Homeಕರ್ನಾಟಕವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು

ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು

ಈ ಇಡೀ ಘಟನೆಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿದ್ದು ವೈರಲ್ ಆಗಿದೆ. ಜೊತೆಗೆ ದೂರು, ಪ್ರತಿದೂರಿನ ಅನ್ವಯ ಎರಡು ಪ್ರಕರಣಗಳು ದಾಖಲಾಗಿವೆ.

- Advertisement -
- Advertisement -

ಪಾಸ್ ಇದ್ದರೂ ಸಹ ಶುಲ್ಕ ಪಾವತಿ ರಸೀದಿ ಜೆರಾಕ್ಸ್‌ ಪ್ರತಿ ಇಲ್ಲವೆಂಬ ಕಾರಣವೊಡ್ಡಿ ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ನಂತರ ಕಂಡಕ್ಟರ್‌ ನೀಡಿದ ದೂರಿನ ಆಧಾರದಲ್ಲಿ ವಿದ್ಯಾರ್ಥಿನಿ ಮೇಲೂ ಸಹ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿದ್ಯಾರ್ಥಿನಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಜನನಿ ವತ್ಸಲ ಅವರು ಡಿ.3ರಂದು ರಾತ್ರಿ ಸುಮಾರು 9.30 ವೇಳೆಯಲ್ಲಿ ಬೆಂಗಳೂರಿನ ಕಾರ್ಪೋರೇಷನ್‌ ಸರ್ಕಲ್‌ನಿಂದ ಬಿಎಂಟಿಸಿ ಬಸ್‌‌ನಲ್ಲಿ (ಕೆಎ-57-ಎಫ್‌‌-3447) ಬೊಮ್ಮಸಂದ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

“ಶಾಂತಿನಗರದ ಬಸ್ ನಿಲ್ದಾಣದ ಬಳಿ ನಿರ್ವಾಹಕರಾದ ಮನೋಜ್‌ ಅವರು ವಿದ್ಯಾರ್ಥಿನಿಯ ಬಸ್ ಪಾಸ್‌ ಕಿತ್ತುಕೊಂಡು, ಶುಲ್ಕ ರಸೀದಿ ಇಲ್ಲದ ಕಾರಣಕ್ಕೆ ಕೆಳಗೆ ಇಳಿಸಿ ಜಗಳ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಕೆಲ ಯುವಕರು ಜನನಿಯವರನ್ನು ಎಳೆದಾಡಿ ಮೊಬೈಲ್‌ ಫೋನ್‌ ಕಸಿದುಕೊಳ್ಳಲು ಯತ್ನಿಸಿದ್ದಾರೆ” ಎಂದು ಎಫ್‌ಐಆರ್‌ ಕಾಪಿಯಲ್ಲಿ ಉಲ್ಲೇಖಿಸಲಾಗಿದೆ.

“ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡುವುದಲ್ಲದೆ ನನ್ನ ಮೇಲೆ ಯುವಕರು ಹಲ್ಲೆ ನಡೆಸುತ್ತಿದ್ದವರಿಗೆ ಕಂಡಕ್ಟರ್ ಕುಮ್ಮಕ್ಕು ನೀಡಿದ್ದಾರೆ” ಎಂದು ವತ್ಸಲ ದೂರಿದ್ದು, ಅವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌‌ 109, 34, 504, 393, 354 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನನ್ನ ಮೊಬೈಲ್‌ನಲ್ಲಿ ಶುಲ್ಕ ಪಾವತಿ ರಸೀದಿಯ ಪ್ರತಿ ಇದೆ. ಆದರೂ ಕಂಡಕ್ಟರ್‌‌ ಪಾಸ್‌ ಕಿತ್ತುಕೊಂಡಿದ್ದಾರೆಂದು ಫೇಸ್‌ಬುಕ್‌ನಲ್ಲಿ ಜನನಿಯವರು ಲೈವ್‌ ಮಾಡಿರುವುದು ವೈರಲ್ ಆಗಿದೆ. ಅದರಲ್ಲಿ “ನನ್ನ ಪಾಸ್ ಯಾಕೆ ಕಿತ್ತುಕೊಂಡಿರಿ” ಎಂದು ವತ್ಸಲ ಪ್ರಶ್ನಿಸಿದ್ದಾರೆ. ಆಗ ಕಂಡಕ್ಟರ್ “ಮೊಬೈಲ್‌ ಫೋಟೋ ಪ್ರತಿಯನ್ನು ಸ್ವೀಕರಿಸಲಾಗುವುದಿಲ್ಲ” ಎಂದು ಹೇಳುತ್ತಾರೆ.


ಇದನ್ನೂ ಓದಿರಿ: ಸುಳ್ಳುಗಳಿಗೆ ಕುಖ್ಯಾತವಾಗಿರುವ ‘ಮೇಘ್ ಅಪ್ಡೇಟ್ಸ್’ ಚಕ್ರವರ್ತಿ ಸೂಲಿಬೆಲೆಯವರ ನೆಚ್ಚಿನ ಟ್ವಿಟ್ಟರ್‌ ಅಕೌಂಟ್‌!


“ಕಲರ್‌ ಜೆರಾಕ್ಸ್‌ ಕಾಪಿಯನ್ನು ಮೊಬೈಲ್‌‌ನಲ್ಲಿ ತೆಗೆದುಕೊಂಡು ಬಂದರೆ ಸಾಕು ಎನ್ನುತ್ತಾರೆ” ಎಂದು ಜನನಿ ತಿಳಿಸುತ್ತಾರೆ. ಬಸ್‌ ಸಿಬ್ಬಂದಿ ನಿರಾಕರಿಸುತ್ತಾರೆ. “ಇಷ್ಟು ಹೊತ್ತಲ್ಲಿ ಕೆಳಗೆ ಇಳಿಸುತ್ತೀರಲ್ಲ ಇದು ಸರಿಯೇ? ಏನಾದರೂ ಅನಾಹುತವಾದರೆ ಯಾರು ಹೊಣೆ?” ಎಂದು ಜನನಿ ಕೇಳುತ್ತಾರೆ. “ನೀನು ಯಾವ ಟೈಮ್‌ಗಾದರೂ ಬಾ ನನಗೇನು?” ಎಂದು ಕಂಡಕ್ಟರ್ ದಬಾಯಿಸುತ್ತಾರೆ.

ವತ್ಸಲ ಅವರ ಪ್ರಶ್ನೆಗಳಿಗೆ ಉತ್ತರ ನೀಡದ ಸಿಬ್ಬಂದಿ ಬಸ್‌ನಿಂದ ಇಳಿಸುವ ಯತ್ನ ಮಾಡಿದ್ದಾರೆ. ಆಗ ಬಸ್‌ ಮುಂದಕ್ಕೆ ಹೋಗಲು ಬಿಡದೆ ಜನನಿಯವರು ಪ್ರತಿಭಟಿಸಿದ್ದಾರೆ. ಕೆಲವು ಯುವಕರು ಕಂಡಕ್ಟರ್‌ ಪರ ವಾದಿಸುತ್ತಾ, ಜನನಿಯವರ ಮೇಲೆ ಜಗಳವಾಡಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಒಂದು ರಸೀದಿ ಕಾರಣಕ್ಕೆ ರಸ್ತೆ ಮಧ್ಯೆಯಲ್ಲಿ ಕೆಳಗಿಳಿಸಲು ಯತ್ನಿಸಿದ ಬಿಎಂಟಿಸಿ ಸಿಬ್ಬಂದಿಯ ನಡೆಯನ್ನು ಖಂಡಿಸಿ, ವಿಲ್ಸನ್‌ ಗಾರ್ಡನ್ ಪೊಲೀಸ್‌ ಠಾಣೆಯಲ್ಲಿ ಜನನಿ ವತ್ಸಲ ಅವರು ಪ್ರಕರಣ ದಾಖಲಿಸಿದ್ದಾರೆ. ಜನನಿಯವರ ಲೈವ್‌ ನೋಡಿ, ಜನನಿಯವರ ಸ್ನೇಹಿತರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಾಗುವವರೆಗೂ ಸಹಾಯ ಮಾಡಿದ್ದಾರೆ ಎಂದು ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿರಿ: ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ


ಪ್ರತಿ ದೂರು ದಾಖಲು

ನಂತರ ಕಂಡಕ್ಟರ್ ಮನೋಜ್‌ರವರು ನನ್ನ ಮೇಲೆ ಹಲ್ಲೆಯಾಗಿದೆ ಎಂದು ಪ್ರತಿದೂರು ದಾಖಲಿಸಿದ್ದಾರೆ. ಅದರ ಆಧಾರದಲ್ಲಿ ಜನನಿಯವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಮಠಪತಿ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿದಾಗ, “ಕೌಂಟರ್‌ ಕೇಸ್‌ ದಾಖಲಾಗಿರುವುದು” ಖಚಿತವಾಗಿದೆ ಎಂದರು. “ಕೌಂಟರ್‌ ಕೇಸ್‌ಗೆ ಆಧಾರವೇನು?” ಎಂದು ಕೇಳಿದ್ದಕ್ಕೆ ಉತ್ತರಿಸಲು ನಿರಾಕರಿಸಿದರು.

ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನನಿಯವರು, “ವಿಜಯ ಕರ್ನಾಟಕ ಪತ್ರಿಕಾ ವರದಿ ಸುಳ್ಳುಗಳಿಂದ ಕೂಡಿದೆ. ನಾನು ಜೋರು ದನಿಯಲ್ಲಿ ಪ್ರಶ್ನಿಸಿದ್ದು ನಿಜ. ಇಡೀ ಘಟನೆ ಫೇಸ್‌ಬುಕ್‌ನಲ್ಲಿ ಲೈವ್ ಆಗಿದೆ. ನಾನು ಕರೆ ಮಾಡಿ ನನ್ನ ಸ್ನೇಹಿತರನ್ನು ಕರೆಸಿಕೊಂಡಿರುವುದಾಗಿ ಪತ್ರಿಕೆಯಲ್ಲಿ ಆರೋಪಿಸಲಾಗಿದೆ. ನನ್ನ ಸ್ನೇಹಿತರು ನನ್ನ ಲೈವ್ ನೋಡಿ ಸ್ಥಳಕ್ಕೆ ಧಾವಿಸಿದರೆ ಹೊರತು ನಾನು ಯಾರಿಗೂ ಫೋನ್ ಮಾಡಿಲ್ಲ. ಇಡೀ ಘಟನೆ ಅರ್ಧ ಗಂಟೆಗೂ ಹೆಚ್ಚು ಸಮಯ ಲೈವ್ ಆಗುತ್ತಿದ್ದಾಗ ನಾನು ಹೇಗೆ ಫೋನ್ ಮಾಡಲು ಸಾಧ್ಯ? ಇನ್ನು ನಾನು ಯಾರಿಗೂ ಹಲ್ಲೆ ನಡೆಸಿಲ್ಲ. ಬೇಕಾದರೆ ಲೈವ್ ಪೂರ್ತಿ ನೋಡಿ. ಆದರೆ ಸುಳ್ಳು ವರದಿ ಮಾಡಲಾಗಿದೆ” ಎಂದರು.

ಒಂದು ಬಟ್ಟೆ ಅಭಿಯಾನದ ಕರ್ತೃ ಜನನಿ

ಜನನಿ ವತ್ಸಲ ಅವರು ಮೊದಲಿನಿಂದಲೂ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರೂ ಹೌದು. ಈ ಹಿಂದೆಯೂ ಹಲವು ದೌರ್ಜನ್ಯಗಳನ್ನು ಪ್ರಶ್ನಿಸಿ ವಿಡಿಯೊಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಜನನಿಯವರು ಕಳೆದ ಎರಡು ವರ್ಷಗಳಿಂದ ಮಾಡುತ್ತಿರುವ ಸಾಮಾಜಿಕ ಸೇವೆಯು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಬಡವರಿಗಾಗಿ “ಒಂದು ಬಟ್ಟೆ ಅಭಿಯಾನ, ಮತ್ತು ಒಂದು ಜೊತೆ ಚಪ್ಪಲಿ ಅಭಿಯಾನ”ವನ್ನು ನಿರಂತವಾಗಿ ಜನನಿ ನಡೆಸುತ್ತಿದ್ದಾರೆ. ಈಗ ಮನೆ ಇಲ್ಲದೆ ರಸ್ತೆ ಬದಿ ವಾಸಿಸುವವರಿಗೆ `ಒಂದು ಹೊದಿಗೆ ನೀಡುವ ಅಭಿಯಾನ’ ಸಹ ಮಾಡುತ್ತಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

“ಹೆಣ್ಣು ಮಕ್ಕಳನ್ನು ಈ ಸಣ್ಣಪುಟ್ಟ ಕಾರಣ ನೀಡಿ ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದರೆ ಏನಾದರೂ ಅನಾಹುತವಾದರೆ ಯಾರು ಹೊಣೆಯಾಗುತ್ತಾರೆ?” ಎಂಬ ಪ್ರಶ್ನೆಯಲ್ಲಿ ಅರ್ಥವಿದೆ. ಈ ನಿಟ್ಟಿನಲ್ಲಿ ದೆಹಲಿ, ತಮಿಳುನಾಡು, ತೆಲಂಗಾಣ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿರ್ಧಾರವನ್ನು ನಮ್ಮ ರಾಜ್ಯ ಸರ್ಕಾರವೂ ತೆಗೆದುಕೊಳ್ಳುವುದು ಸೂಕ್ತ. ದೆಹಲಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇವೆ ಇದೆ. ಇನ್ನು ತೆಲಂಗಾಣ ಸರ್ಕಾರ, “ಸಂಜೆ ಏಳು ಗಂಟೆಯ ಬಳಿಕ ಮಹಿಳೆಯರು ಕೇಳಿದ ಕಡೆ ಹತ್ತಿಸಿಕೊಳ್ಳಬೇಕು ಮತ್ತು ಇಳಿಸಬೇಕು” ಎಂದು ತಿಳಿಸಿದೆ. ಇಂತಹ ನಿರ್ಧಾರಗಳನ್ನು ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡರೆ ಮಹಿಳೆಯರಿಗೆ ಬಹಳ ಅನುಕೂಲವಾಗುತ್ತದೆ.


ಇದನ್ನೂ ಓದಿರಿ: ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...