Homeಮುಖಪುಟಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು ವಿರುದ್ಧ ಕೊಚ್ಚಿಯ ತ್ರಿಕ್ಕಾಕರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಸ್ಲಿಂ ಸಮುದಾಯವನ್ನು ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದನೆಗೆ ಲಿಂಕ್ ಮಾಡುವ ಮೂಲಕ ಇಸ್ಲಾಮೋಫೋಬಿಕ್ ಹಾಗೂ ಮಾನನಷ್ಟ ಹೇಳಿಕೆಗಳನ್ನು ನೀಡಿದ ಆರೋಪ ಇವರ ಮೇಲಿದೆ.

ಕೇರಳ ಪೊಲೀಸರು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನ ‘ಆಪರೇಷನ್ ತೂಫಾನ್’ ಹಿನ್ನೆಲೆಯಲ್ಲಿ ಈ ವಿವಾದ ಭುಗಿಲೆದ್ದಿದೆ. ಈ ಅಭಿಯಾನದ ಭಾಗವಾಗಿ ಕೇರಳದ ಗೃಹ ಸಚಿವರಾದ ರಮೇಶ್ ಚೆನ್ನಿತ್ತಲ ಅವರು ಪ್ರಮುಖ ಮುಸ್ಲಿಂ ಧಾರ್ಮಿಕ ಸಂಘಟನೆಯಾದ ‘ಸಮಸ್ತ’ದ ಅಧ್ಯಕ್ಷರಾದ ಜಿಫ್ರಿ ಮುತ್ತುಕೋಯ ತಂಗಲ್ ಅವರ ಬೆಂಬಲವನ್ನು ಕೋರಿದ್ದರು. ಗೃಹ ಸಚಿವರ ಈ ಕ್ರಮವನ್ನು ಉಲ್ಲೇಖಿಸಿ ಆರ್.ವಿ. ಬಾಬು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವಿವಾದಾತ್ಮಕ ಬರಹವೊಂದನ್ನು ಪೋಸ್ಟ್ ಮಾಡಿದ್ದರು.

ವಿವಾದಾತ್ಮಕ ಫೇಸ್‌ಬುಕ್ ಪೋಸ್ಟ್‌ನಲ್ಲೇನಿತ್ತು? 

ಆರ್.ವಿ. ಬಾಬು ತಮ್ಮ ಪೋಸ್ಟ್‌ನಲ್ಲಿ, “ಕೇರಳವನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಗೃಹ ಇಲಾಖೆ ಜಾರಿಗೆ ತಂದಿರುವ ‘ಆಪರೇಷನ್ ತೂಫಾನ್’ ಅಭಿಯಾನವನ್ನು ಬೆಂಬಲಿಸುವಂತೆ ಗೃಹ ಸಚಿವರು ಸಮಸ್ತ ನಾಯಕ ಜಿಫ್ರಿ ಮುತ್ತುಕೋಯ ತಂಗಲ್ ಅವರ ಸಹಾಯ ಕೋರಿರುವುದು ಒಳ್ಳೆಯ ನಡೆ. ಆದರೆ, ಇತರ ಸಮುದಾಯಗಳ ನಾಯಕರಿಗಿಂತ ಹೆಚ್ಚಾಗಿ ಈ ವಿಷಯದಲ್ಲಿ ಸಮಸ್ತದ ನಾಯಕರು ಮತ್ತು ಅವರ ಸಹಚರರೇ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಬೇಕಾಗಿದೆ. ಏಕೆಂದರೆ ರಾಜ್ಯದಲ್ಲಿ ಮಾದಕ ದ್ರವ್ಯಗಳ ವ್ಯಾಪಕ ಮಾರಾಟ ಮತ್ತು ಕೇರಳಕ್ಕೆ ಅವುಗಳನ್ನು ಕಳ್ಳಸಾಗಣೆ ಮಾಡುವಲ್ಲಿ ತೊಡಗಿರುವವರಲ್ಲಿ ಹೆಚ್ಚಿನವರು ಇದೇ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇದು ಆ ಸಮುದಾಯಕ್ಕೆ ನಾಚಿಕೆಗೇಡಿನ ವಿಷಯ. ಅದು ಮಾದಕ ದ್ರವ್ಯ ಕಳ್ಳಸಾಗಣೆಯಾಗಿರಲಿ ಅಥವಾ ಭಯೋತ್ಪಾದನೆಯಾಗಿರಲಿ, ‘ನಮ್ಮ ಜನರು’ (ಮುಸ್ಲಿಮರನ್ನು ಉಲ್ಲೇಖಿಸಲು ಬಳಸುವ ಆಡುಮಾತು) ಎಂಬ ಪದದ ಅರಿವಿಲ್ಲದೆ ಇಲ್ಲಿ ಏನೂ ನಡೆಯುವುದಿಲ್ಲ” ಎಂದು ಗಂಭೀರ ಆರೋಪ ಮಾಡಿದ್ದರು.

ಪಿಡಿಪಿ ನಾಯಕನಿಂದ ದೂರು ದಾಖಲು: ಆರ್.ವಿ. ಬಾಬು ಅವರ ಈ ಸೋಷಿಯಲ್ ಮೀಡಿಯಾ ಪೋಸ್ಟ್ ಮುಸ್ಲಿಂ ಸಮುದಾಯ ಮತ್ತು ಧಾರ್ಮಿಕ ನಾಯಕರ ತೇಜೋವಧೆ ಮಾಡುವ ಉದ್ದೇಶವನ್ನು ಹೊಂದಿದೆ ಹಾಗೂ ಸಮಾಜದಲ್ಲಿ ಕೋಮು ಸಂಘರ್ಷ ಮತ್ತು ದ್ವೇಷವನ್ನು ಪ್ರಚೋದಿಸುವಂತಿದೆ ಎಂದು ಆರೋಪಿಸಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಕೇಂದ್ರ ಸಮಿತಿಯ ನಾಯಕ ಅಶ್ರಫ್ ವಝಕ್ಕಲ ಅವರು ತ್ರಿಕ್ಕಾಕರ ಅಸಿಸ್ಟೆಂಟ್ ಪೊಲೀಸ್ ಕಮಿಷನರ್‌ಗೆ ಅಧಿಕೃತ ದೂರು ನೀಡಿದ್ದರು.

ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್: ದೂರಿನ ಆಧಾರದ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ತ್ರಿಕ್ಕಾಕರ ಪೊಲೀಸರು, ಹಿಂದೂ ಐಕ್ಯ ವೇದಿಕೆಯ ನಾಯಕನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಮತ್ತು ಕೇರಳ ಪೊಲೀಸ್ ಕಾಯ್ದೆಯ ಸಂಬಂಧಿತ ಕಠಿಣ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು, ಸಮಾಜದಲ್ಲಿ ಸುಳ್ಳು ಮಾಹಿತಿಯನ್ನು ಹರಡುವುದು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಆರೋಪಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ ಶೀಘ್ರದಲ್ಲೇ ಆರ್.ವಿ. ಬಾಬು ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೇರಳದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಯೋಜಿತ ಹಿಂದುತ್ವ ಸಂಘಟನೆಯಾಗಿರುವ ಹಿಂದೂ ಐಕ್ಯ ವೇದಿಕೆಯ ಪ್ರಮುಖ ನಾಯಕರಾಗಿರುವ ಆರ್.ವಿ. ಬಾಬು, ಈ ಹಿಂದೆಯೂ ಸಹ ಇಸ್ಲಾಮೋಫೋಬಿಕ್ ಮತ್ತು ಕೋಮು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಹಲವು ಕಾನೂನು ಕಾನೂನು ಪ್ರಕ್ರಿಯೆಗಳನ್ನು ಎದುರಿಸುತ್ತಿದ್ದಾರೆ. ಸದ್ಯ ಮಾದಕ ದ್ರವ್ಯದಂತಹ ಗಂಭೀರ ಸಾಮಾಜಿಕ ಪಿಡುಗನ್ನು ನಿರ್ದಿಷ್ಟ ಸಮುದಾಯಕ್ಕೆ ಲಿಂಕ್ ಮಾಡಿರುವುದಕ್ಕೆ ಕೇರಳದ ವಿವಿಧ ಸಾಮಾಜಿಕ ಹಾಗೂ ರಾಜಕೀಯ ವಲಯಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...