Homeಮುಖಪುಟಬಿಜೆಪಿ ಆಡಳಿತದ ರಾಜ್ಯಗಳು ದಲಿತ ದೌರ್ಜನ್ಯ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ: ಕುಮಾರಿ ಸೆಲ್ಜಾ

ಬಿಜೆಪಿ ಆಡಳಿತದ ರಾಜ್ಯಗಳು ದಲಿತ ದೌರ್ಜನ್ಯ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ: ಕುಮಾರಿ ಸೆಲ್ಜಾ

- Advertisement -
- Advertisement -

‘ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಪರಿಶಿಷ್ಟರ ಮೇಲಿನ ದೌರ್ಜನ್ಯದ ಪ್ರಯೋಗಾಲಯಗಳಾಗಿ ಬದಲಾಗುತ್ತಿವೆ” ಎಂದು ಸಿರ್ಸಾ ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ ಆರೋಪಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳು ದಲಿತರ ಮೇಲಿನ ದೌರ್ಜನ್ಯಗಳ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ. ಮೀಸಲಾತಿ ಸ್ಥಾನಗಳು ಭರ್ತಿಯಾಗದೆ ಉಳಿದಿವೆ, ದಲಿತರ ಕಲ್ಯಾಣಕ್ಕಾಗಿ ಘೋಷಣೆಗಳನ್ನು ಚುನಾವಣೆ ಸಮಯದಲ್ಲಿ ಮಾತ್ರ ಮಾಡಲಾಗುತ್ತದೆ. ಚುನಾವಣೆ ಮುಗಿದ ಮೇಲೆ ದಲಿತರನ್ನು ಮರೆತು ದಬ್ಬಾಳಿಕೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕಾಗಿ ಪರೀಕ್ಷೆಯನ್ನು ನಿರಾಕರಿಸಿದ ದಲಿತ ಬಾಲಕಿ ದೀಕ್ಷಾ ಅವರ ದುರಂತ ಆತ್ಮಹತ್ಯೆಯ ವಿಷಯವನ್ನು ಪ್ರಸ್ತಾಪಿಸಿದ ಸೆಲ್ಜಾ, “ಅಂಚಿನಲ್ಲಿರುವ ಸಮುದಾಯಗಳನ್ನು ರಕ್ಷಿಸುವಲ್ಲಿ ಬಿಜೆಪಿ ವಿಫಲವಾಗಿದೆ. ದೀಕ್ಷಾ ಅವರ ಏಕೈಕ ದೋಷವೆಂದರೆ, ಬಡ ದಲಿತ ಕುಟುಂಬದಲ್ಲಿ ಜನಿಸಿದ್ದು. ಈ ಘಟನೆಯು ಬಿಜೆಪಿಯ ‘ಬೇಟಿ ಬಚಾವೋ, ಬೇಟಿ ಪಢಾವೋ’ ಘೋಷಣೆಯ ಪೊಳ್ಳು ಸ್ವರೂಪವನ್ನು ಬಹಿರಂಗಪಡಿಸುತ್ತದೆ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಸರ್ಕಾರವು ತಾರತಮ್ಯವನ್ನು ಯಾವಾಗ ಕೊನೆಗೊಳಿಸುತ್ತದೆ ಎಂದು ಅವರು ಪ್ರಶ್ನಿಸಿದರು. “ಬಿಜೆಪಿಯ ಅಭಿವೃದ್ಧಿಯ ಮಾದರಿಯು ಆಯ್ದ ಕೆಲವರಿಗೆ ಸೀಮಿತವಾಗಿದೆಯೇ? ದಲಿತ ಮತ್ತು ದುರ್ಬಲ ವರ್ಗದ ಮಕ್ಕಳ ಕನಸುಗಳಿಗೆ ಬೆಲೆ ಇಲ್ಲವೇ” ಎಂದು ಅವರು ಪ್ರಶ್ನಿಸಿದ್ದಾರೆ.

ಧಾರ್ಮಿಕ ಮತಾಂತರದ ಆರೋಪದ ಮೇಲೆ ಒಡಿಶಾದಲ್ಲಿ ಬುಡಕಟ್ಟು ಮಹಿಳೆಯರನ್ನು ಥಳಿಸಿರುವುದು ಮತ್ತು ಮಧ್ಯಪ್ರದೇಶದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ದಲಿತ ಯುವಕನ ಸಾವು ಸೇರಿದಂತೆ ದಬ್ಬಾಳಿಕೆಯ ಅನೇಕ ಘಟನೆಗಳನ್ನು ಸೆಲ್ಜಾ ಉಲ್ಲೇಖಿಸಿದ್ದಾರೆ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ.

‘ಬಿಜೆಪಿ ಆಡಳಿತವಿರುವ ರಾಜ್ಯಗಳು ದಲಿತರ ಮೇಲಿನ ದೌರ್ಜನ್ಯಗಳ ಪ್ರಯೋಗಾಲಯಗಳಾಗಿ ಮಾರ್ಪಟ್ಟಿವೆ. ಮೀಸಲಾತಿ ಸ್ಥಾನಗಳು ಭರ್ತಿಯಾಗದೆ ಉಳಿದಿವೆ ಮತ್ತು ದಲಿತರ ಕಲ್ಯಾಣಕ್ಕಾಗಿ ಘೋಷಣೆಗಳನ್ನು ಚುನಾವಣೆ ಸಮಯದಲ್ಲಿ ಮಾತ್ರ ಮಾಡಲಾಗುತ್ತದೆ. ಚುನಾವಣೆ ಮುಗಿದ ನಂತರ ದಲಿತರನ್ನು ಮರೆತು ದಬ್ಬಾಳಿಕೆ ಮುಂದುವರಿದಿದೆ” ಎಂದು ಆರೋಪಿಸಿದರು.

ಹರಿಯಾಣ ಮತ್ತು ಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ದಲಿತ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರಗಳನ್ನು ಅವರು ಟೀಕಿಸಿದರು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತರು ಮತ್ತು ಆದಿವಾಸಿಗಳ ಮೇಲಿನ ದೌರ್ಜನ್ಯಗಳು ನಿರಂತರವಾಗಿ ಏಕೆ ಹೆಚ್ಚುತ್ತಿವೆ ಎಂದು ಕೇಳಿದ್ದಾರೆ.

ಹರಿಯಾಣದ 22% ಮತದಾರರನ್ನು ಒಳಗೊಂಡಿರುವ ದಲಿತರು ಸಾಮಾನ್ಯವಾಗಿ ಸಂಪನ್ಮೂಲಗಳು ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳಿಂದ ವಂಚಿತರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ತಿಳಿಸಿದರು. “ದಲಿತರು ಹೆಚ್ಚಾಗಿ ಸಣ್ಣ ಕೆಲಸಗಳಲ್ಲಿ ಅಥವಾ ಭೂಮಾಲೀಕರ ಹೊಲಗಳಲ್ಲಿ ದುಡಿಮೆಯಲ್ಲಿ ಬದುಕುತ್ತಾರೆ. ಅವರಿಗೆ ನೀಡಲಾದ ಸಾಂವಿಧಾನಿಕ ಹಕ್ಕುಗಳು ಹರಿಯಾಣದಲ್ಲಿ ಕಡಿಮೆ ಪ್ರಾಮುಖ್ಯತೆಯನ್ನು ಹೊಂದಿವೆ” ಎಂದು ಅವರು ಹೇಳಿದರು.

29% ಜಾಟ್ ಮತ್ತು ಜಾಟ್ ಸಿಖ್ ಮತದಾರರ ನಂತರ ಹರಿಯಾಣದಲ್ಲಿ ದಲಿತರು ಎರಡನೇ ಅತಿದೊಡ್ಡ ಮತ ಬ್ಯಾಂಕ್ ಆಗಿದ್ದಾರೆ. ಆದರೆ, ಅವರ ಧ್ವನಿಯನ್ನು ಸಾಮಾನ್ಯವಾಗಿ ನಿರ್ಲಕ್ಷಿಸಲಾಗುತ್ತದೆ ಎಂದು ಸೆಲ್ಜಾ ಹೇಳಿದರು. “ಇಲ್ಲಿನ ಸಮುದಾಯಗಳು ಸಾಮರಸ್ಯದಿಂದ ಬದುಕುತ್ತಿರುವಾಗ, ಕೆಲವು ಅಂಶಗಳು ಆಗಾಗ್ಗೆ ಈ ಸಾಮರಸ್ಯವನ್ನು ಹಾಳುಮಾಡುತ್ತವೆ. ಆಳುವ ಶಕ್ತಿಗಳು ಮೌನವಾಗಿದ್ದು, ಅನ್ಯಾಯಗಳು ಮುಂದುವರಿಯಲು ಅವಕಾಶ ಮಾಡಿಕೊಡುತ್ತವೆ” ಎಂದು ಅವರು ಹೇಳಿದರು.

“ಸಬ್ಕಾ ಸಾಥ್, ಸಬ್ಕಾ ವಿಕಾಸ್” (ಎಲ್ಲರಿಗೂ ಅಭಿವೃದ್ಧಿ) ಎಂಬ ತನ್ನ ಘೋಷಣೆಗೆ ಬಿಜೆಪಿಯ ಬದ್ಧತೆಯನ್ನು ಪ್ರಶ್ನಿಸಿದ ಅವರು, “ದುರ್ಬಲ ಮತ್ತು ಹಿಂದುಳಿದ ವರ್ಗಗಳ ದಬ್ಬಾಳಿಕೆ ಈ ಘೋಷಣೆಯ ಹೊಸ ವ್ಯಾಖ್ಯಾನವೇ” ಎಂದರು.

ದಲಿತರು ಅನೇಕ ಹಂತಗಳಲ್ಲಿ ಅವಮಾನಕ್ಕೊಳಗಾಗುತ್ತಾರೆ; ತುಳಿತಕ್ಕೊಳಗಾಗುತ್ತಾರೆ. ಇಂದು, ದಲಿತರು ಘನತೆಯಿಂದ ಬದುಕಲು ಬಯಸುತ್ತಾರೆ. ಆದರೆ, ಇದು ಕೆಲವರಿಗೆ ಸ್ವೀಕಾರಾರ್ಹವಲ್ಲ. ದಲಿತ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸರ್ಕಾರ ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ; ಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...