Homeಕರ್ನಾಟಕಅವಹೇಳನಕಾರಿ ಪೋಸ್ಟ್‌: ವಿಶ್ವೇಶ್ವರ ಭಟ್‌ ಮೇಲೆ ಪ್ರಕರಣ ದಾಖಲು

ಅವಹೇಳನಕಾರಿ ಪೋಸ್ಟ್‌: ವಿಶ್ವೇಶ್ವರ ಭಟ್‌ ಮೇಲೆ ಪ್ರಕರಣ ದಾಖಲು

- Advertisement -
- Advertisement -

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ ಮತ್ತು ಮಮತಾ ಬ್ಯಾನರ್ಜಿ ಕುರಿತು ಅವಹೇಳನಕಾರಿ ಫೇಸ್ಬುಕ್‌ ಪೋಸ್ಟ್‌ ಹಾಕಿದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮೇಲೆ  ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಮೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವೇಶ್ವರ ಭಟ್‌ ಮೇಲೆ  ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾನೂನು ವಿಭಾಗದ ಉಪಾಧ್ಯಕ್ಷರಾದ ವಕೀಲ ಮಂಜುನಾಥ ನಾಯಕ್ ದೂರು ದಾಖಲಿಸಿದ್ದಾರೆ.

ವಿಶ್ವೇಶ್ವರ ಭಟ್‌ ಅಗಸ್ಟ್‌ 20 ರಂದು ಮಾಡಿದ್ದ ಫೇಸ್ಬುಕ್‌ ಪೋಸ್ಟ್‌ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಮೋಟಮ್ಮ, ಮಮತಾ ಬ್ಯಾನರ್ಜಿಯವರ ಬಗ್ಗೆ ಅವಹೇಳನಕಾರಿ ಹಾಗೂ ಅಸಹ್ಯಕಾರಿ ಪೋಸ್ಟ್‌ ಮಾಡಿರುವ ಹಿನ್ನೆಲೆಯಲ್ಲಿ ಈ ಕೇಸ್‌ ದಾಖಲಾಗಿದೆ.

ವಿಶ್ವೇಶ್ವರ ಭಟ್‌ ಮಾಡಿದ ಫೋಸ್ಟ್‌ನಲ್ಲಿ ಏನಿದೆ?

ಖ್ಯಾತ ಹಾಲಿವುಡ್ ನಟಿ ಮರ್ಲಿನ್ ಮನ್ರೋ ಹೇಳಿದ ಒಂದು ಮಾತು ನೆನಪಾಗುತ್ತಿದೆ- Your clothes should be tight enough to show you are a teenage girl but loose enough to show you are a lady. ಹೆಣ್ಣು ಮಕ್ಕಳು ಯಾವ ಡ್ರೆಸ್ಸನ್ನೂ ಬಹಳ ದಿನಗಳ ಕಾಲ ಇಷ್ಟಪಡುವುದಿಲ್ಲ. ಅಂದರೆ ಟೈಟ್ ಡ್ರೆಸ್ಸನ್ನು ಯಾವತ್ತೂ ಧರಿಸುವುದಿಲ್ಲ. ಆಗೊಮ್ಮೆ ಈಗೊಮ್ಮೆ ಧರಿಸಿದಾಗ ಮನೆಯಲ್ಲಿ ಸದನ ಸದೃಶ ವಾತಾವರಣ ನಿರ್ಮಿಸಬಾರದು, ಕೆಲ ದಿನಗಳ ಬಳಕ ಮಗಳಿಗೆ ನೀವು ಅಂಥ ಡ್ರೆಸ್ ಧರಿಸು ಅಂದರೂ ಧರಿಸುವುದಿಲ್ಲ. ಅಷ್ಟಕ್ಕೂ ಆ ವಯಸ್ಸಿನ ಮಕ್ಕಳು ಟೈಟ್ ಡ್ರೆಸ್ ಧರಿಸಿದರೇ ಚೆಂದ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಬ್ಯಾನರ್ಜಿ ಅಂಥ ಡ್ರೆಸ್ ಧರಿಸಿದರೆ ಬರಿಗಣ್ಣಿನಿಂದ ನೋಡಲು ಸಾಧ್ಯವಾ ? ಒಮ್ಮೆ ಯೋಚಿಸಿ ಎಂದು ಪೋಸ್ಟ್ ಮಾಡಲಾಗಿದೆ.

ವಿಶ್ವೇಶ್ವರ ಭಟ್ ತನ್ನ ಬರಹದಲ್ಲಿ ಮಹಿಳೆಯರ ಬಗ್ಗೆ, ಮಹಿಳೆಯರ ದೇಹದ ಬಗ್ಗೆ, ಉಡುಗೆಯ ಹಾಗೂ ಅವರ ಘನತೆಗೆ ಕುಂದಾಗುವಂತೆ ಅವಹೇಳನಕಾರಿಯಾಗಿ ಬರೆದಿದ್ದು ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹರಡಿದೆ. ಆದ್ದರಿಂದ ವಿಶ್ವೇಶ್ವರ ಭಟ್ ಮೇಲೆ ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮನಗರ: ಮೈಮೇಲೆ ಮಲ ಸುರಿದುಕೊಂಡು  ಪೌರಕಾರ್ಮಿಕರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...