Homeಕರ್ನಾಟಕವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು

ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು

ಈ ಇಡೀ ಘಟನೆಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿದ್ದು ವೈರಲ್ ಆಗಿದೆ. ಜೊತೆಗೆ ದೂರು, ಪ್ರತಿದೂರಿನ ಅನ್ವಯ ಎರಡು ಪ್ರಕರಣಗಳು ದಾಖಲಾಗಿವೆ.

- Advertisement -
- Advertisement -

ಪಾಸ್ ಇದ್ದರೂ ಸಹ ಶುಲ್ಕ ಪಾವತಿ ರಸೀದಿ ಜೆರಾಕ್ಸ್‌ ಪ್ರತಿ ಇಲ್ಲವೆಂಬ ಕಾರಣವೊಡ್ಡಿ ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ನಂತರ ಕಂಡಕ್ಟರ್‌ ನೀಡಿದ ದೂರಿನ ಆಧಾರದಲ್ಲಿ ವಿದ್ಯಾರ್ಥಿನಿ ಮೇಲೂ ಸಹ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿದ್ಯಾರ್ಥಿನಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಜನನಿ ವತ್ಸಲ ಅವರು ಡಿ.3ರಂದು ರಾತ್ರಿ ಸುಮಾರು 9.30 ವೇಳೆಯಲ್ಲಿ ಬೆಂಗಳೂರಿನ ಕಾರ್ಪೋರೇಷನ್‌ ಸರ್ಕಲ್‌ನಿಂದ ಬಿಎಂಟಿಸಿ ಬಸ್‌‌ನಲ್ಲಿ (ಕೆಎ-57-ಎಫ್‌‌-3447) ಬೊಮ್ಮಸಂದ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

“ಶಾಂತಿನಗರದ ಬಸ್ ನಿಲ್ದಾಣದ ಬಳಿ ನಿರ್ವಾಹಕರಾದ ಮನೋಜ್‌ ಅವರು ವಿದ್ಯಾರ್ಥಿನಿಯ ಬಸ್ ಪಾಸ್‌ ಕಿತ್ತುಕೊಂಡು, ಶುಲ್ಕ ರಸೀದಿ ಇಲ್ಲದ ಕಾರಣಕ್ಕೆ ಕೆಳಗೆ ಇಳಿಸಿ ಜಗಳ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಕೆಲ ಯುವಕರು ಜನನಿಯವರನ್ನು ಎಳೆದಾಡಿ ಮೊಬೈಲ್‌ ಫೋನ್‌ ಕಸಿದುಕೊಳ್ಳಲು ಯತ್ನಿಸಿದ್ದಾರೆ” ಎಂದು ಎಫ್‌ಐಆರ್‌ ಕಾಪಿಯಲ್ಲಿ ಉಲ್ಲೇಖಿಸಲಾಗಿದೆ.

“ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡುವುದಲ್ಲದೆ ನನ್ನ ಮೇಲೆ ಯುವಕರು ಹಲ್ಲೆ ನಡೆಸುತ್ತಿದ್ದವರಿಗೆ ಕಂಡಕ್ಟರ್ ಕುಮ್ಮಕ್ಕು ನೀಡಿದ್ದಾರೆ” ಎಂದು ವತ್ಸಲ ದೂರಿದ್ದು, ಅವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌‌ 109, 34, 504, 393, 354 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನನ್ನ ಮೊಬೈಲ್‌ನಲ್ಲಿ ಶುಲ್ಕ ಪಾವತಿ ರಸೀದಿಯ ಪ್ರತಿ ಇದೆ. ಆದರೂ ಕಂಡಕ್ಟರ್‌‌ ಪಾಸ್‌ ಕಿತ್ತುಕೊಂಡಿದ್ದಾರೆಂದು ಫೇಸ್‌ಬುಕ್‌ನಲ್ಲಿ ಜನನಿಯವರು ಲೈವ್‌ ಮಾಡಿರುವುದು ವೈರಲ್ ಆಗಿದೆ. ಅದರಲ್ಲಿ “ನನ್ನ ಪಾಸ್ ಯಾಕೆ ಕಿತ್ತುಕೊಂಡಿರಿ” ಎಂದು ವತ್ಸಲ ಪ್ರಶ್ನಿಸಿದ್ದಾರೆ. ಆಗ ಕಂಡಕ್ಟರ್ “ಮೊಬೈಲ್‌ ಫೋಟೋ ಪ್ರತಿಯನ್ನು ಸ್ವೀಕರಿಸಲಾಗುವುದಿಲ್ಲ” ಎಂದು ಹೇಳುತ್ತಾರೆ.


ಇದನ್ನೂ ಓದಿರಿ: ಸುಳ್ಳುಗಳಿಗೆ ಕುಖ್ಯಾತವಾಗಿರುವ ‘ಮೇಘ್ ಅಪ್ಡೇಟ್ಸ್’ ಚಕ್ರವರ್ತಿ ಸೂಲಿಬೆಲೆಯವರ ನೆಚ್ಚಿನ ಟ್ವಿಟ್ಟರ್‌ ಅಕೌಂಟ್‌!


“ಕಲರ್‌ ಜೆರಾಕ್ಸ್‌ ಕಾಪಿಯನ್ನು ಮೊಬೈಲ್‌‌ನಲ್ಲಿ ತೆಗೆದುಕೊಂಡು ಬಂದರೆ ಸಾಕು ಎನ್ನುತ್ತಾರೆ” ಎಂದು ಜನನಿ ತಿಳಿಸುತ್ತಾರೆ. ಬಸ್‌ ಸಿಬ್ಬಂದಿ ನಿರಾಕರಿಸುತ್ತಾರೆ. “ಇಷ್ಟು ಹೊತ್ತಲ್ಲಿ ಕೆಳಗೆ ಇಳಿಸುತ್ತೀರಲ್ಲ ಇದು ಸರಿಯೇ? ಏನಾದರೂ ಅನಾಹುತವಾದರೆ ಯಾರು ಹೊಣೆ?” ಎಂದು ಜನನಿ ಕೇಳುತ್ತಾರೆ. “ನೀನು ಯಾವ ಟೈಮ್‌ಗಾದರೂ ಬಾ ನನಗೇನು?” ಎಂದು ಕಂಡಕ್ಟರ್ ದಬಾಯಿಸುತ್ತಾರೆ.

ವತ್ಸಲ ಅವರ ಪ್ರಶ್ನೆಗಳಿಗೆ ಉತ್ತರ ನೀಡದ ಸಿಬ್ಬಂದಿ ಬಸ್‌ನಿಂದ ಇಳಿಸುವ ಯತ್ನ ಮಾಡಿದ್ದಾರೆ. ಆಗ ಬಸ್‌ ಮುಂದಕ್ಕೆ ಹೋಗಲು ಬಿಡದೆ ಜನನಿಯವರು ಪ್ರತಿಭಟಿಸಿದ್ದಾರೆ. ಕೆಲವು ಯುವಕರು ಕಂಡಕ್ಟರ್‌ ಪರ ವಾದಿಸುತ್ತಾ, ಜನನಿಯವರ ಮೇಲೆ ಜಗಳವಾಡಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಒಂದು ರಸೀದಿ ಕಾರಣಕ್ಕೆ ರಸ್ತೆ ಮಧ್ಯೆಯಲ್ಲಿ ಕೆಳಗಿಳಿಸಲು ಯತ್ನಿಸಿದ ಬಿಎಂಟಿಸಿ ಸಿಬ್ಬಂದಿಯ ನಡೆಯನ್ನು ಖಂಡಿಸಿ, ವಿಲ್ಸನ್‌ ಗಾರ್ಡನ್ ಪೊಲೀಸ್‌ ಠಾಣೆಯಲ್ಲಿ ಜನನಿ ವತ್ಸಲ ಅವರು ಪ್ರಕರಣ ದಾಖಲಿಸಿದ್ದಾರೆ. ಜನನಿಯವರ ಲೈವ್‌ ನೋಡಿ, ಜನನಿಯವರ ಸ್ನೇಹಿತರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಾಗುವವರೆಗೂ ಸಹಾಯ ಮಾಡಿದ್ದಾರೆ ಎಂದು ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿರಿ: ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ


ಪ್ರತಿ ದೂರು ದಾಖಲು

ನಂತರ ಕಂಡಕ್ಟರ್ ಮನೋಜ್‌ರವರು ನನ್ನ ಮೇಲೆ ಹಲ್ಲೆಯಾಗಿದೆ ಎಂದು ಪ್ರತಿದೂರು ದಾಖಲಿಸಿದ್ದಾರೆ. ಅದರ ಆಧಾರದಲ್ಲಿ ಜನನಿಯವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಮಠಪತಿ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿದಾಗ, “ಕೌಂಟರ್‌ ಕೇಸ್‌ ದಾಖಲಾಗಿರುವುದು” ಖಚಿತವಾಗಿದೆ ಎಂದರು. “ಕೌಂಟರ್‌ ಕೇಸ್‌ಗೆ ಆಧಾರವೇನು?” ಎಂದು ಕೇಳಿದ್ದಕ್ಕೆ ಉತ್ತರಿಸಲು ನಿರಾಕರಿಸಿದರು.

ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನನಿಯವರು, “ವಿಜಯ ಕರ್ನಾಟಕ ಪತ್ರಿಕಾ ವರದಿ ಸುಳ್ಳುಗಳಿಂದ ಕೂಡಿದೆ. ನಾನು ಜೋರು ದನಿಯಲ್ಲಿ ಪ್ರಶ್ನಿಸಿದ್ದು ನಿಜ. ಇಡೀ ಘಟನೆ ಫೇಸ್‌ಬುಕ್‌ನಲ್ಲಿ ಲೈವ್ ಆಗಿದೆ. ನಾನು ಕರೆ ಮಾಡಿ ನನ್ನ ಸ್ನೇಹಿತರನ್ನು ಕರೆಸಿಕೊಂಡಿರುವುದಾಗಿ ಪತ್ರಿಕೆಯಲ್ಲಿ ಆರೋಪಿಸಲಾಗಿದೆ. ನನ್ನ ಸ್ನೇಹಿತರು ನನ್ನ ಲೈವ್ ನೋಡಿ ಸ್ಥಳಕ್ಕೆ ಧಾವಿಸಿದರೆ ಹೊರತು ನಾನು ಯಾರಿಗೂ ಫೋನ್ ಮಾಡಿಲ್ಲ. ಇಡೀ ಘಟನೆ ಅರ್ಧ ಗಂಟೆಗೂ ಹೆಚ್ಚು ಸಮಯ ಲೈವ್ ಆಗುತ್ತಿದ್ದಾಗ ನಾನು ಹೇಗೆ ಫೋನ್ ಮಾಡಲು ಸಾಧ್ಯ? ಇನ್ನು ನಾನು ಯಾರಿಗೂ ಹಲ್ಲೆ ನಡೆಸಿಲ್ಲ. ಬೇಕಾದರೆ ಲೈವ್ ಪೂರ್ತಿ ನೋಡಿ. ಆದರೆ ಸುಳ್ಳು ವರದಿ ಮಾಡಲಾಗಿದೆ” ಎಂದರು.

ಒಂದು ಬಟ್ಟೆ ಅಭಿಯಾನದ ಕರ್ತೃ ಜನನಿ

ಜನನಿ ವತ್ಸಲ ಅವರು ಮೊದಲಿನಿಂದಲೂ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರೂ ಹೌದು. ಈ ಹಿಂದೆಯೂ ಹಲವು ದೌರ್ಜನ್ಯಗಳನ್ನು ಪ್ರಶ್ನಿಸಿ ವಿಡಿಯೊಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಜನನಿಯವರು ಕಳೆದ ಎರಡು ವರ್ಷಗಳಿಂದ ಮಾಡುತ್ತಿರುವ ಸಾಮಾಜಿಕ ಸೇವೆಯು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಬಡವರಿಗಾಗಿ “ಒಂದು ಬಟ್ಟೆ ಅಭಿಯಾನ, ಮತ್ತು ಒಂದು ಜೊತೆ ಚಪ್ಪಲಿ ಅಭಿಯಾನ”ವನ್ನು ನಿರಂತವಾಗಿ ಜನನಿ ನಡೆಸುತ್ತಿದ್ದಾರೆ. ಈಗ ಮನೆ ಇಲ್ಲದೆ ರಸ್ತೆ ಬದಿ ವಾಸಿಸುವವರಿಗೆ `ಒಂದು ಹೊದಿಗೆ ನೀಡುವ ಅಭಿಯಾನ’ ಸಹ ಮಾಡುತ್ತಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

“ಹೆಣ್ಣು ಮಕ್ಕಳನ್ನು ಈ ಸಣ್ಣಪುಟ್ಟ ಕಾರಣ ನೀಡಿ ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದರೆ ಏನಾದರೂ ಅನಾಹುತವಾದರೆ ಯಾರು ಹೊಣೆಯಾಗುತ್ತಾರೆ?” ಎಂಬ ಪ್ರಶ್ನೆಯಲ್ಲಿ ಅರ್ಥವಿದೆ. ಈ ನಿಟ್ಟಿನಲ್ಲಿ ದೆಹಲಿ, ತಮಿಳುನಾಡು, ತೆಲಂಗಾಣ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿರ್ಧಾರವನ್ನು ನಮ್ಮ ರಾಜ್ಯ ಸರ್ಕಾರವೂ ತೆಗೆದುಕೊಳ್ಳುವುದು ಸೂಕ್ತ. ದೆಹಲಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇವೆ ಇದೆ. ಇನ್ನು ತೆಲಂಗಾಣ ಸರ್ಕಾರ, “ಸಂಜೆ ಏಳು ಗಂಟೆಯ ಬಳಿಕ ಮಹಿಳೆಯರು ಕೇಳಿದ ಕಡೆ ಹತ್ತಿಸಿಕೊಳ್ಳಬೇಕು ಮತ್ತು ಇಳಿಸಬೇಕು” ಎಂದು ತಿಳಿಸಿದೆ. ಇಂತಹ ನಿರ್ಧಾರಗಳನ್ನು ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡರೆ ಮಹಿಳೆಯರಿಗೆ ಬಹಳ ಅನುಕೂಲವಾಗುತ್ತದೆ.


ಇದನ್ನೂ ಓದಿರಿ: ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...