Homeಕರ್ನಾಟಕಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ...

ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬೆಂಗಳೂರಿನ ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾಗೆ ತೆರಳಿ ಮಾಲ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ ಬೆದರಿಕೆ ಹಾಕಿರುವ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ  ಸೇರಿದಂತೆ ಐವರ  ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಡಿ. 23ರಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದಲ್ಲಿ ಕ್ರಿಸ್ ಮಸ್ ಹಿನ್ನಲೆಯಲ್ಲಿ  ಕ್ರಿಸ್ ಮಸ್ ಟ್ರೀ  ಪ್ರದರ್ಶನ ಹಾಗೂ ಅದಕ್ಕೆ 200 ರೂ. ಟಿಕೆಟ್ ನಿಗದಿಪಡಿಸಲಾಗಿತ್ತು. ಇದಕ್ಕೆ ವಿರೋಧಿಸಿ ಪುನೀತ್‌ ಕೆರೆಹಳ್ಳಿ ಮತ್ತು ತಂಡ ಮಾಲ್‌ನ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಬಳಿ ವಾಗ್ವಾದ ನಡೆಸಿದ್ದಾರೆ. ಇದಲ್ಲದೆ ಡಿ.25 ಹಾಗೂ 31ರಂದು ಅದೇ ರೀತಿ ಗಲಾಟೆ ಮಾಡುವುದಾಗಿ ತಿಳಿಸಿ ಜೀವ ಬೆದರಿಕೆ ಹಾಕಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಹೋಗಿದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಪುನೀತ್ ಹಾಗೂ ಇತರರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಈ ಕುರಿತು ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಹಾಗೂ ಇತರರು ಅಕ್ರಮವಾಗಿ ಗುಂಪು ಕಟ್ಟಿಕೊಂಡು ಬಂದು ಜೀವ ಬೆದರಿಕೆಯೊಡ್ಡಿದ್ದಾರೆ. ಮಾಲ್ ಪ್ರವೇಶಿಸುತ್ತಿದ್ದ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಾರೆ. ಕ್ರಿಸ್ಮಸ್ ಹಬ್ಬವೆಂಬ ಕಾರಣಕ್ಕೆ ಅಲಂಕಾರ ಮಾಡಲಾಗಿದೆ. ಹಿಂದೂ ಹಬ್ಬವಿದ್ದಾಗಲೂ ಇದೇ ರೀತಿಯಲ್ಲಿ ಅಲಂಕಾರವಿರಬೇಕು. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿದ್ದು, ಅಂದು ಮಾಲ್‌ಗೆ ವಿಶೇಷ ಅಲಂಕಾರ ಮಾಡಬೇಕು. ಇಲ್ಲದಿದ್ದರೆ, ಸುಮ್ಮನೇ ಬಿಡುವುದಿಲ್ಲ ಎಂದು ಪುನೀತ್ ಕೆರೆಹಳ್ಳಿ ಹಾಗೂ ಇತರರು ಜೀವ ಬೆದರಿಕೆಯೊಡ್ಡಿದ್ದಾರೆ. ಮಾಲ್‌ ಪ್ರವೇಶ ದ್ವಾರದ ಎದುರು ನಿಂತು ಶ್ರೀರಾಮ್’ ಘೋಷಣೆ ಕೂಗಿದ್ದಾರೆ. ಸಾರ್ವಜನಿಕರನ್ನು ಧಾರ್ಮಿಕವಾಗಿ ಪ್ರಚೋದಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿಲಾಗಿದೆ.

ಇದ್ರೀಷ್‌ ಪಾಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ  ಪುನೀತ್ ಕೆರೆಹಳ್ಳಿ ಗೋ ರಕ್ಷಣೆಯ ಹೆಸರನ್ನು ಹೇಳಿಕೊಂಡು ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಈತನ ವಿರುದ್ಧ ಕೊಲೆ,  ಜಾತಿನಿಂದನೆ, ಗೂಂಡಾಗಿರಿ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ.

ಇತ್ತೀಚೆಗೆ ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟು ವರದಿ ನೀಡಿತ್ತು. ವರದಿಯನ್ವಯ ಆದೇಶ ಹೊರಡಿಸಿದ ಸರಕಾರ, ಪುನೀತ್‌ನನ್ನು ಬಂಧನಮುಕ್ತಗೊಳಿಸುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿತ್ತು.

ಇದನ್ನು ಓದಿ: ಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...