Homeಕರ್ನಾಟಕಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿದೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುವುದು ನ್ಯಾಯಾಲಯ ಮುಂದಿರುವ ಪ್ರಶ್ನೆ. ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಅಪರಾಧದ ತನಿಖೆ ನಡೆಸಲು ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದು ಹೇಳಿದ್ದಾರೆ.

ಸಿಬಿಐ ಪರವಾಗಿ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌, “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ, ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ, ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದಿದ್ದಾರೆ.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಹೇಳಿದ್ದಾರೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...