Homeಕರ್ನಾಟಕಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿದೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುವುದು ನ್ಯಾಯಾಲಯ ಮುಂದಿರುವ ಪ್ರಶ್ನೆ. ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಅಪರಾಧದ ತನಿಖೆ ನಡೆಸಲು ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದು ಹೇಳಿದ್ದಾರೆ.

ಸಿಬಿಐ ಪರವಾಗಿ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌, “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ, ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ, ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದಿದ್ದಾರೆ.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಹೇಳಿದ್ದಾರೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...