ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ ಮತ್ತು ಮಮತಾ ಬ್ಯಾನರ್ಜಿ ಕುರಿತು ಅವಹೇಳನಕಾರಿ ಫೇಸ್ಬುಕ್ ಪೋಸ್ಟ್ ಹಾಕಿದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಮೇಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಮೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವೇಶ್ವರ ಭಟ್ ಮೇಲೆ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾನೂನು ವಿಭಾಗದ ಉಪಾಧ್ಯಕ್ಷರಾದ ವಕೀಲ ಮಂಜುನಾಥ ನಾಯಕ್ ದೂರು ದಾಖಲಿಸಿದ್ದಾರೆ.
ವಿಶ್ವೇಶ್ವರ ಭಟ್ ಅಗಸ್ಟ್ 20 ರಂದು ಮಾಡಿದ್ದ ಫೇಸ್ಬುಕ್ ಪೋಸ್ಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಮೋಟಮ್ಮ, ಮಮತಾ ಬ್ಯಾನರ್ಜಿಯವರ ಬಗ್ಗೆ ಅವಹೇಳನಕಾರಿ ಹಾಗೂ ಅಸಹ್ಯಕಾರಿ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಈ ಕೇಸ್ ದಾಖಲಾಗಿದೆ.
ವಿಶ್ವೇಶ್ವರ ಭಟ್ ಮಾಡಿದ ಫೋಸ್ಟ್ನಲ್ಲಿ ಏನಿದೆ?
ಖ್ಯಾತ ಹಾಲಿವುಡ್ ನಟಿ ಮರ್ಲಿನ್ ಮನ್ರೋ ಹೇಳಿದ ಒಂದು ಮಾತು ನೆನಪಾಗುತ್ತಿದೆ- Your clothes should be tight enough to show you are a teenage girl but loose enough to show you are a lady. ಹೆಣ್ಣು ಮಕ್ಕಳು ಯಾವ ಡ್ರೆಸ್ಸನ್ನೂ ಬಹಳ ದಿನಗಳ ಕಾಲ ಇಷ್ಟಪಡುವುದಿಲ್ಲ. ಅಂದರೆ ಟೈಟ್ ಡ್ರೆಸ್ಸನ್ನು ಯಾವತ್ತೂ ಧರಿಸುವುದಿಲ್ಲ. ಆಗೊಮ್ಮೆ ಈಗೊಮ್ಮೆ ಧರಿಸಿದಾಗ ಮನೆಯಲ್ಲಿ ಸದನ ಸದೃಶ ವಾತಾವರಣ ನಿರ್ಮಿಸಬಾರದು, ಕೆಲ ದಿನಗಳ ಬಳಕ ಮಗಳಿಗೆ ನೀವು ಅಂಥ ಡ್ರೆಸ್ ಧರಿಸು ಅಂದರೂ ಧರಿಸುವುದಿಲ್ಲ. ಅಷ್ಟಕ್ಕೂ ಆ ವಯಸ್ಸಿನ ಮಕ್ಕಳು ಟೈಟ್ ಡ್ರೆಸ್ ಧರಿಸಿದರೇ ಚೆಂದ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಬ್ಯಾನರ್ಜಿ ಅಂಥ ಡ್ರೆಸ್ ಧರಿಸಿದರೆ ಬರಿಗಣ್ಣಿನಿಂದ ನೋಡಲು ಸಾಧ್ಯವಾ ? ಒಮ್ಮೆ ಯೋಚಿಸಿ ಎಂದು ಪೋಸ್ಟ್ ಮಾಡಲಾಗಿದೆ.
ವಿಶ್ವೇಶ್ವರ ಭಟ್ ತನ್ನ ಬರಹದಲ್ಲಿ ಮಹಿಳೆಯರ ಬಗ್ಗೆ, ಮಹಿಳೆಯರ ದೇಹದ ಬಗ್ಗೆ, ಉಡುಗೆಯ ಹಾಗೂ ಅವರ ಘನತೆಗೆ ಕುಂದಾಗುವಂತೆ ಅವಹೇಳನಕಾರಿಯಾಗಿ ಬರೆದಿದ್ದು ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹರಡಿದೆ. ಆದ್ದರಿಂದ ವಿಶ್ವೇಶ್ವರ ಭಟ್ ಮೇಲೆ ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಆಗ್ರಹಿಸಲಾಗಿದೆ.
ಇದನ್ನು ಓದಿ: ರಾಮನಗರ: ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ
Naanu ghori