Homeಕರ್ನಾಟಕಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ...

ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬೆಂಗಳೂರಿನ ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾಗೆ ತೆರಳಿ ಮಾಲ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ ಬೆದರಿಕೆ ಹಾಕಿರುವ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ  ಸೇರಿದಂತೆ ಐವರ  ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಡಿ. 23ರಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದಲ್ಲಿ ಕ್ರಿಸ್ ಮಸ್ ಹಿನ್ನಲೆಯಲ್ಲಿ  ಕ್ರಿಸ್ ಮಸ್ ಟ್ರೀ  ಪ್ರದರ್ಶನ ಹಾಗೂ ಅದಕ್ಕೆ 200 ರೂ. ಟಿಕೆಟ್ ನಿಗದಿಪಡಿಸಲಾಗಿತ್ತು. ಇದಕ್ಕೆ ವಿರೋಧಿಸಿ ಪುನೀತ್‌ ಕೆರೆಹಳ್ಳಿ ಮತ್ತು ತಂಡ ಮಾಲ್‌ನ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಬಳಿ ವಾಗ್ವಾದ ನಡೆಸಿದ್ದಾರೆ. ಇದಲ್ಲದೆ ಡಿ.25 ಹಾಗೂ 31ರಂದು ಅದೇ ರೀತಿ ಗಲಾಟೆ ಮಾಡುವುದಾಗಿ ತಿಳಿಸಿ ಜೀವ ಬೆದರಿಕೆ ಹಾಕಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಹೋಗಿದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಪುನೀತ್ ಹಾಗೂ ಇತರರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಈ ಕುರಿತು ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಹಾಗೂ ಇತರರು ಅಕ್ರಮವಾಗಿ ಗುಂಪು ಕಟ್ಟಿಕೊಂಡು ಬಂದು ಜೀವ ಬೆದರಿಕೆಯೊಡ್ಡಿದ್ದಾರೆ. ಮಾಲ್ ಪ್ರವೇಶಿಸುತ್ತಿದ್ದ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಾರೆ. ಕ್ರಿಸ್ಮಸ್ ಹಬ್ಬವೆಂಬ ಕಾರಣಕ್ಕೆ ಅಲಂಕಾರ ಮಾಡಲಾಗಿದೆ. ಹಿಂದೂ ಹಬ್ಬವಿದ್ದಾಗಲೂ ಇದೇ ರೀತಿಯಲ್ಲಿ ಅಲಂಕಾರವಿರಬೇಕು. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿದ್ದು, ಅಂದು ಮಾಲ್‌ಗೆ ವಿಶೇಷ ಅಲಂಕಾರ ಮಾಡಬೇಕು. ಇಲ್ಲದಿದ್ದರೆ, ಸುಮ್ಮನೇ ಬಿಡುವುದಿಲ್ಲ ಎಂದು ಪುನೀತ್ ಕೆರೆಹಳ್ಳಿ ಹಾಗೂ ಇತರರು ಜೀವ ಬೆದರಿಕೆಯೊಡ್ಡಿದ್ದಾರೆ. ಮಾಲ್‌ ಪ್ರವೇಶ ದ್ವಾರದ ಎದುರು ನಿಂತು ಶ್ರೀರಾಮ್’ ಘೋಷಣೆ ಕೂಗಿದ್ದಾರೆ. ಸಾರ್ವಜನಿಕರನ್ನು ಧಾರ್ಮಿಕವಾಗಿ ಪ್ರಚೋದಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿಲಾಗಿದೆ.

ಇದ್ರೀಷ್‌ ಪಾಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ  ಪುನೀತ್ ಕೆರೆಹಳ್ಳಿ ಗೋ ರಕ್ಷಣೆಯ ಹೆಸರನ್ನು ಹೇಳಿಕೊಂಡು ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಈತನ ವಿರುದ್ಧ ಕೊಲೆ,  ಜಾತಿನಿಂದನೆ, ಗೂಂಡಾಗಿರಿ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ.

ಇತ್ತೀಚೆಗೆ ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟು ವರದಿ ನೀಡಿತ್ತು. ವರದಿಯನ್ವಯ ಆದೇಶ ಹೊರಡಿಸಿದ ಸರಕಾರ, ಪುನೀತ್‌ನನ್ನು ಬಂಧನಮುಕ್ತಗೊಳಿಸುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿತ್ತು.

ಇದನ್ನು ಓದಿ: ಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...