Homeಕರ್ನಾಟಕರೈತರು, ವಿದ್ಯಾರ್ಥಿಗಳು, ಸಾಮಾನ್ಯರ ಪ್ರಕರಣಗಳನ್ನೂ ವಾಪಸ್ ಪಡೆಯಲಾಗಿದೆ : ಸಚಿವ ಪರಮೇಶ್ವರ್

ರೈತರು, ವಿದ್ಯಾರ್ಥಿಗಳು, ಸಾಮಾನ್ಯರ ಪ್ರಕರಣಗಳನ್ನೂ ವಾಪಸ್ ಪಡೆಯಲಾಗಿದೆ : ಸಚಿವ ಪರಮೇಶ್ವರ್

- Advertisement -
- Advertisement -

ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಮಾತ್ರ ಹಿಂಪಡೆದಿಲ್ಲ. ರೈತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರು ಕೈಗೊಂಡಿದ್ದ ಪ್ರತಿಭಟನೆಯ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಇಂದು (ಅ.14) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾನೂನಿನ ಚೌಕಟ್ಟಿನಲ್ಲಿ ಪ್ರಕರಣಗಳನ್ನು ಹಿಂಪಡೆಯುವ ಪ್ರಕ್ರಿಯೆ ಮಾಡಿದ್ದೇವೆ. ನ್ಯಾಯಾಲಯ ಒಪ್ಪಿದರೆ ಪ್ರಕರಣ ರದ್ದಾಗಲಿದೆ. ಇಲ್ಲವಾದರೆ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

“ನಮ್ಮ ಮುಂದೆ 56 ಪ್ರಕರಣಗಳು ಬಂದಿದ್ದವು. ಆ ಪೈಕಿ 43 ಅನ್ನು ವಾಪಸ್ ಪಡೆದಿದ್ದೇವೆ. ಇವುಗಳಲ್ಲಿ ಬರೀ ಅಲ್ಪಸಂಖ್ಯಾತರದ್ದೇ ಇವೆಯಾ? ರೈತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರ ಪ್ರಕರಣಗಳಿವೆ. ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿದ್ದರೆ, 43 ಪ್ರಕರಣಗಳೂ ಅಲ್ಪಸಂಖ್ಯಾತರಿಗೆ ಸೇರಿದ್ದಾಗಿದ್ದರೆ ಬಿಜೆಪಿಯವರ ಆರೋಪವನ್ನು ಒಪ್ಪಿಕೊಳ್ಳಬಹುದಿತ್ತು” ಎಂದಿದ್ದಾರೆ.

“ಯಾವುದೇ ಪ್ರಕರಣವನ್ನು ವಾಪಸ್ ಪಡೆಯಬೇಕಾದರೆ, ಅದಕ್ಕೊಂದು ಪ್ರಕ್ರಿಯೆ ಇದೆ. ಸುಳ್ಳು ಕೇಸ್ ಹಾಕಿದ್ದಾರೆ, ಪೂರಕವಾದ ಸೆಕ್ಷನ್ ಹಾಕಿಲ್ಲ, ನಡೆದಿರುವ ಘಟನೆಯೇ ಬೇರೆ ದಾಖಲಿಸಿರುವ ಕೇಸ್ ಬೇರೆ ಎಂದು ಆರೋಪಿಸಿ ಮನವಿ ಕೊಟ್ಟಿರುತ್ತಾರೆ. ಅದನ್ನು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸುತ್ತದೆ. ಸಾಮಾನ್ಯವಾಗಿ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ಮಾಡಿರುತ್ತಾರೆ. ನಮಗೆ ಬರುವ ಮನವಿಗಳನ್ನು ಇಲಾಖೆಗೆ ಕಳುಹಿಸುತ್ತೇವೆ. ಅವರು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಸಾಕ್ಷ್ಯ ಸಂಗ್ರಹಣೆಯಲ್ಲಿ ಆದ ಲೋಪದೋಷಗಳನ್ನು ಪರಿಶೀಲಿಸಿ ಸಂಪುಟ ಉಪ ಸಮಿತಿ ಮುಂದೆ ತರುತ್ತಾರೆ” ಎಂದು ತಿಳಿಸಿದ್ದಾರೆ.

“ಸಂಪುಟ ಉಪ ಸಮಿತಿ ಪ್ರಕರಣಗಳ ಬಗ್ಗೆ ಚರ್ಚಿಸುತ್ತದೆ. ಹುಬ್ಬಳ್ಳಿ ಪ್ರಕರಣದಲ್ಲೂ ಮನವಿ ಕೊಟ್ಟಿದ್ದರು. ಅಷ್ಟೊಂದು ಜನರ ಮೇಲೆ ಪ್ರಕರಣ ದಾಖಲಿಸುವ ಅಗತ್ಯವಿಲ್ಲ ಎಂಬುವುದು ಚರ್ಚೆಯಾಗಿ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದಿದ್ದಾರೆ.

“ನಮ್ಮ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸಬೇಕು. ನ್ಯಾಯಾಲಯ ಒಪ್ಪಿದರೆ ಮಾತ್ರ ಪ್ರಕರಣ ವಾಪಸ್ ಪಡೆಯಲು ಸಾಧ್ಯ, ಇಲ್ಲವಾದರೆ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

“ಬಿಜೆಪಿ ಸರ್ಕಾರ ಇರುವಾಗಲೂ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ. ಬಿಜೆಪಿ ಆಡಳಿತ ರಾಜ್ಯಗಳಲ್ಲೂ ಇದನ್ನು ಮಾಡಲಾಗುತ್ತದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಆದ ಬಳಿಕ, ಅವರ ವಿರುದ್ದದ ಪ್ರಕರಣವನ್ನು ಅವರೇ ವಾಪಸ್ ಪಡೆದಿದ್ದರು. ಬಿಜೆಪಿಯವರ ಯಾರ ಮೇಲೆ ಆಪಾದನೆ ಹೊರಿಸುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...