Homeಮುಖಪುಟಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

- Advertisement -
- Advertisement -

ಪುಣೆ: ಮಾಜಿ ಸಚಿವ ವಿಶ್ವಜೀತ್ ಕದಮ್ ಅವರ ಪತ್ರವನ್ನು ನಕಲಿ ಮಾಡುವುದರಿಂದ ಹಿಡಿದು ವಂಚನೆ, ಮಾನನಷ್ಟ, ಅವರು ವಾಸಿಸುವ ಔಂಧ್‌ನಲ್ಲಿರುವ ಸುಪ್ರಿಯಾ ಟವರ್ಸ್ ಸಹಕಾರಿ ವಸತಿ ಸಂಘದ ಬ್ಯಾಂಕ್‌ಗೆ ವಂಚನೆಯ ಮಾಹಿತಿ ನೀಡುವುದು, ನಿವಾಸಿ ವಸತಿ ಸಂಘದ ಮಹಿಳೆಯರ ಗೌರವಕ್ಕೆ ಧಕ್ಕೆ ತರುವುದು ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಯ ನಿರ್ದೇಶಕ ಯೋಗೇಶ್ ಜಾಮ್ದಾರ್ (44) ವಿರುದ್ಧ ಚತುರ್ಶೃಂಗಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸೊಸೈಟಿ ಅಧ್ಯಕ್ಷ ದತ್ತಾತ್ರೇಯ ಜನಾರ್ಧನ್ ಸಾಲುಂಖೆ ಅವರು ಜಾಮ್ದಾರ್ ವಿರುದ್ಧ 2017ರಿಂದ ಸೊಸೈಟಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಜಾಮ್ದಾರ್ ಅವರ ನಿರಂತರ ಕಿರುಕುಳ ಮತ್ತು ಬೆದರಿಕೆಗಳಿಂದಾಗಿ ಸೊಸೈಟಿಯ ಮಾಜಿ ಕಾರ್ಯದರ್ಶಿಯೊಬ್ಬರು ತಮ್ಮ ಫ್ಲಾಟ್ ಅನ್ನು ಮಾರಾಟ ಮಾಡಿ ಜಾಗ ಖಾಲಿ ಮಾಡಿದ್ದಾರೆ ಎಂದು ಅವರು ಸಾಲುಂಖೆ ಹೇಳಿದ್ದಾರೆ.

ದೂರಿನ ಪ್ರಕಾರ, ಯೋಗೇಶ್ ಜಾಮ್ದಾರ್ ಅವರು ಜಾಮ್ದಾರ್ ನಿವಾಸಿ ಸಂಘದ ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಮತ್ತು ನಿಂದನೀಯ ಭಾಷೆಯನ್ನು ಬಳಸಿದ್ದಾರೆ ಮತ್ತು ಅವರಿಗೆ ಬೆದರಿಕೆ ಹಾಕಿದ್ದಾನೆ. ಮಹಿಳೆಯರ ಒಪ್ಪಿಗೆಯಿಲ್ಲದೆ, ಅವರ ಚಿತ್ರಗಳು ಮತ್ತು ವೀಡಿಯೊಗಳನ್ನು ಕ್ಲಿಕ್ಕಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾನೆ. ದೀಪಾವಳಿಯ ಸಮಯದಲ್ಲಿ ಅವರ ಗಂಡಂದಿರನ್ನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ಅವರ ಮೇಲೆ ಅಶ್ಲೀಲ ಸನ್ನೆಗಳನ್ನು ಮಾಡಿದ್ದಾನೆ. ಮಾಜಿ ಸಚಿವ ಕದಮ್ ಅವರ ಅಧಿಕೃತ ಲೆಟರ್‌ಹೆಡ್ ಅನ್ನು ಪಡೆದುಕೊಂಡು, ಅದರ ಮೇಲೆ ತಿಲಕ್ ರಸ್ತೆಯಲ್ಲಿರುವ ಡಿಡಿಆರ್ ಕಚೇರಿಗೆ ದೂರು ಬರೆದಿದ್ದಾನೆ. ಕದಮ್ ಅವರ ಸಹಿಯನ್ನು ನಕಲಿ ಮಾಡಿದ್ದಾನೆ. ಮತ್ತು ಅದನ್ನೇ ಸಲ್ಲಿಸಿದ್ದಾನೆ. ಜಾಮ್ದಾರ್ ಪತ್ರವೊಂದನ್ನು ನಕಲಿ ಮಾಡಿ ಸೊಸೈಟಿ ದೇವಾಲಯವನ್ನು ಕೆಡವಬೇಕೆಂದು ಒತ್ತಾಯಿಸುವ ಮೂಲಕ ಸೊಸೈಟಿ ನಿವಾಸಿಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾನೆ. ಈತ ಸೊಸೈಟಿ ಬ್ಯಾಂಕ್ ಖಾತೆಯನ್ನು ಸಹ ಸ್ಥಗಿತಗೊಳಿಸಿದ್ದಕ್ಕಾಗಿ ನಿವಾಸಿಗಳು ತೀವ್ರ ತೊಂದರೆ ಅನುಭವಿಸಬೇಕಾಯಿತು. ಜಾಮ್ದಾರ್ ಆಗಾಗ್ಗೆ ಸೊಸೈಟಿ ನಿವಾಸಿಗಳಿಗೆ ತನ್ನ ಬಳಿ ಬಂದೂಕು ಇದೆ ಎಂದು ಬೆದರಿಕೆ ಹಾಕಿದ್ದಾನೆ. ಸೊಸೈಟಿ ಸಭೆಗಳಲ್ಲಿ, ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ತನ್ನ ವಿರುದ್ಧ ಮಾತನಾಡಿದರೆ ನ್ಯಾಯಾಲಯದಲ್ಲಿ ನಿವಾಸಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸಿದ್ದಾನೆ ಎಂದು  ಸಾಲುಂಖೆ ದೂರಿನಲ್ಲಿ ಹೇಳಿದ್ದಾರೆ.

ಈತನ ನಿರಂತರ ಕಿರುಕುಳದಿಂದಾಗಿ, ಸೊಸೈಟಿಯ ನಿವಾಸಿಯೂ ಆಗಿರುವ ರಿಯಲ್ ಎಸ್ಟೇಟ್ ಡೆವಲಪರ್ ಜಯಂತ್ ಕುಲಕರ್ಣಿ 2024ರ ನವೆಂಬರ್ 24ರಂದು ನಡೆದ ಎಜಿಎಂ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು. ಜಾಮ್ದಾರ್ ಸೊಸೈಟಿ ಕಚೇರಿ ಸಿಬ್ಬಂದಿಗೆ ನಿರಂತರವಾಗಿ ಬೆದರಿಕೆ ಮತ್ತು ಕಿರುಕುಳ ನೀಡುತ್ತಿದ್ದಾನೆ ಮತ್ತು ಸೊಸೈಟಿ ಆಸ್ತಿಯನ್ನು ಹಾಳುಗೆಡುವುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

2016, ಜನವರಿ 1 ಮತ್ತು 2024, ಡಿ.31ರ ನಡುವೆ ಜಾಮ್ದಾರ್ ಮಾಡಿರುವ ಆರೋಪದ ಅಪರಾಧಗಳಿಗಾಗಿ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 294, 268, 420, 464, 463, 465, 468, 469, 471, 503, 504, 506, 499, 500, 354 ಡಿ ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ಎಮರ್ಜೆನ್ಸಿ’ ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...