Homeಮುಖಪುಟಅಮಿತ್ ಶಾ ಕುರಿತು ಹೇಳಿಕೆ; ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲು

ಅಮಿತ್ ಶಾ ಕುರಿತು ಹೇಳಿಕೆ; ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಛತ್ತೀಸ್‌ಗಢದಲ್ಲಿ ಪ್ರಕರಣ ದಾಖಲಿಸಲಾಗಿದೆ. “ತಲೆ ಕತ್ತರಿಸಿ ಮೇಜಿನ ಮೇಲೆ ಇಡಬೇಕು” ಎಂದು ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.

ಮೊಯಿತ್ರಾ ಅವರ ಹೇಳಿಕೆಗಳು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಅವಮಾನಿಸಿದ್ದು, ದ್ವೇಷ ಹರಡಿದೆ. ರಾಷ್ಟ್ರೀಯ ಏಕತೆಗೆ ಅಪಾಯವನ್ನುಂಟುಮಾಡಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿ ಗೋಪಾಲ್ ಸಮಾಂಟೊ ಸಲ್ಲಿಸಿದ ದೂರಿನ ಆಧಾರದ ಮೇಲೆ ರಾಯ್‌ಪುರದ ಮಾನಾ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಭಾರತಕ್ಕೆ ಅಕ್ರಮ ಬಾಂಗ್ಲಾದೇಶಿಗಳ ಒಳನುಸುಳುವಿಕೆಯನ್ನು ತಡೆಯುವಲ್ಲಿ ವಿಫಲವಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಲೆದಂಡವಾಗಬೇಕು ಎಂದು ಶುಕ್ರವಾರ ಅವರು ನೀಡಿದ್ದ ಹೇಳಿಕೆಯಿಂದ ವಿವಾದ ಸೃಷ್ಟಿಯಾಗಿದೆ.

ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೊಯಿತ್ರಾ, ಗಡಿ ಭದ್ರತೆ ಗೃಹ ಸಚಿವಾಲಯದ ಜವಾಬ್ದಾರಿಯಾಗಿದೆ. ಒಳನುಸುಳುವಿಕೆಗೆ ತೃಣಮೂಲ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಗೃಹ ಸಚಿವರಂತಹ ಹಿರಿಯ ಸಾಂವಿಧಾನಿಕ ಹುದ್ದೆಯ ವಿರುದ್ಧ ಇಂತಹ ಪ್ರಚೋದನಕಾರಿ ಭಾಷೆ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದಲ್ಲದೆ, ವಿಚ್ಛಿದ್ರಕಾರಕ ಅಂಶಗಳನ್ನು ಪ್ರೋತ್ಸಾಹಿಸಬಹುದು ಎಂದು ದೂರುದಾರರು ವಾದಿಸಿದ್ದಾರೆ.

“ನಾನು ತುಂಬಾ ಭಾರವಾದ ಹೃದಯದಿಂದ ದೂರು ದಾಖಲಿಸಿದ್ದೇನೆ. ಅವರಂತೆಯೇ ಅದೇ ಸಮುದಾಯದಿಂದ ಬಂದಿದ್ದೇನೆ. ಸಂಸದರು ಗೃಹ ಸಚಿವರ ಬಗ್ಗೆ ಮುಜುಗರದ ರೀತಿಯಲ್ಲಿ ತಪ್ಪಾಗಿ ಮಾತನಾಡುವುದು ಇಡೀ ಸಮುದಾಯಕ್ಕೆ ಮಾಡಿದ ಅವಮಾನ. ಅವರಿಗೆ ಶಿಕ್ಷೆಯಾಗುವಂತೆ ಮತ್ತು ಅವರ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಖಚಿತಪಡಿಸಿಕೊಳ್ಳುವುದು ಈ ದೂರಿನ ಉದ್ದೇಶವಾಗಿದೆ” ಎಂದು ಸಮಂತೋ ರಾಯ್‌ಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌) ನ ಸೆಕ್ಷನ್ 196 ಮತ್ತು 197 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ದ್ವೇಷವನ್ನು ಉತ್ತೇಜಿಸುವುದು, ಸಾಮಾಜಿಕ ಸಾಮರಸ್ಯವನ್ನು ಕದಡುವುದು ಮತ್ತು ಸಾಂವಿಧಾನಿಕ ಅಧಿಕಾರಿಗಳ ವಿರುದ್ಧ ಆರೋಪಗಳನ್ನು ಉಂಟುಮಾಡುವ ಸೆಕ್ಷನ್‌ಗಳನ್ನು ಒಳಗೊಂಡಿದೆ.

ಈ ಬಗ್ಗೆ ವಿವಾದ ಭುಗಿಲೆದ್ದ ನಂತರ, ಕೃಷ್ಣನಗರ ಸಂಸದರ ತೀಕ್ಷ್ಣವಾದ ಮಾತುಗಳು ಬಿಜೆಪಿಯಿಂದ ತಕ್ಷಣದ ಖಂಡನೆಗೆ ಗುರಿಯಾದವು. ಅವರ ಹೇಳಿಕೆಗಳು ‘ತಾಲಿಬಾನಿ ಮನಸ್ಥಿತಿಯನ್ನು’ ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ. ಪಶ್ಚಿಮ ಬಂಗಾಳದ ಪೊಲೀಸ್ ಠಾಣೆಯಲ್ಲಿ ಮಹುವಾ ವಿರುದ್ಧ ಪ್ರತ್ಯೇಕ ದೂರು ಕೂಡ ದಾಖಲಾಗಿದೆ.

ಮೊಯಿತ್ರಾ ಅವರ ಮಾತುಗಳು “ಐಸಿಸ್ ಶೈಲಿಯ ವಾಕ್ಚಾತುರ್ಯ”ವನ್ನು ಪ್ರತಿಧ್ವನಿಸುತ್ತಿವೆ, ತೃಣಮೂಲ ಪಕ್ಷವು ಹಿಂಸಾತ್ಮಕ ರಾಜಕೀಯ ಭಾಷೆಯನ್ನು ಸಾಮಾನ್ಯಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ್ಲಾ ಹೇಳಿದ್ದಾರೆ. ಮತ್ತೊಬ್ಬ ಬಿಜೆಪಿ ನಾಯಕ, ಅವರ ಹೇಳಿಕೆಗಳು ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅವಮಾನ ಎಂದು ಕರೆದರು.

ಆದರೆ, ಮೊಯಿತ್ರಾ ಬಿಜೆಪಿಯ ಟೀಕೆಗಳಿಂದ ವಿಚಲಿತರಾಗಲಿಲ್ಲ. ಬಿಜೆಪಿಯನ್ನು ಅಪಹಾಸ್ಯ ಮಾಡಿದ ಅವರು, “ಬಿಜೆಪಿಯವರು ಜಿಗಿಯುವುದು ಮತ್ತು ಹಾರುವುದು” ತಮಾಷೆಯಾಗಿದೆ ಎಂದು ಹೇಳಿದರು.

ಎಸ್‌ಐಆರ್ ನಂತರ ಬಿಹಾರದ ಎಲ್ಲ ಮತದಾರರಿಗೆ ಹೊಸ ಕಾರ್ಡ್‌: ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...