Homeಕರ್ನಾಟಕವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು

ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು

ಈ ಇಡೀ ಘಟನೆಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿದ್ದು ವೈರಲ್ ಆಗಿದೆ. ಜೊತೆಗೆ ದೂರು, ಪ್ರತಿದೂರಿನ ಅನ್ವಯ ಎರಡು ಪ್ರಕರಣಗಳು ದಾಖಲಾಗಿವೆ.

- Advertisement -
- Advertisement -

ಪಾಸ್ ಇದ್ದರೂ ಸಹ ಶುಲ್ಕ ಪಾವತಿ ರಸೀದಿ ಜೆರಾಕ್ಸ್‌ ಪ್ರತಿ ಇಲ್ಲವೆಂಬ ಕಾರಣವೊಡ್ಡಿ ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ನಂತರ ಕಂಡಕ್ಟರ್‌ ನೀಡಿದ ದೂರಿನ ಆಧಾರದಲ್ಲಿ ವಿದ್ಯಾರ್ಥಿನಿ ಮೇಲೂ ಸಹ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿದ್ಯಾರ್ಥಿನಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಜನನಿ ವತ್ಸಲ ಅವರು ಡಿ.3ರಂದು ರಾತ್ರಿ ಸುಮಾರು 9.30 ವೇಳೆಯಲ್ಲಿ ಬೆಂಗಳೂರಿನ ಕಾರ್ಪೋರೇಷನ್‌ ಸರ್ಕಲ್‌ನಿಂದ ಬಿಎಂಟಿಸಿ ಬಸ್‌‌ನಲ್ಲಿ (ಕೆಎ-57-ಎಫ್‌‌-3447) ಬೊಮ್ಮಸಂದ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

“ಶಾಂತಿನಗರದ ಬಸ್ ನಿಲ್ದಾಣದ ಬಳಿ ನಿರ್ವಾಹಕರಾದ ಮನೋಜ್‌ ಅವರು ವಿದ್ಯಾರ್ಥಿನಿಯ ಬಸ್ ಪಾಸ್‌ ಕಿತ್ತುಕೊಂಡು, ಶುಲ್ಕ ರಸೀದಿ ಇಲ್ಲದ ಕಾರಣಕ್ಕೆ ಕೆಳಗೆ ಇಳಿಸಿ ಜಗಳ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಕೆಲ ಯುವಕರು ಜನನಿಯವರನ್ನು ಎಳೆದಾಡಿ ಮೊಬೈಲ್‌ ಫೋನ್‌ ಕಸಿದುಕೊಳ್ಳಲು ಯತ್ನಿಸಿದ್ದಾರೆ” ಎಂದು ಎಫ್‌ಐಆರ್‌ ಕಾಪಿಯಲ್ಲಿ ಉಲ್ಲೇಖಿಸಲಾಗಿದೆ.

“ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡುವುದಲ್ಲದೆ ನನ್ನ ಮೇಲೆ ಯುವಕರು ಹಲ್ಲೆ ನಡೆಸುತ್ತಿದ್ದವರಿಗೆ ಕಂಡಕ್ಟರ್ ಕುಮ್ಮಕ್ಕು ನೀಡಿದ್ದಾರೆ” ಎಂದು ವತ್ಸಲ ದೂರಿದ್ದು, ಅವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌‌ 109, 34, 504, 393, 354 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನನ್ನ ಮೊಬೈಲ್‌ನಲ್ಲಿ ಶುಲ್ಕ ಪಾವತಿ ರಸೀದಿಯ ಪ್ರತಿ ಇದೆ. ಆದರೂ ಕಂಡಕ್ಟರ್‌‌ ಪಾಸ್‌ ಕಿತ್ತುಕೊಂಡಿದ್ದಾರೆಂದು ಫೇಸ್‌ಬುಕ್‌ನಲ್ಲಿ ಜನನಿಯವರು ಲೈವ್‌ ಮಾಡಿರುವುದು ವೈರಲ್ ಆಗಿದೆ. ಅದರಲ್ಲಿ “ನನ್ನ ಪಾಸ್ ಯಾಕೆ ಕಿತ್ತುಕೊಂಡಿರಿ” ಎಂದು ವತ್ಸಲ ಪ್ರಶ್ನಿಸಿದ್ದಾರೆ. ಆಗ ಕಂಡಕ್ಟರ್ “ಮೊಬೈಲ್‌ ಫೋಟೋ ಪ್ರತಿಯನ್ನು ಸ್ವೀಕರಿಸಲಾಗುವುದಿಲ್ಲ” ಎಂದು ಹೇಳುತ್ತಾರೆ.


ಇದನ್ನೂ ಓದಿರಿ: ಸುಳ್ಳುಗಳಿಗೆ ಕುಖ್ಯಾತವಾಗಿರುವ ‘ಮೇಘ್ ಅಪ್ಡೇಟ್ಸ್’ ಚಕ್ರವರ್ತಿ ಸೂಲಿಬೆಲೆಯವರ ನೆಚ್ಚಿನ ಟ್ವಿಟ್ಟರ್‌ ಅಕೌಂಟ್‌!


“ಕಲರ್‌ ಜೆರಾಕ್ಸ್‌ ಕಾಪಿಯನ್ನು ಮೊಬೈಲ್‌‌ನಲ್ಲಿ ತೆಗೆದುಕೊಂಡು ಬಂದರೆ ಸಾಕು ಎನ್ನುತ್ತಾರೆ” ಎಂದು ಜನನಿ ತಿಳಿಸುತ್ತಾರೆ. ಬಸ್‌ ಸಿಬ್ಬಂದಿ ನಿರಾಕರಿಸುತ್ತಾರೆ. “ಇಷ್ಟು ಹೊತ್ತಲ್ಲಿ ಕೆಳಗೆ ಇಳಿಸುತ್ತೀರಲ್ಲ ಇದು ಸರಿಯೇ? ಏನಾದರೂ ಅನಾಹುತವಾದರೆ ಯಾರು ಹೊಣೆ?” ಎಂದು ಜನನಿ ಕೇಳುತ್ತಾರೆ. “ನೀನು ಯಾವ ಟೈಮ್‌ಗಾದರೂ ಬಾ ನನಗೇನು?” ಎಂದು ಕಂಡಕ್ಟರ್ ದಬಾಯಿಸುತ್ತಾರೆ.

ವತ್ಸಲ ಅವರ ಪ್ರಶ್ನೆಗಳಿಗೆ ಉತ್ತರ ನೀಡದ ಸಿಬ್ಬಂದಿ ಬಸ್‌ನಿಂದ ಇಳಿಸುವ ಯತ್ನ ಮಾಡಿದ್ದಾರೆ. ಆಗ ಬಸ್‌ ಮುಂದಕ್ಕೆ ಹೋಗಲು ಬಿಡದೆ ಜನನಿಯವರು ಪ್ರತಿಭಟಿಸಿದ್ದಾರೆ. ಕೆಲವು ಯುವಕರು ಕಂಡಕ್ಟರ್‌ ಪರ ವಾದಿಸುತ್ತಾ, ಜನನಿಯವರ ಮೇಲೆ ಜಗಳವಾಡಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಒಂದು ರಸೀದಿ ಕಾರಣಕ್ಕೆ ರಸ್ತೆ ಮಧ್ಯೆಯಲ್ಲಿ ಕೆಳಗಿಳಿಸಲು ಯತ್ನಿಸಿದ ಬಿಎಂಟಿಸಿ ಸಿಬ್ಬಂದಿಯ ನಡೆಯನ್ನು ಖಂಡಿಸಿ, ವಿಲ್ಸನ್‌ ಗಾರ್ಡನ್ ಪೊಲೀಸ್‌ ಠಾಣೆಯಲ್ಲಿ ಜನನಿ ವತ್ಸಲ ಅವರು ಪ್ರಕರಣ ದಾಖಲಿಸಿದ್ದಾರೆ. ಜನನಿಯವರ ಲೈವ್‌ ನೋಡಿ, ಜನನಿಯವರ ಸ್ನೇಹಿತರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಾಗುವವರೆಗೂ ಸಹಾಯ ಮಾಡಿದ್ದಾರೆ ಎಂದು ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿರಿ: ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ


ಪ್ರತಿ ದೂರು ದಾಖಲು

ನಂತರ ಕಂಡಕ್ಟರ್ ಮನೋಜ್‌ರವರು ನನ್ನ ಮೇಲೆ ಹಲ್ಲೆಯಾಗಿದೆ ಎಂದು ಪ್ರತಿದೂರು ದಾಖಲಿಸಿದ್ದಾರೆ. ಅದರ ಆಧಾರದಲ್ಲಿ ಜನನಿಯವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಮಠಪತಿ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿದಾಗ, “ಕೌಂಟರ್‌ ಕೇಸ್‌ ದಾಖಲಾಗಿರುವುದು” ಖಚಿತವಾಗಿದೆ ಎಂದರು. “ಕೌಂಟರ್‌ ಕೇಸ್‌ಗೆ ಆಧಾರವೇನು?” ಎಂದು ಕೇಳಿದ್ದಕ್ಕೆ ಉತ್ತರಿಸಲು ನಿರಾಕರಿಸಿದರು.

ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನನಿಯವರು, “ವಿಜಯ ಕರ್ನಾಟಕ ಪತ್ರಿಕಾ ವರದಿ ಸುಳ್ಳುಗಳಿಂದ ಕೂಡಿದೆ. ನಾನು ಜೋರು ದನಿಯಲ್ಲಿ ಪ್ರಶ್ನಿಸಿದ್ದು ನಿಜ. ಇಡೀ ಘಟನೆ ಫೇಸ್‌ಬುಕ್‌ನಲ್ಲಿ ಲೈವ್ ಆಗಿದೆ. ನಾನು ಕರೆ ಮಾಡಿ ನನ್ನ ಸ್ನೇಹಿತರನ್ನು ಕರೆಸಿಕೊಂಡಿರುವುದಾಗಿ ಪತ್ರಿಕೆಯಲ್ಲಿ ಆರೋಪಿಸಲಾಗಿದೆ. ನನ್ನ ಸ್ನೇಹಿತರು ನನ್ನ ಲೈವ್ ನೋಡಿ ಸ್ಥಳಕ್ಕೆ ಧಾವಿಸಿದರೆ ಹೊರತು ನಾನು ಯಾರಿಗೂ ಫೋನ್ ಮಾಡಿಲ್ಲ. ಇಡೀ ಘಟನೆ ಅರ್ಧ ಗಂಟೆಗೂ ಹೆಚ್ಚು ಸಮಯ ಲೈವ್ ಆಗುತ್ತಿದ್ದಾಗ ನಾನು ಹೇಗೆ ಫೋನ್ ಮಾಡಲು ಸಾಧ್ಯ? ಇನ್ನು ನಾನು ಯಾರಿಗೂ ಹಲ್ಲೆ ನಡೆಸಿಲ್ಲ. ಬೇಕಾದರೆ ಲೈವ್ ಪೂರ್ತಿ ನೋಡಿ. ಆದರೆ ಸುಳ್ಳು ವರದಿ ಮಾಡಲಾಗಿದೆ” ಎಂದರು.

ಒಂದು ಬಟ್ಟೆ ಅಭಿಯಾನದ ಕರ್ತೃ ಜನನಿ

ಜನನಿ ವತ್ಸಲ ಅವರು ಮೊದಲಿನಿಂದಲೂ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರೂ ಹೌದು. ಈ ಹಿಂದೆಯೂ ಹಲವು ದೌರ್ಜನ್ಯಗಳನ್ನು ಪ್ರಶ್ನಿಸಿ ವಿಡಿಯೊಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಜನನಿಯವರು ಕಳೆದ ಎರಡು ವರ್ಷಗಳಿಂದ ಮಾಡುತ್ತಿರುವ ಸಾಮಾಜಿಕ ಸೇವೆಯು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಬಡವರಿಗಾಗಿ “ಒಂದು ಬಟ್ಟೆ ಅಭಿಯಾನ, ಮತ್ತು ಒಂದು ಜೊತೆ ಚಪ್ಪಲಿ ಅಭಿಯಾನ”ವನ್ನು ನಿರಂತವಾಗಿ ಜನನಿ ನಡೆಸುತ್ತಿದ್ದಾರೆ. ಈಗ ಮನೆ ಇಲ್ಲದೆ ರಸ್ತೆ ಬದಿ ವಾಸಿಸುವವರಿಗೆ `ಒಂದು ಹೊದಿಗೆ ನೀಡುವ ಅಭಿಯಾನ’ ಸಹ ಮಾಡುತ್ತಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

“ಹೆಣ್ಣು ಮಕ್ಕಳನ್ನು ಈ ಸಣ್ಣಪುಟ್ಟ ಕಾರಣ ನೀಡಿ ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದರೆ ಏನಾದರೂ ಅನಾಹುತವಾದರೆ ಯಾರು ಹೊಣೆಯಾಗುತ್ತಾರೆ?” ಎಂಬ ಪ್ರಶ್ನೆಯಲ್ಲಿ ಅರ್ಥವಿದೆ. ಈ ನಿಟ್ಟಿನಲ್ಲಿ ದೆಹಲಿ, ತಮಿಳುನಾಡು, ತೆಲಂಗಾಣ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿರ್ಧಾರವನ್ನು ನಮ್ಮ ರಾಜ್ಯ ಸರ್ಕಾರವೂ ತೆಗೆದುಕೊಳ್ಳುವುದು ಸೂಕ್ತ. ದೆಹಲಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇವೆ ಇದೆ. ಇನ್ನು ತೆಲಂಗಾಣ ಸರ್ಕಾರ, “ಸಂಜೆ ಏಳು ಗಂಟೆಯ ಬಳಿಕ ಮಹಿಳೆಯರು ಕೇಳಿದ ಕಡೆ ಹತ್ತಿಸಿಕೊಳ್ಳಬೇಕು ಮತ್ತು ಇಳಿಸಬೇಕು” ಎಂದು ತಿಳಿಸಿದೆ. ಇಂತಹ ನಿರ್ಧಾರಗಳನ್ನು ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡರೆ ಮಹಿಳೆಯರಿಗೆ ಬಹಳ ಅನುಕೂಲವಾಗುತ್ತದೆ.


ಇದನ್ನೂ ಓದಿರಿ: ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...