Homeಮುಖಪುಟಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ನಟಿಗೆ ಹಣ ಪಾವತಿ ಪ್ರಕರಣ: ಡೊನಾಲ್ಡ್ ಟಂಪ್‌ಗೆ ಬಂಧನ ಭೀತಿ

ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ನಟಿಗೆ ಹಣ ಪಾವತಿ ಪ್ರಕರಣ: ಡೊನಾಲ್ಡ್ ಟಂಪ್‌ಗೆ ಬಂಧನ ಭೀತಿ

- Advertisement -
- Advertisement -

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಲಿಚಿತ್ರ ತಾರೆಯನ್ನು ಮೌನವಾಗಿರಿಸಲು ಹಣ ಪಾವತಿ ಮಾಡಿರುವ ಪ್ರಕರಣದಲ್ಲಿ, ಅವರ ಮೇಲೆ ಮ್ಯಾನ್‌ಹ್ಯಾಟನ್ ಗ್ರ್ಯಾಂಡ್ ಜ್ಯೂರಿ ದೋಷಾರೋಪಣೆ ಸಲ್ಲಿಸಿದೆ.

ಮ್ಯಾನ್‌ಹ್ಯಾಟನ್ ಜಿಲ್ಲಾ ಅಟಾರ್ನಿ ಆಲ್ವಿನ್ ಬ್ರಾಗ್ ಅವರ ಕಚೇರಿಯು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಗುರುವಾರ ಸಂಜೆ ಟ್ರಂಪ್ ಅವರ ವಕೀಲರನ್ನು ಸಂಪರ್ಕಿಸಿ, ಟ್ರಂಪ್ ಶರಣಾಗತಿಗೆ ಸಹಕರಿಸುವಂತೆ ಸೂಚಿಸಿದ್ದಾರೆ. ಆದರೆ ಟ್ರಂಪ್ ಮಾತ್ರ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದು, ಈ ದೋಷಾರೋಪಣೆಯು ರಾಜಕೀಯ ಕಿರುಕುಳ ಮತ್ತು ಚುನಾವಣಾ ಹಸ್ತಕ್ಷೇಪ ಎಂದು ಖಂಡಿಸಿದ್ದಾರೆ.

2016ರ ಅಧ್ಯಕ್ಷೀಯ ಚುನಾವಣೆ ಪ್ರಚಾರ ಸಂದರ್ಭದಲ್ಲಿ ತಮ್ಮ ಜತೆಗಿನ ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ತಾರೆಗೆ ಟ್ರಂಪ್ ಹಣ ಸಂದಾಯ ಮಾಡಿದ್ದ ಪ್ರಕರಣ ಇದಾಗಿದೆ.

ಈ ಮೂಲಕ ಅಪರಾಧದ ಆರೋಪ ಹೊತ್ತ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಟ್ರಂಪ್ ಒಳಗಾಗಿದ್ದಾರೆ. ಇದರೊಂದಿಗೆ ಟ್ರಂಪ್‌ಗೆ ಬಂಧನ ಭೀತಿ ಎದುರಾಗಿದೆ.

ಈ ಕುರಿತಂತೆ ನೀಲಿ ಚಿತ್ರ ತಾರೆ ಸ್ಟಾರ್ಮಿ ಡ್ಯಾನಿಯಲ್ಸ್ ಪ್ರತಿಕ್ರಿಯಿಸಿದ್ದು, ”ಈ ಹೋರಾಟದಲ್ಲಿ ಬೆಂಬಲಿಸಿದ ಮತ್ತು ಪ್ರೀತಿ ಕೊಟ್ಟ ಎಲ್ಲರಿಗೂ ಧನ್ಯವಾದಗಳು. ನಾನು ಪ್ರತಿಕ್ರಿಯಿಸಲು ಸಾಧ್ಯವಾಗದಷ್ಟು ಸಂದೇಶಗಳು ಬರುತ್ತಿವೆ. ಅಲ್ಲದೆ, ಆ ಬಗ್ಗೆ ಮಾತನಾಡಲು ನನಗೆ ಇಷ್ಟವಿಲ್ಲ” ಎಂದು ಹೇಳಿದ್ದಾರೆ.

ಸ್ಟಾರ್ಮಿ ಪರ ವಕೀಲ ಕ್ಲಾರ್ಕ್ ಬ್ರೀವ್‌ಸ್ಟರ್ ಟ್ವೀಟ್ ಮಾಡಿದ್ದು, ”ಸಂತೋಷಕ್ಕೆ ಯಾವುದೇ ಕಾರಣವಿಲ್ಲ, ಗ್ರ್ಯಾಂಡ್ ಜ್ಯೂರಿಗಳ ಕಠಿಣ ಪರಿಶ್ರಮ ಮತ್ತು ಆತ್ಮಸಾಕ್ಷಿಯನ್ನು ಗೌರವಿಸಬೇಕು. ಈಗ ಸತ್ಯ ಮತ್ತು ನ್ಯಾಯಕ್ಕೆ ಜಯವಾಗಲಿ. ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಹೇಳಿದ್ದಾರೆ.

ಕ್ಲಾರ್ಕ್ ಬ್ರೀವ್‌ಸ್ಟರ್ ಅವರ ಟ್ವೀಟ್ ಅನ್ನೂ ರೀಟ್ವೀಟ್ ಮಾಡಿರುವ ಸ್ಟಾರ್ಮಿ ಡ್ಯಾನಿಯಲ್ಸ್ ಅವರು, ವಕೀಲರಿಗೆ ಧನ್ಯವಾದ ತಿಳಿಸಿದ್ದಾರೆ.

ನೀಲಿ ಚಿತ್ರ ತಾರೆ ಸ್ಟಾರ್ಮಿ ಡ್ಯಾನಿಯಲ್ಸ್ ಅವರು, ಹಲವು ವರ್ಷಗಳಿಂದ ಟ್ರಂಪ್ ಜೊತೆಗಿನ ಸಂಬಂಧ ಕುರಿತಾದ ವಿವಾದದಲ್ಲಿ ಸಿಲುಕಿದ್ದಾರೆ. 2006ರ ಬೇಸಿಗೆಯಲ್ಲಿ ನಾವಿಬ್ಬರೂ ಲೈಂಗಿಕ ಸಂಬಂಧ ಹೊಂದಿದ್ದೆವು ಎಂದು 2018ರಲ್ಲಿ ಸ್ಟಾರ್ಮಿ ಆರೋಪಿಸಿದ್ದರು. ಆ ನಂತರ ಟ್ರಂಪ್ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರಂಪ್ ಬೆಂಬಲಿಗರು, ಸ್ಟಾರ್ಮಿ ಅವರನ್ನು ತೀವ್ರವಾಗಿ ಅವಮಾನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...