Homeಕರ್ನಾಟಕಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ...

ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬೆಂಗಳೂರಿನ ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾಗೆ ತೆರಳಿ ಮಾಲ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ ಬೆದರಿಕೆ ಹಾಕಿರುವ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ  ಸೇರಿದಂತೆ ಐವರ  ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಡಿ. 23ರಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದಲ್ಲಿ ಕ್ರಿಸ್ ಮಸ್ ಹಿನ್ನಲೆಯಲ್ಲಿ  ಕ್ರಿಸ್ ಮಸ್ ಟ್ರೀ  ಪ್ರದರ್ಶನ ಹಾಗೂ ಅದಕ್ಕೆ 200 ರೂ. ಟಿಕೆಟ್ ನಿಗದಿಪಡಿಸಲಾಗಿತ್ತು. ಇದಕ್ಕೆ ವಿರೋಧಿಸಿ ಪುನೀತ್‌ ಕೆರೆಹಳ್ಳಿ ಮತ್ತು ತಂಡ ಮಾಲ್‌ನ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಬಳಿ ವಾಗ್ವಾದ ನಡೆಸಿದ್ದಾರೆ. ಇದಲ್ಲದೆ ಡಿ.25 ಹಾಗೂ 31ರಂದು ಅದೇ ರೀತಿ ಗಲಾಟೆ ಮಾಡುವುದಾಗಿ ತಿಳಿಸಿ ಜೀವ ಬೆದರಿಕೆ ಹಾಕಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಹೋಗಿದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಪುನೀತ್ ಹಾಗೂ ಇತರರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಈ ಕುರಿತು ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಹಾಗೂ ಇತರರು ಅಕ್ರಮವಾಗಿ ಗುಂಪು ಕಟ್ಟಿಕೊಂಡು ಬಂದು ಜೀವ ಬೆದರಿಕೆಯೊಡ್ಡಿದ್ದಾರೆ. ಮಾಲ್ ಪ್ರವೇಶಿಸುತ್ತಿದ್ದ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಾರೆ. ಕ್ರಿಸ್ಮಸ್ ಹಬ್ಬವೆಂಬ ಕಾರಣಕ್ಕೆ ಅಲಂಕಾರ ಮಾಡಲಾಗಿದೆ. ಹಿಂದೂ ಹಬ್ಬವಿದ್ದಾಗಲೂ ಇದೇ ರೀತಿಯಲ್ಲಿ ಅಲಂಕಾರವಿರಬೇಕು. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿದ್ದು, ಅಂದು ಮಾಲ್‌ಗೆ ವಿಶೇಷ ಅಲಂಕಾರ ಮಾಡಬೇಕು. ಇಲ್ಲದಿದ್ದರೆ, ಸುಮ್ಮನೇ ಬಿಡುವುದಿಲ್ಲ ಎಂದು ಪುನೀತ್ ಕೆರೆಹಳ್ಳಿ ಹಾಗೂ ಇತರರು ಜೀವ ಬೆದರಿಕೆಯೊಡ್ಡಿದ್ದಾರೆ. ಮಾಲ್‌ ಪ್ರವೇಶ ದ್ವಾರದ ಎದುರು ನಿಂತು ಶ್ರೀರಾಮ್’ ಘೋಷಣೆ ಕೂಗಿದ್ದಾರೆ. ಸಾರ್ವಜನಿಕರನ್ನು ಧಾರ್ಮಿಕವಾಗಿ ಪ್ರಚೋದಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿಲಾಗಿದೆ.

ಇದ್ರೀಷ್‌ ಪಾಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ  ಪುನೀತ್ ಕೆರೆಹಳ್ಳಿ ಗೋ ರಕ್ಷಣೆಯ ಹೆಸರನ್ನು ಹೇಳಿಕೊಂಡು ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಈತನ ವಿರುದ್ಧ ಕೊಲೆ,  ಜಾತಿನಿಂದನೆ, ಗೂಂಡಾಗಿರಿ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ.

ಇತ್ತೀಚೆಗೆ ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟು ವರದಿ ನೀಡಿತ್ತು. ವರದಿಯನ್ವಯ ಆದೇಶ ಹೊರಡಿಸಿದ ಸರಕಾರ, ಪುನೀತ್‌ನನ್ನು ಬಂಧನಮುಕ್ತಗೊಳಿಸುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿತ್ತು.

ಇದನ್ನು ಓದಿ: ಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...