Homeರಾಷ್ಟ್ರೀಯದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್ ಜುಬೇರ್‌ಗೆ ಜಾಮೀನು

ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್ ಜುಬೇರ್‌ಗೆ ಜಾಮೀನು

ಇನ್ನೂ ಎರಡು ಪ್ರಕರಣಗಳು ಬಾಕಿ ಉಳಿದಿರುವುದರಿಂದ ಅವರು ಜೈಲಿನಲ್ಲೇ ಉಳಿಯಲಿದ್ದಾರೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌ಗೆ ಶುಕ್ರವಾರ(ಇಂದು) ಮತ್ತೊಂದು ಪ್ರಕರಣದಲ್ಲಿ ಜಾಮೀನು ದೊರೆತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಇನ್ನೂ ಎರಡು ಪ್ರಕರಣಗಳು ಬಾಕಿ ಉಳಿದಿರುವುದರಿಂದ ಅವರು ಜೈಲಿನಲ್ಲೇ ಉಳಿಯಲಿದ್ದಾರೆ. ಜೂನ್ 27ರಂದು ಅವರನ್ನು ಬಂಧಿಸಿದ ನಂತರ ಅವರ ವಿರುದ್ಧ ಹಲವು ಎಫ್‌ಐಆರ್‌ಗಳು ದಾಖಲಾಗಿದ್ದವು.

2018 ರಲ್ಲಿ ಮಾಡಿದ್ದ ಟ್ವೀಟ್ ವಿರುದ್ಧ ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಇಂದು ಜುಬೇರ್‌ಗೆ ಜಾಮೀನು ನೀಡಲಾಗಿದೆ. ಈ ಪ್ರಕರಣದಲ್ಲಿ ಅವರನ್ನು ಜೂನ್ 27 ರಂದು ಬಂಧಿಸಲಾಗಿತ್ತು. ಅದಾಗಿಯೂ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎರಡು ಪ್ರಕರಣಗಳ ಕಾರಣಕ್ಕೆ ಅವರು ಜೈಲಿನಲ್ಲೇ ಇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ಜುಬೇರ್ ಅವರು ತಮ್ಮ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಆರು ಪ್ರಕರಣಗಳನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅಲ್ಲದೆ ಪ್ರಕರಣಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡವನ್ನು ರದ್ದುಗೊಳಿಸುವಂತೆಯೂ ಅವರು ಕೋರಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

ಅವರ ವಿರುದ್ಧ ದಾಖಲಾದ ಆರು ಪ್ರಕರಣಗಳ ಪೈಕಿ ಮೂರು ಪ್ರಕರಣಗಳು ಲಖಿಂಪುರ ಖೇರಿ, ಹತ್ರಾಸ್ ಮತ್ತು ಸೀತಾಪುರ್‌ನಲ್ಲಿ ದಾಖಲಾಗಿತ್ತು. ಈ ಪ್ರಕರಣವು ಬಿಜೆಪಿ ಬೆಂಬಲಿತ ಬಲಪಂಥೀಯ ನಾಯಕರನ್ನು “ದ್ವೇಷದ ದೊರೆಗಳು” ಎಂದು ಕರೆದ ಟ್ವೀಟ್‌ನ ವಿರುದ್ಧ ದಾಖಲಿಸಲಾಗಿದೆ.

ಮಂಗಳವಾರದಂದು ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಅವರ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಈ ಪ್ರಕರಣದಲ್ಲಿ ಜುಬೇರ್‌‌ ವಿರುದ್ಧ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಆದರೆ, ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಅವರ ವಿರುದ್ಧ ದಾಖಲಾಗಿರುವ ಇತರ ಪ್ರಕರಣಗಳಲ್ಲಿ ಅವರಿಗೆ ಜಾಮೀನು ನೀಡಲಾಗಿಲ್ಲ. ಹೀಗಾಗಿ ಅವರು ಇನ್ನೂ ಜೈಲಿನಲ್ಲಿದ್ದಾರೆ. ಈ ನಡುವೆ ಜುಬೇರ್‌ ಅವರು ತನಗೆ ಜೀವ ಬೆದರಿಕೆ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಇದನ್ನೂ ಓದಿ: 6 ಪ್ರಕರಣಗಳನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ ಮೊಹಮ್ಮದ್ ಜುಬೇರ್‌

ಅದೇ ದಿನ, ಉತ್ತರ ಪ್ರದೇಶ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಅವರ ವಿರುದ್ಧದ ಅನೇಕ ಪ್ರಕರಣಗಳನ್ನು ತನಿಖೆ ಮಾಡಿದ್ದಾರೆ. ಶೀಘ್ರ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ವೀಡಿಯೊವನ್ನು ಜುಬೇರ್‌ ವೈರಲ್ ಮಾಡಿದ ನಂತರ ವಿಶ್ವದಾದ್ಯಂತ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದು ಆಡಳಿತರೂಢ ಬಿಜೆಪಿಗೆ ತೀವ್ರ ಮುಗರಕ್ಕೀಡು ಮಾಡಿತ್ತು. ಇದಾಗಿ ಕೆಲವೇ ದಿನಗಳ ನಂತರ ಜುಬೇರ್‌ ಬಂಧನ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...