...