Homeಕರ್ನಾಟಕಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿದೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುವುದು ನ್ಯಾಯಾಲಯ ಮುಂದಿರುವ ಪ್ರಶ್ನೆ. ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಅಪರಾಧದ ತನಿಖೆ ನಡೆಸಲು ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದು ಹೇಳಿದ್ದಾರೆ.

ಸಿಬಿಐ ಪರವಾಗಿ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌, “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ, ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ, ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದಿದ್ದಾರೆ.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಹೇಳಿದ್ದಾರೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...