Homeಕರ್ನಾಟಕಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿದೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುವುದು ನ್ಯಾಯಾಲಯ ಮುಂದಿರುವ ಪ್ರಶ್ನೆ. ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಅಪರಾಧದ ತನಿಖೆ ನಡೆಸಲು ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದು ಹೇಳಿದ್ದಾರೆ.

ಸಿಬಿಐ ಪರವಾಗಿ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌, “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ, ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ, ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದಿದ್ದಾರೆ.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಹೇಳಿದ್ದಾರೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...