Homeಕರ್ನಾಟಕಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿದೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುವುದು ನ್ಯಾಯಾಲಯ ಮುಂದಿರುವ ಪ್ರಶ್ನೆ. ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಅಪರಾಧದ ತನಿಖೆ ನಡೆಸಲು ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದು ಹೇಳಿದ್ದಾರೆ.

ಸಿಬಿಐ ಪರವಾಗಿ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌, “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ, ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ, ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದಿದ್ದಾರೆ.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಹೇಳಿದ್ದಾರೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...