Homeಮುಖಪುಟಬಿಜೆಪಿ ಆಡಳಿತದ ರಾಜ್ಯಗಳು ದಲಿತ ದೌರ್ಜನ್ಯ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ: ಕುಮಾರಿ ಸೆಲ್ಜಾ

ಬಿಜೆಪಿ ಆಡಳಿತದ ರಾಜ್ಯಗಳು ದಲಿತ ದೌರ್ಜನ್ಯ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ: ಕುಮಾರಿ ಸೆಲ್ಜಾ

- Advertisement -
- Advertisement -

‘ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಪರಿಶಿಷ್ಟರ ಮೇಲಿನ ದೌರ್ಜನ್ಯದ ಪ್ರಯೋಗಾಲಯಗಳಾಗಿ ಬದಲಾಗುತ್ತಿವೆ” ಎಂದು ಸಿರ್ಸಾ ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ ಆರೋಪಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳು ದಲಿತರ ಮೇಲಿನ ದೌರ್ಜನ್ಯಗಳ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ. ಮೀಸಲಾತಿ ಸ್ಥಾನಗಳು ಭರ್ತಿಯಾಗದೆ ಉಳಿದಿವೆ, ದಲಿತರ ಕಲ್ಯಾಣಕ್ಕಾಗಿ ಘೋಷಣೆಗಳನ್ನು ಚುನಾವಣೆ ಸಮಯದಲ್ಲಿ ಮಾತ್ರ ಮಾಡಲಾಗುತ್ತದೆ. ಚುನಾವಣೆ ಮುಗಿದ ಮೇಲೆ ದಲಿತರನ್ನು ಮರೆತು ದಬ್ಬಾಳಿಕೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕಾಗಿ ಪರೀಕ್ಷೆಯನ್ನು ನಿರಾಕರಿಸಿದ ದಲಿತ ಬಾಲಕಿ ದೀಕ್ಷಾ ಅವರ ದುರಂತ ಆತ್ಮಹತ್ಯೆಯ ವಿಷಯವನ್ನು ಪ್ರಸ್ತಾಪಿಸಿದ ಸೆಲ್ಜಾ, “ಅಂಚಿನಲ್ಲಿರುವ ಸಮುದಾಯಗಳನ್ನು ರಕ್ಷಿಸುವಲ್ಲಿ ಬಿಜೆಪಿ ವಿಫಲವಾಗಿದೆ. ದೀಕ್ಷಾ ಅವರ ಏಕೈಕ ದೋಷವೆಂದರೆ, ಬಡ ದಲಿತ ಕುಟುಂಬದಲ್ಲಿ ಜನಿಸಿದ್ದು. ಈ ಘಟನೆಯು ಬಿಜೆಪಿಯ ‘ಬೇಟಿ ಬಚಾವೋ, ಬೇಟಿ ಪಢಾವೋ’ ಘೋಷಣೆಯ ಪೊಳ್ಳು ಸ್ವರೂಪವನ್ನು ಬಹಿರಂಗಪಡಿಸುತ್ತದೆ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಸರ್ಕಾರವು ತಾರತಮ್ಯವನ್ನು ಯಾವಾಗ ಕೊನೆಗೊಳಿಸುತ್ತದೆ ಎಂದು ಅವರು ಪ್ರಶ್ನಿಸಿದರು. “ಬಿಜೆಪಿಯ ಅಭಿವೃದ್ಧಿಯ ಮಾದರಿಯು ಆಯ್ದ ಕೆಲವರಿಗೆ ಸೀಮಿತವಾಗಿದೆಯೇ? ದಲಿತ ಮತ್ತು ದುರ್ಬಲ ವರ್ಗದ ಮಕ್ಕಳ ಕನಸುಗಳಿಗೆ ಬೆಲೆ ಇಲ್ಲವೇ” ಎಂದು ಅವರು ಪ್ರಶ್ನಿಸಿದ್ದಾರೆ.

ಧಾರ್ಮಿಕ ಮತಾಂತರದ ಆರೋಪದ ಮೇಲೆ ಒಡಿಶಾದಲ್ಲಿ ಬುಡಕಟ್ಟು ಮಹಿಳೆಯರನ್ನು ಥಳಿಸಿರುವುದು ಮತ್ತು ಮಧ್ಯಪ್ರದೇಶದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ದಲಿತ ಯುವಕನ ಸಾವು ಸೇರಿದಂತೆ ದಬ್ಬಾಳಿಕೆಯ ಅನೇಕ ಘಟನೆಗಳನ್ನು ಸೆಲ್ಜಾ ಉಲ್ಲೇಖಿಸಿದ್ದಾರೆ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ.

‘ಬಿಜೆಪಿ ಆಡಳಿತವಿರುವ ರಾಜ್ಯಗಳು ದಲಿತರ ಮೇಲಿನ ದೌರ್ಜನ್ಯಗಳ ಪ್ರಯೋಗಾಲಯಗಳಾಗಿ ಮಾರ್ಪಟ್ಟಿವೆ. ಮೀಸಲಾತಿ ಸ್ಥಾನಗಳು ಭರ್ತಿಯಾಗದೆ ಉಳಿದಿವೆ ಮತ್ತು ದಲಿತರ ಕಲ್ಯಾಣಕ್ಕಾಗಿ ಘೋಷಣೆಗಳನ್ನು ಚುನಾವಣೆ ಸಮಯದಲ್ಲಿ ಮಾತ್ರ ಮಾಡಲಾಗುತ್ತದೆ. ಚುನಾವಣೆ ಮುಗಿದ ನಂತರ ದಲಿತರನ್ನು ಮರೆತು ದಬ್ಬಾಳಿಕೆ ಮುಂದುವರಿದಿದೆ” ಎಂದು ಆರೋಪಿಸಿದರು.

ಹರಿಯಾಣ ಮತ್ತು ಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ದಲಿತ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರಗಳನ್ನು ಅವರು ಟೀಕಿಸಿದರು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತರು ಮತ್ತು ಆದಿವಾಸಿಗಳ ಮೇಲಿನ ದೌರ್ಜನ್ಯಗಳು ನಿರಂತರವಾಗಿ ಏಕೆ ಹೆಚ್ಚುತ್ತಿವೆ ಎಂದು ಕೇಳಿದ್ದಾರೆ.

ಹರಿಯಾಣದ 22% ಮತದಾರರನ್ನು ಒಳಗೊಂಡಿರುವ ದಲಿತರು ಸಾಮಾನ್ಯವಾಗಿ ಸಂಪನ್ಮೂಲಗಳು ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳಿಂದ ವಂಚಿತರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ತಿಳಿಸಿದರು. “ದಲಿತರು ಹೆಚ್ಚಾಗಿ ಸಣ್ಣ ಕೆಲಸಗಳಲ್ಲಿ ಅಥವಾ ಭೂಮಾಲೀಕರ ಹೊಲಗಳಲ್ಲಿ ದುಡಿಮೆಯಲ್ಲಿ ಬದುಕುತ್ತಾರೆ. ಅವರಿಗೆ ನೀಡಲಾದ ಸಾಂವಿಧಾನಿಕ ಹಕ್ಕುಗಳು ಹರಿಯಾಣದಲ್ಲಿ ಕಡಿಮೆ ಪ್ರಾಮುಖ್ಯತೆಯನ್ನು ಹೊಂದಿವೆ” ಎಂದು ಅವರು ಹೇಳಿದರು.

29% ಜಾಟ್ ಮತ್ತು ಜಾಟ್ ಸಿಖ್ ಮತದಾರರ ನಂತರ ಹರಿಯಾಣದಲ್ಲಿ ದಲಿತರು ಎರಡನೇ ಅತಿದೊಡ್ಡ ಮತ ಬ್ಯಾಂಕ್ ಆಗಿದ್ದಾರೆ. ಆದರೆ, ಅವರ ಧ್ವನಿಯನ್ನು ಸಾಮಾನ್ಯವಾಗಿ ನಿರ್ಲಕ್ಷಿಸಲಾಗುತ್ತದೆ ಎಂದು ಸೆಲ್ಜಾ ಹೇಳಿದರು. “ಇಲ್ಲಿನ ಸಮುದಾಯಗಳು ಸಾಮರಸ್ಯದಿಂದ ಬದುಕುತ್ತಿರುವಾಗ, ಕೆಲವು ಅಂಶಗಳು ಆಗಾಗ್ಗೆ ಈ ಸಾಮರಸ್ಯವನ್ನು ಹಾಳುಮಾಡುತ್ತವೆ. ಆಳುವ ಶಕ್ತಿಗಳು ಮೌನವಾಗಿದ್ದು, ಅನ್ಯಾಯಗಳು ಮುಂದುವರಿಯಲು ಅವಕಾಶ ಮಾಡಿಕೊಡುತ್ತವೆ” ಎಂದು ಅವರು ಹೇಳಿದರು.

“ಸಬ್ಕಾ ಸಾಥ್, ಸಬ್ಕಾ ವಿಕಾಸ್” (ಎಲ್ಲರಿಗೂ ಅಭಿವೃದ್ಧಿ) ಎಂಬ ತನ್ನ ಘೋಷಣೆಗೆ ಬಿಜೆಪಿಯ ಬದ್ಧತೆಯನ್ನು ಪ್ರಶ್ನಿಸಿದ ಅವರು, “ದುರ್ಬಲ ಮತ್ತು ಹಿಂದುಳಿದ ವರ್ಗಗಳ ದಬ್ಬಾಳಿಕೆ ಈ ಘೋಷಣೆಯ ಹೊಸ ವ್ಯಾಖ್ಯಾನವೇ” ಎಂದರು.

ದಲಿತರು ಅನೇಕ ಹಂತಗಳಲ್ಲಿ ಅವಮಾನಕ್ಕೊಳಗಾಗುತ್ತಾರೆ; ತುಳಿತಕ್ಕೊಳಗಾಗುತ್ತಾರೆ. ಇಂದು, ದಲಿತರು ಘನತೆಯಿಂದ ಬದುಕಲು ಬಯಸುತ್ತಾರೆ. ಆದರೆ, ಇದು ಕೆಲವರಿಗೆ ಸ್ವೀಕಾರಾರ್ಹವಲ್ಲ. ದಲಿತ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸರ್ಕಾರ ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ; ಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...