Homeಮುಖಪುಟಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

- Advertisement -
- Advertisement -

ಪುಣೆ: ಮಾಜಿ ಸಚಿವ ವಿಶ್ವಜೀತ್ ಕದಮ್ ಅವರ ಪತ್ರವನ್ನು ನಕಲಿ ಮಾಡುವುದರಿಂದ ಹಿಡಿದು ವಂಚನೆ, ಮಾನನಷ್ಟ, ಅವರು ವಾಸಿಸುವ ಔಂಧ್‌ನಲ್ಲಿರುವ ಸುಪ್ರಿಯಾ ಟವರ್ಸ್ ಸಹಕಾರಿ ವಸತಿ ಸಂಘದ ಬ್ಯಾಂಕ್‌ಗೆ ವಂಚನೆಯ ಮಾಹಿತಿ ನೀಡುವುದು, ನಿವಾಸಿ ವಸತಿ ಸಂಘದ ಮಹಿಳೆಯರ ಗೌರವಕ್ಕೆ ಧಕ್ಕೆ ತರುವುದು ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಯ ನಿರ್ದೇಶಕ ಯೋಗೇಶ್ ಜಾಮ್ದಾರ್ (44) ವಿರುದ್ಧ ಚತುರ್ಶೃಂಗಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸೊಸೈಟಿ ಅಧ್ಯಕ್ಷ ದತ್ತಾತ್ರೇಯ ಜನಾರ್ಧನ್ ಸಾಲುಂಖೆ ಅವರು ಜಾಮ್ದಾರ್ ವಿರುದ್ಧ 2017ರಿಂದ ಸೊಸೈಟಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಜಾಮ್ದಾರ್ ಅವರ ನಿರಂತರ ಕಿರುಕುಳ ಮತ್ತು ಬೆದರಿಕೆಗಳಿಂದಾಗಿ ಸೊಸೈಟಿಯ ಮಾಜಿ ಕಾರ್ಯದರ್ಶಿಯೊಬ್ಬರು ತಮ್ಮ ಫ್ಲಾಟ್ ಅನ್ನು ಮಾರಾಟ ಮಾಡಿ ಜಾಗ ಖಾಲಿ ಮಾಡಿದ್ದಾರೆ ಎಂದು ಅವರು ಸಾಲುಂಖೆ ಹೇಳಿದ್ದಾರೆ.

ದೂರಿನ ಪ್ರಕಾರ, ಯೋಗೇಶ್ ಜಾಮ್ದಾರ್ ಅವರು ಜಾಮ್ದಾರ್ ನಿವಾಸಿ ಸಂಘದ ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಮತ್ತು ನಿಂದನೀಯ ಭಾಷೆಯನ್ನು ಬಳಸಿದ್ದಾರೆ ಮತ್ತು ಅವರಿಗೆ ಬೆದರಿಕೆ ಹಾಕಿದ್ದಾನೆ. ಮಹಿಳೆಯರ ಒಪ್ಪಿಗೆಯಿಲ್ಲದೆ, ಅವರ ಚಿತ್ರಗಳು ಮತ್ತು ವೀಡಿಯೊಗಳನ್ನು ಕ್ಲಿಕ್ಕಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾನೆ. ದೀಪಾವಳಿಯ ಸಮಯದಲ್ಲಿ ಅವರ ಗಂಡಂದಿರನ್ನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ಅವರ ಮೇಲೆ ಅಶ್ಲೀಲ ಸನ್ನೆಗಳನ್ನು ಮಾಡಿದ್ದಾನೆ. ಮಾಜಿ ಸಚಿವ ಕದಮ್ ಅವರ ಅಧಿಕೃತ ಲೆಟರ್‌ಹೆಡ್ ಅನ್ನು ಪಡೆದುಕೊಂಡು, ಅದರ ಮೇಲೆ ತಿಲಕ್ ರಸ್ತೆಯಲ್ಲಿರುವ ಡಿಡಿಆರ್ ಕಚೇರಿಗೆ ದೂರು ಬರೆದಿದ್ದಾನೆ. ಕದಮ್ ಅವರ ಸಹಿಯನ್ನು ನಕಲಿ ಮಾಡಿದ್ದಾನೆ. ಮತ್ತು ಅದನ್ನೇ ಸಲ್ಲಿಸಿದ್ದಾನೆ. ಜಾಮ್ದಾರ್ ಪತ್ರವೊಂದನ್ನು ನಕಲಿ ಮಾಡಿ ಸೊಸೈಟಿ ದೇವಾಲಯವನ್ನು ಕೆಡವಬೇಕೆಂದು ಒತ್ತಾಯಿಸುವ ಮೂಲಕ ಸೊಸೈಟಿ ನಿವಾಸಿಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾನೆ. ಈತ ಸೊಸೈಟಿ ಬ್ಯಾಂಕ್ ಖಾತೆಯನ್ನು ಸಹ ಸ್ಥಗಿತಗೊಳಿಸಿದ್ದಕ್ಕಾಗಿ ನಿವಾಸಿಗಳು ತೀವ್ರ ತೊಂದರೆ ಅನುಭವಿಸಬೇಕಾಯಿತು. ಜಾಮ್ದಾರ್ ಆಗಾಗ್ಗೆ ಸೊಸೈಟಿ ನಿವಾಸಿಗಳಿಗೆ ತನ್ನ ಬಳಿ ಬಂದೂಕು ಇದೆ ಎಂದು ಬೆದರಿಕೆ ಹಾಕಿದ್ದಾನೆ. ಸೊಸೈಟಿ ಸಭೆಗಳಲ್ಲಿ, ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ತನ್ನ ವಿರುದ್ಧ ಮಾತನಾಡಿದರೆ ನ್ಯಾಯಾಲಯದಲ್ಲಿ ನಿವಾಸಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸಿದ್ದಾನೆ ಎಂದು  ಸಾಲುಂಖೆ ದೂರಿನಲ್ಲಿ ಹೇಳಿದ್ದಾರೆ.

ಈತನ ನಿರಂತರ ಕಿರುಕುಳದಿಂದಾಗಿ, ಸೊಸೈಟಿಯ ನಿವಾಸಿಯೂ ಆಗಿರುವ ರಿಯಲ್ ಎಸ್ಟೇಟ್ ಡೆವಲಪರ್ ಜಯಂತ್ ಕುಲಕರ್ಣಿ 2024ರ ನವೆಂಬರ್ 24ರಂದು ನಡೆದ ಎಜಿಎಂ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು. ಜಾಮ್ದಾರ್ ಸೊಸೈಟಿ ಕಚೇರಿ ಸಿಬ್ಬಂದಿಗೆ ನಿರಂತರವಾಗಿ ಬೆದರಿಕೆ ಮತ್ತು ಕಿರುಕುಳ ನೀಡುತ್ತಿದ್ದಾನೆ ಮತ್ತು ಸೊಸೈಟಿ ಆಸ್ತಿಯನ್ನು ಹಾಳುಗೆಡುವುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

2016, ಜನವರಿ 1 ಮತ್ತು 2024, ಡಿ.31ರ ನಡುವೆ ಜಾಮ್ದಾರ್ ಮಾಡಿರುವ ಆರೋಪದ ಅಪರಾಧಗಳಿಗಾಗಿ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 294, 268, 420, 464, 463, 465, 468, 469, 471, 503, 504, 506, 499, 500, 354 ಡಿ ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ಎಮರ್ಜೆನ್ಸಿ’ ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...