Homeರಾಷ್ಟ್ರೀಯದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್ ಜುಬೇರ್‌ಗೆ ಜಾಮೀನು

ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್ ಜುಬೇರ್‌ಗೆ ಜಾಮೀನು

ಇನ್ನೂ ಎರಡು ಪ್ರಕರಣಗಳು ಬಾಕಿ ಉಳಿದಿರುವುದರಿಂದ ಅವರು ಜೈಲಿನಲ್ಲೇ ಉಳಿಯಲಿದ್ದಾರೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌ಗೆ ಶುಕ್ರವಾರ(ಇಂದು) ಮತ್ತೊಂದು ಪ್ರಕರಣದಲ್ಲಿ ಜಾಮೀನು ದೊರೆತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಇನ್ನೂ ಎರಡು ಪ್ರಕರಣಗಳು ಬಾಕಿ ಉಳಿದಿರುವುದರಿಂದ ಅವರು ಜೈಲಿನಲ್ಲೇ ಉಳಿಯಲಿದ್ದಾರೆ. ಜೂನ್ 27ರಂದು ಅವರನ್ನು ಬಂಧಿಸಿದ ನಂತರ ಅವರ ವಿರುದ್ಧ ಹಲವು ಎಫ್‌ಐಆರ್‌ಗಳು ದಾಖಲಾಗಿದ್ದವು.

2018 ರಲ್ಲಿ ಮಾಡಿದ್ದ ಟ್ವೀಟ್ ವಿರುದ್ಧ ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಇಂದು ಜುಬೇರ್‌ಗೆ ಜಾಮೀನು ನೀಡಲಾಗಿದೆ. ಈ ಪ್ರಕರಣದಲ್ಲಿ ಅವರನ್ನು ಜೂನ್ 27 ರಂದು ಬಂಧಿಸಲಾಗಿತ್ತು. ಅದಾಗಿಯೂ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎರಡು ಪ್ರಕರಣಗಳ ಕಾರಣಕ್ಕೆ ಅವರು ಜೈಲಿನಲ್ಲೇ ಇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ಜುಬೇರ್ ಅವರು ತಮ್ಮ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಆರು ಪ್ರಕರಣಗಳನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅಲ್ಲದೆ ಪ್ರಕರಣಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡವನ್ನು ರದ್ದುಗೊಳಿಸುವಂತೆಯೂ ಅವರು ಕೋರಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

ಅವರ ವಿರುದ್ಧ ದಾಖಲಾದ ಆರು ಪ್ರಕರಣಗಳ ಪೈಕಿ ಮೂರು ಪ್ರಕರಣಗಳು ಲಖಿಂಪುರ ಖೇರಿ, ಹತ್ರಾಸ್ ಮತ್ತು ಸೀತಾಪುರ್‌ನಲ್ಲಿ ದಾಖಲಾಗಿತ್ತು. ಈ ಪ್ರಕರಣವು ಬಿಜೆಪಿ ಬೆಂಬಲಿತ ಬಲಪಂಥೀಯ ನಾಯಕರನ್ನು “ದ್ವೇಷದ ದೊರೆಗಳು” ಎಂದು ಕರೆದ ಟ್ವೀಟ್‌ನ ವಿರುದ್ಧ ದಾಖಲಿಸಲಾಗಿದೆ.

ಮಂಗಳವಾರದಂದು ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಅವರ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಈ ಪ್ರಕರಣದಲ್ಲಿ ಜುಬೇರ್‌‌ ವಿರುದ್ಧ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಆದರೆ, ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಅವರ ವಿರುದ್ಧ ದಾಖಲಾಗಿರುವ ಇತರ ಪ್ರಕರಣಗಳಲ್ಲಿ ಅವರಿಗೆ ಜಾಮೀನು ನೀಡಲಾಗಿಲ್ಲ. ಹೀಗಾಗಿ ಅವರು ಇನ್ನೂ ಜೈಲಿನಲ್ಲಿದ್ದಾರೆ. ಈ ನಡುವೆ ಜುಬೇರ್‌ ಅವರು ತನಗೆ ಜೀವ ಬೆದರಿಕೆ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಇದನ್ನೂ ಓದಿ: 6 ಪ್ರಕರಣಗಳನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ ಮೊಹಮ್ಮದ್ ಜುಬೇರ್‌

ಅದೇ ದಿನ, ಉತ್ತರ ಪ್ರದೇಶ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಅವರ ವಿರುದ್ಧದ ಅನೇಕ ಪ್ರಕರಣಗಳನ್ನು ತನಿಖೆ ಮಾಡಿದ್ದಾರೆ. ಶೀಘ್ರ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ವೀಡಿಯೊವನ್ನು ಜುಬೇರ್‌ ವೈರಲ್ ಮಾಡಿದ ನಂತರ ವಿಶ್ವದಾದ್ಯಂತ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದು ಆಡಳಿತರೂಢ ಬಿಜೆಪಿಗೆ ತೀವ್ರ ಮುಗರಕ್ಕೀಡು ಮಾಡಿತ್ತು. ಇದಾಗಿ ಕೆಲವೇ ದಿನಗಳ ನಂತರ ಜುಬೇರ್‌ ಬಂಧನ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...