Homeಕರ್ನಾಟಕಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿದೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುವುದು ನ್ಯಾಯಾಲಯ ಮುಂದಿರುವ ಪ್ರಶ್ನೆ. ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಅಪರಾಧದ ತನಿಖೆ ನಡೆಸಲು ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದು ಹೇಳಿದ್ದಾರೆ.

ಸಿಬಿಐ ಪರವಾಗಿ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌, “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ, ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ, ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದಿದ್ದಾರೆ.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಹೇಳಿದ್ದಾರೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...