Homeಕರ್ನಾಟಕವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು

ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು

ಈ ಇಡೀ ಘಟನೆಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿದ್ದು ವೈರಲ್ ಆಗಿದೆ. ಜೊತೆಗೆ ದೂರು, ಪ್ರತಿದೂರಿನ ಅನ್ವಯ ಎರಡು ಪ್ರಕರಣಗಳು ದಾಖಲಾಗಿವೆ.

- Advertisement -
- Advertisement -

ಪಾಸ್ ಇದ್ದರೂ ಸಹ ಶುಲ್ಕ ಪಾವತಿ ರಸೀದಿ ಜೆರಾಕ್ಸ್‌ ಪ್ರತಿ ಇಲ್ಲವೆಂಬ ಕಾರಣವೊಡ್ಡಿ ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ನಂತರ ಕಂಡಕ್ಟರ್‌ ನೀಡಿದ ದೂರಿನ ಆಧಾರದಲ್ಲಿ ವಿದ್ಯಾರ್ಥಿನಿ ಮೇಲೂ ಸಹ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿದ್ಯಾರ್ಥಿನಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಜನನಿ ವತ್ಸಲ ಅವರು ಡಿ.3ರಂದು ರಾತ್ರಿ ಸುಮಾರು 9.30 ವೇಳೆಯಲ್ಲಿ ಬೆಂಗಳೂರಿನ ಕಾರ್ಪೋರೇಷನ್‌ ಸರ್ಕಲ್‌ನಿಂದ ಬಿಎಂಟಿಸಿ ಬಸ್‌‌ನಲ್ಲಿ (ಕೆಎ-57-ಎಫ್‌‌-3447) ಬೊಮ್ಮಸಂದ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

“ಶಾಂತಿನಗರದ ಬಸ್ ನಿಲ್ದಾಣದ ಬಳಿ ನಿರ್ವಾಹಕರಾದ ಮನೋಜ್‌ ಅವರು ವಿದ್ಯಾರ್ಥಿನಿಯ ಬಸ್ ಪಾಸ್‌ ಕಿತ್ತುಕೊಂಡು, ಶುಲ್ಕ ರಸೀದಿ ಇಲ್ಲದ ಕಾರಣಕ್ಕೆ ಕೆಳಗೆ ಇಳಿಸಿ ಜಗಳ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಕೆಲ ಯುವಕರು ಜನನಿಯವರನ್ನು ಎಳೆದಾಡಿ ಮೊಬೈಲ್‌ ಫೋನ್‌ ಕಸಿದುಕೊಳ್ಳಲು ಯತ್ನಿಸಿದ್ದಾರೆ” ಎಂದು ಎಫ್‌ಐಆರ್‌ ಕಾಪಿಯಲ್ಲಿ ಉಲ್ಲೇಖಿಸಲಾಗಿದೆ.

“ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡುವುದಲ್ಲದೆ ನನ್ನ ಮೇಲೆ ಯುವಕರು ಹಲ್ಲೆ ನಡೆಸುತ್ತಿದ್ದವರಿಗೆ ಕಂಡಕ್ಟರ್ ಕುಮ್ಮಕ್ಕು ನೀಡಿದ್ದಾರೆ” ಎಂದು ವತ್ಸಲ ದೂರಿದ್ದು, ಅವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌‌ 109, 34, 504, 393, 354 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನನ್ನ ಮೊಬೈಲ್‌ನಲ್ಲಿ ಶುಲ್ಕ ಪಾವತಿ ರಸೀದಿಯ ಪ್ರತಿ ಇದೆ. ಆದರೂ ಕಂಡಕ್ಟರ್‌‌ ಪಾಸ್‌ ಕಿತ್ತುಕೊಂಡಿದ್ದಾರೆಂದು ಫೇಸ್‌ಬುಕ್‌ನಲ್ಲಿ ಜನನಿಯವರು ಲೈವ್‌ ಮಾಡಿರುವುದು ವೈರಲ್ ಆಗಿದೆ. ಅದರಲ್ಲಿ “ನನ್ನ ಪಾಸ್ ಯಾಕೆ ಕಿತ್ತುಕೊಂಡಿರಿ” ಎಂದು ವತ್ಸಲ ಪ್ರಶ್ನಿಸಿದ್ದಾರೆ. ಆಗ ಕಂಡಕ್ಟರ್ “ಮೊಬೈಲ್‌ ಫೋಟೋ ಪ್ರತಿಯನ್ನು ಸ್ವೀಕರಿಸಲಾಗುವುದಿಲ್ಲ” ಎಂದು ಹೇಳುತ್ತಾರೆ.


ಇದನ್ನೂ ಓದಿರಿ: ಸುಳ್ಳುಗಳಿಗೆ ಕುಖ್ಯಾತವಾಗಿರುವ ‘ಮೇಘ್ ಅಪ್ಡೇಟ್ಸ್’ ಚಕ್ರವರ್ತಿ ಸೂಲಿಬೆಲೆಯವರ ನೆಚ್ಚಿನ ಟ್ವಿಟ್ಟರ್‌ ಅಕೌಂಟ್‌!


“ಕಲರ್‌ ಜೆರಾಕ್ಸ್‌ ಕಾಪಿಯನ್ನು ಮೊಬೈಲ್‌‌ನಲ್ಲಿ ತೆಗೆದುಕೊಂಡು ಬಂದರೆ ಸಾಕು ಎನ್ನುತ್ತಾರೆ” ಎಂದು ಜನನಿ ತಿಳಿಸುತ್ತಾರೆ. ಬಸ್‌ ಸಿಬ್ಬಂದಿ ನಿರಾಕರಿಸುತ್ತಾರೆ. “ಇಷ್ಟು ಹೊತ್ತಲ್ಲಿ ಕೆಳಗೆ ಇಳಿಸುತ್ತೀರಲ್ಲ ಇದು ಸರಿಯೇ? ಏನಾದರೂ ಅನಾಹುತವಾದರೆ ಯಾರು ಹೊಣೆ?” ಎಂದು ಜನನಿ ಕೇಳುತ್ತಾರೆ. “ನೀನು ಯಾವ ಟೈಮ್‌ಗಾದರೂ ಬಾ ನನಗೇನು?” ಎಂದು ಕಂಡಕ್ಟರ್ ದಬಾಯಿಸುತ್ತಾರೆ.

ವತ್ಸಲ ಅವರ ಪ್ರಶ್ನೆಗಳಿಗೆ ಉತ್ತರ ನೀಡದ ಸಿಬ್ಬಂದಿ ಬಸ್‌ನಿಂದ ಇಳಿಸುವ ಯತ್ನ ಮಾಡಿದ್ದಾರೆ. ಆಗ ಬಸ್‌ ಮುಂದಕ್ಕೆ ಹೋಗಲು ಬಿಡದೆ ಜನನಿಯವರು ಪ್ರತಿಭಟಿಸಿದ್ದಾರೆ. ಕೆಲವು ಯುವಕರು ಕಂಡಕ್ಟರ್‌ ಪರ ವಾದಿಸುತ್ತಾ, ಜನನಿಯವರ ಮೇಲೆ ಜಗಳವಾಡಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಒಂದು ರಸೀದಿ ಕಾರಣಕ್ಕೆ ರಸ್ತೆ ಮಧ್ಯೆಯಲ್ಲಿ ಕೆಳಗಿಳಿಸಲು ಯತ್ನಿಸಿದ ಬಿಎಂಟಿಸಿ ಸಿಬ್ಬಂದಿಯ ನಡೆಯನ್ನು ಖಂಡಿಸಿ, ವಿಲ್ಸನ್‌ ಗಾರ್ಡನ್ ಪೊಲೀಸ್‌ ಠಾಣೆಯಲ್ಲಿ ಜನನಿ ವತ್ಸಲ ಅವರು ಪ್ರಕರಣ ದಾಖಲಿಸಿದ್ದಾರೆ. ಜನನಿಯವರ ಲೈವ್‌ ನೋಡಿ, ಜನನಿಯವರ ಸ್ನೇಹಿತರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಾಗುವವರೆಗೂ ಸಹಾಯ ಮಾಡಿದ್ದಾರೆ ಎಂದು ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿರಿ: ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ


ಪ್ರತಿ ದೂರು ದಾಖಲು

ನಂತರ ಕಂಡಕ್ಟರ್ ಮನೋಜ್‌ರವರು ನನ್ನ ಮೇಲೆ ಹಲ್ಲೆಯಾಗಿದೆ ಎಂದು ಪ್ರತಿದೂರು ದಾಖಲಿಸಿದ್ದಾರೆ. ಅದರ ಆಧಾರದಲ್ಲಿ ಜನನಿಯವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಮಠಪತಿ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿದಾಗ, “ಕೌಂಟರ್‌ ಕೇಸ್‌ ದಾಖಲಾಗಿರುವುದು” ಖಚಿತವಾಗಿದೆ ಎಂದರು. “ಕೌಂಟರ್‌ ಕೇಸ್‌ಗೆ ಆಧಾರವೇನು?” ಎಂದು ಕೇಳಿದ್ದಕ್ಕೆ ಉತ್ತರಿಸಲು ನಿರಾಕರಿಸಿದರು.

ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನನಿಯವರು, “ವಿಜಯ ಕರ್ನಾಟಕ ಪತ್ರಿಕಾ ವರದಿ ಸುಳ್ಳುಗಳಿಂದ ಕೂಡಿದೆ. ನಾನು ಜೋರು ದನಿಯಲ್ಲಿ ಪ್ರಶ್ನಿಸಿದ್ದು ನಿಜ. ಇಡೀ ಘಟನೆ ಫೇಸ್‌ಬುಕ್‌ನಲ್ಲಿ ಲೈವ್ ಆಗಿದೆ. ನಾನು ಕರೆ ಮಾಡಿ ನನ್ನ ಸ್ನೇಹಿತರನ್ನು ಕರೆಸಿಕೊಂಡಿರುವುದಾಗಿ ಪತ್ರಿಕೆಯಲ್ಲಿ ಆರೋಪಿಸಲಾಗಿದೆ. ನನ್ನ ಸ್ನೇಹಿತರು ನನ್ನ ಲೈವ್ ನೋಡಿ ಸ್ಥಳಕ್ಕೆ ಧಾವಿಸಿದರೆ ಹೊರತು ನಾನು ಯಾರಿಗೂ ಫೋನ್ ಮಾಡಿಲ್ಲ. ಇಡೀ ಘಟನೆ ಅರ್ಧ ಗಂಟೆಗೂ ಹೆಚ್ಚು ಸಮಯ ಲೈವ್ ಆಗುತ್ತಿದ್ದಾಗ ನಾನು ಹೇಗೆ ಫೋನ್ ಮಾಡಲು ಸಾಧ್ಯ? ಇನ್ನು ನಾನು ಯಾರಿಗೂ ಹಲ್ಲೆ ನಡೆಸಿಲ್ಲ. ಬೇಕಾದರೆ ಲೈವ್ ಪೂರ್ತಿ ನೋಡಿ. ಆದರೆ ಸುಳ್ಳು ವರದಿ ಮಾಡಲಾಗಿದೆ” ಎಂದರು.

ಒಂದು ಬಟ್ಟೆ ಅಭಿಯಾನದ ಕರ್ತೃ ಜನನಿ

ಜನನಿ ವತ್ಸಲ ಅವರು ಮೊದಲಿನಿಂದಲೂ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರೂ ಹೌದು. ಈ ಹಿಂದೆಯೂ ಹಲವು ದೌರ್ಜನ್ಯಗಳನ್ನು ಪ್ರಶ್ನಿಸಿ ವಿಡಿಯೊಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಜನನಿಯವರು ಕಳೆದ ಎರಡು ವರ್ಷಗಳಿಂದ ಮಾಡುತ್ತಿರುವ ಸಾಮಾಜಿಕ ಸೇವೆಯು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಬಡವರಿಗಾಗಿ “ಒಂದು ಬಟ್ಟೆ ಅಭಿಯಾನ, ಮತ್ತು ಒಂದು ಜೊತೆ ಚಪ್ಪಲಿ ಅಭಿಯಾನ”ವನ್ನು ನಿರಂತವಾಗಿ ಜನನಿ ನಡೆಸುತ್ತಿದ್ದಾರೆ. ಈಗ ಮನೆ ಇಲ್ಲದೆ ರಸ್ತೆ ಬದಿ ವಾಸಿಸುವವರಿಗೆ `ಒಂದು ಹೊದಿಗೆ ನೀಡುವ ಅಭಿಯಾನ’ ಸಹ ಮಾಡುತ್ತಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

“ಹೆಣ್ಣು ಮಕ್ಕಳನ್ನು ಈ ಸಣ್ಣಪುಟ್ಟ ಕಾರಣ ನೀಡಿ ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದರೆ ಏನಾದರೂ ಅನಾಹುತವಾದರೆ ಯಾರು ಹೊಣೆಯಾಗುತ್ತಾರೆ?” ಎಂಬ ಪ್ರಶ್ನೆಯಲ್ಲಿ ಅರ್ಥವಿದೆ. ಈ ನಿಟ್ಟಿನಲ್ಲಿ ದೆಹಲಿ, ತಮಿಳುನಾಡು, ತೆಲಂಗಾಣ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿರ್ಧಾರವನ್ನು ನಮ್ಮ ರಾಜ್ಯ ಸರ್ಕಾರವೂ ತೆಗೆದುಕೊಳ್ಳುವುದು ಸೂಕ್ತ. ದೆಹಲಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇವೆ ಇದೆ. ಇನ್ನು ತೆಲಂಗಾಣ ಸರ್ಕಾರ, “ಸಂಜೆ ಏಳು ಗಂಟೆಯ ಬಳಿಕ ಮಹಿಳೆಯರು ಕೇಳಿದ ಕಡೆ ಹತ್ತಿಸಿಕೊಳ್ಳಬೇಕು ಮತ್ತು ಇಳಿಸಬೇಕು” ಎಂದು ತಿಳಿಸಿದೆ. ಇಂತಹ ನಿರ್ಧಾರಗಳನ್ನು ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡರೆ ಮಹಿಳೆಯರಿಗೆ ಬಹಳ ಅನುಕೂಲವಾಗುತ್ತದೆ.


ಇದನ್ನೂ ಓದಿರಿ: ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...