Homeಕರ್ನಾಟಕಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿದೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುವುದು ನ್ಯಾಯಾಲಯ ಮುಂದಿರುವ ಪ್ರಶ್ನೆ. ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಅಪರಾಧದ ತನಿಖೆ ನಡೆಸಲು ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದು ಹೇಳಿದ್ದಾರೆ.

ಸಿಬಿಐ ಪರವಾಗಿ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌, “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ, ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ, ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದಿದ್ದಾರೆ.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಹೇಳಿದ್ದಾರೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...