Homeಮುಖಪುಟಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ನಟಿಗೆ ಹಣ ಪಾವತಿ ಪ್ರಕರಣ: ಡೊನಾಲ್ಡ್ ಟಂಪ್‌ಗೆ ಬಂಧನ ಭೀತಿ

ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ನಟಿಗೆ ಹಣ ಪಾವತಿ ಪ್ರಕರಣ: ಡೊನಾಲ್ಡ್ ಟಂಪ್‌ಗೆ ಬಂಧನ ಭೀತಿ

- Advertisement -
- Advertisement -

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಲಿಚಿತ್ರ ತಾರೆಯನ್ನು ಮೌನವಾಗಿರಿಸಲು ಹಣ ಪಾವತಿ ಮಾಡಿರುವ ಪ್ರಕರಣದಲ್ಲಿ, ಅವರ ಮೇಲೆ ಮ್ಯಾನ್‌ಹ್ಯಾಟನ್ ಗ್ರ್ಯಾಂಡ್ ಜ್ಯೂರಿ ದೋಷಾರೋಪಣೆ ಸಲ್ಲಿಸಿದೆ.

ಮ್ಯಾನ್‌ಹ್ಯಾಟನ್ ಜಿಲ್ಲಾ ಅಟಾರ್ನಿ ಆಲ್ವಿನ್ ಬ್ರಾಗ್ ಅವರ ಕಚೇರಿಯು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಗುರುವಾರ ಸಂಜೆ ಟ್ರಂಪ್ ಅವರ ವಕೀಲರನ್ನು ಸಂಪರ್ಕಿಸಿ, ಟ್ರಂಪ್ ಶರಣಾಗತಿಗೆ ಸಹಕರಿಸುವಂತೆ ಸೂಚಿಸಿದ್ದಾರೆ. ಆದರೆ ಟ್ರಂಪ್ ಮಾತ್ರ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದು, ಈ ದೋಷಾರೋಪಣೆಯು ರಾಜಕೀಯ ಕಿರುಕುಳ ಮತ್ತು ಚುನಾವಣಾ ಹಸ್ತಕ್ಷೇಪ ಎಂದು ಖಂಡಿಸಿದ್ದಾರೆ.

2016ರ ಅಧ್ಯಕ್ಷೀಯ ಚುನಾವಣೆ ಪ್ರಚಾರ ಸಂದರ್ಭದಲ್ಲಿ ತಮ್ಮ ಜತೆಗಿನ ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ತಾರೆಗೆ ಟ್ರಂಪ್ ಹಣ ಸಂದಾಯ ಮಾಡಿದ್ದ ಪ್ರಕರಣ ಇದಾಗಿದೆ.

ಈ ಮೂಲಕ ಅಪರಾಧದ ಆರೋಪ ಹೊತ್ತ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಟ್ರಂಪ್ ಒಳಗಾಗಿದ್ದಾರೆ. ಇದರೊಂದಿಗೆ ಟ್ರಂಪ್‌ಗೆ ಬಂಧನ ಭೀತಿ ಎದುರಾಗಿದೆ.

ಈ ಕುರಿತಂತೆ ನೀಲಿ ಚಿತ್ರ ತಾರೆ ಸ್ಟಾರ್ಮಿ ಡ್ಯಾನಿಯಲ್ಸ್ ಪ್ರತಿಕ್ರಿಯಿಸಿದ್ದು, ”ಈ ಹೋರಾಟದಲ್ಲಿ ಬೆಂಬಲಿಸಿದ ಮತ್ತು ಪ್ರೀತಿ ಕೊಟ್ಟ ಎಲ್ಲರಿಗೂ ಧನ್ಯವಾದಗಳು. ನಾನು ಪ್ರತಿಕ್ರಿಯಿಸಲು ಸಾಧ್ಯವಾಗದಷ್ಟು ಸಂದೇಶಗಳು ಬರುತ್ತಿವೆ. ಅಲ್ಲದೆ, ಆ ಬಗ್ಗೆ ಮಾತನಾಡಲು ನನಗೆ ಇಷ್ಟವಿಲ್ಲ” ಎಂದು ಹೇಳಿದ್ದಾರೆ.

ಸ್ಟಾರ್ಮಿ ಪರ ವಕೀಲ ಕ್ಲಾರ್ಕ್ ಬ್ರೀವ್‌ಸ್ಟರ್ ಟ್ವೀಟ್ ಮಾಡಿದ್ದು, ”ಸಂತೋಷಕ್ಕೆ ಯಾವುದೇ ಕಾರಣವಿಲ್ಲ, ಗ್ರ್ಯಾಂಡ್ ಜ್ಯೂರಿಗಳ ಕಠಿಣ ಪರಿಶ್ರಮ ಮತ್ತು ಆತ್ಮಸಾಕ್ಷಿಯನ್ನು ಗೌರವಿಸಬೇಕು. ಈಗ ಸತ್ಯ ಮತ್ತು ನ್ಯಾಯಕ್ಕೆ ಜಯವಾಗಲಿ. ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಹೇಳಿದ್ದಾರೆ.

ಕ್ಲಾರ್ಕ್ ಬ್ರೀವ್‌ಸ್ಟರ್ ಅವರ ಟ್ವೀಟ್ ಅನ್ನೂ ರೀಟ್ವೀಟ್ ಮಾಡಿರುವ ಸ್ಟಾರ್ಮಿ ಡ್ಯಾನಿಯಲ್ಸ್ ಅವರು, ವಕೀಲರಿಗೆ ಧನ್ಯವಾದ ತಿಳಿಸಿದ್ದಾರೆ.

ನೀಲಿ ಚಿತ್ರ ತಾರೆ ಸ್ಟಾರ್ಮಿ ಡ್ಯಾನಿಯಲ್ಸ್ ಅವರು, ಹಲವು ವರ್ಷಗಳಿಂದ ಟ್ರಂಪ್ ಜೊತೆಗಿನ ಸಂಬಂಧ ಕುರಿತಾದ ವಿವಾದದಲ್ಲಿ ಸಿಲುಕಿದ್ದಾರೆ. 2006ರ ಬೇಸಿಗೆಯಲ್ಲಿ ನಾವಿಬ್ಬರೂ ಲೈಂಗಿಕ ಸಂಬಂಧ ಹೊಂದಿದ್ದೆವು ಎಂದು 2018ರಲ್ಲಿ ಸ್ಟಾರ್ಮಿ ಆರೋಪಿಸಿದ್ದರು. ಆ ನಂತರ ಟ್ರಂಪ್ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರಂಪ್ ಬೆಂಬಲಿಗರು, ಸ್ಟಾರ್ಮಿ ಅವರನ್ನು ತೀವ್ರವಾಗಿ ಅವಮಾನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....