Homeಕರ್ನಾಟಕಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿದೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುವುದು ನ್ಯಾಯಾಲಯ ಮುಂದಿರುವ ಪ್ರಶ್ನೆ. ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಅಪರಾಧದ ತನಿಖೆ ನಡೆಸಲು ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದು ಹೇಳಿದ್ದಾರೆ.

ಸಿಬಿಐ ಪರವಾಗಿ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌, “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ, ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ, ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದಿದ್ದಾರೆ.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಹೇಳಿದ್ದಾರೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...