Homeಮುಖಪುಟಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

ಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

- Advertisement -
- Advertisement -

ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 2023 ರಿಂದ ಜೈಲಿನಲ್ಲಿರುವ ತಮಿಳುನಾಡಿನ ಮಾಜಿ ವಿದ್ಯುತ್ ಸಚಿವ ವಿ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್, ಅವರ ಆರೋಗ್ಯವನ್ನು ಉಲ್ಲೇಖಿಸಿ ಜಾಮೀನು ಅರ್ಜಿಯ ವಾದ ಆಲಿಸಲು ನಿರಾಕರಿಸಿತು. ಅವರ ವಾದಗಳಿಂದ ನಾವು ತೃಪ್ತಿ ಹೊಂದಿಲ್ಲ, ಅವರ ಸ್ಥಿತಿಯನ್ನು ಔಷಧಿಗಳಿಂದ ಗುಣಪಡಿಸಬಹುದು ಎಂದು ಹೇಳಿತ್ತು.

ಬಾಲಾಜಿ ಅವರು 2011-2016 ರ ಹಿಂದಿನ ಜಯಲಲಿತಾ ಅವರ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದಾಗ ಮನಿ-ಲಾಂಡರಿಂಗ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರು ಡಿಸೆಂಬರ್ 2018 ರಲ್ಲಿ ಪಕ್ಷದ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರ ಸಮ್ಮುಖದಲ್ಲಿ ಪ್ರಸ್ತುತ ಆಡಳಿತ ಪಕ್ಷವಾದ ಡಿಎಂಕೆಗೆ ಸೇರಿ ಸಚಿವರಾಗಿದ್ದರು.

ಬಾಲಾಜಿ ಅವರ ಜಾಮೀನು ಅರ್ಜಿಗಳನ್ನು ಫೆಬ್ರವರಿಯಲ್ಲಿ ಮದ್ರಾಸ್ ಹೈಕೋರ್ಟ್ ಎರಡು ಬಾರಿ ವಜಾಗೊಳಿಸಿತು. ಮೂರು ಬಾರಿ ವಿಚಾರಣಾ ನ್ಯಾಯಾಲಯವು ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ಸರ್ವೋಚ್ಚ ನ್ಯಾಯಾಲಯವು ಪರಿಹಾರ ನೀಡಿದ ನಂತರ ಮಾತನಾಡಿದ ಅವರ ವಕೀಲ ಎನ್‌ಆರ್ ಇಳಂಗೊ, “ಪೂರ್ವಭಾವಿ ಅಪರಾಧ ಮತ್ತು ಪಿಎಂಎಲ್‌ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ಪ್ರಕರಣದಲ್ಲಿ ವಿಚಾರಣೆಯನ್ನು ನಡೆಸುವಲ್ಲಿ ದೀರ್ಘ ವಿಳಂಬ ಇರಬಹುದು” ಎಂದರು.

“ಕೆಲವು ಷರತ್ತುಗಳ ಮೇಲೆ ಜಾಮೀನು ನೀಡಲಾಗಿದೆ, ಅವರು ವಾರಕ್ಕೆ ಎರಡು ಬಾರಿ ಅಧಿಕಾರಿಗಳ ಮುಂದೆ ಹಾಜರಾಗಬೇಕು, ಸಾಕ್ಷ್ಯ ಅಥವಾ ಸಾಕ್ಷಿಗಳನ್ನು ಹಾಳು ಮಾಡಬಾರದು ಮತ್ತು ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು” ಎಂದು ವಕೀಲರು ಮಾಹಿತಿ ನೀಡಿದ್ದಾರೆ.

ಬಾಲಾಜಿ ಅವರ ಬಿಡುಗಡೆಯನ್ನು ಅವರ ಬೆಂಬಲಿಗರು ಮತ್ತು ಡಿಎಂಕೆ ಪಕ್ಷದ ಕಾರ್ಯಕರ್ತರು ಪಟಾಕಿ ಸಂಭ್ರಮಿಸಿದ್ದಾರೆ. ಪಕ್ಷದ ಧ್ವಜಗಳನ್ನು ಬೀಸಿ, ಅವರ ಹೆಸರಿನಲ್ಲಿ ಘೋಷಣೆಗಳನ್ನು ಕೂಗಿದರು.

ಈಗ ಅವರನ್ನು ತಮಿಳುನಾಡು ಸಚಿವ ಸಂಪುಟಕ್ಕೆ ಮರುಸೇರ್ಪಡೆ ಮಾಡಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಬೆಂಬಲದ ಸೂಚಕವಾಗಿ ಸ್ಟಾಲಿನ್ ಅವರು ಬಾಲಾಜಿ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡಿದ್ದರು. ಆದರೆ, ಅದು ರಾಜ್ಯಪಾಲ ಆರ್‌ಎನ್ ರವಿ ಅವರೊಂದಿಗೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ರಾಜಕೀಯ ಒತ್ತಾಯಗಳು ಸಾರ್ವಜನಿಕ ನೈತಿಕತೆಯನ್ನು ಮೀರಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ ನಂತರ ಅವರು ಫೆಬ್ರವರಿಯಲ್ಲಿ ರಾಜೀನಾಮೆ ನೀಡಿದರು.

ಕಳೆದ ವರ್ಷ, ಗಂಟೆಗಳ ವಿಚಾರಣೆಯ ನಂತರ ಅವರನ್ನು ಅವರನ್ನು ಬಂಧಿಸಲಾಯಿತು; ಜಾರಿ ನಿರ್ದೇಶನಾಲಯವು ಅವರನ್ನು ವಶಕ್ಕೆ ತೆಗೆದುಕೊಂಡಿತ್ತು. ಕೆಲವೇ ಗಂಟೆಗಳ ಬಳಿಕ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಚೆನ್ನೈ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್‌ ಚಿಕಿತ್ಸೆಗೆ ಒಳಗಾಗಿದ್ದರು.

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಾಲಾಜಿ ತಮ್ಮ ಅಳಲು ತೋಡಿಕೊಂಡರು. ಆಂಬ್ಯುಲೆನ್ಸ್‌ನಲ್ಲಿ ಮತ್ತು ನಂತರ ಆಸ್ಪತ್ರೆಯಲ್ಲಿ ಅವರು ಅಳುತ್ತಿರುವ ದೃಶ್ಯಗಳು ವ್ಯಾಪಕವಾಗಿ ವೈರಲ್ ಆಗಿತ್ತು. ಅವರ ಹಲವಾರು ಡಿಎಂಕೆ ಸಹೋದ್ಯೋಗಿಗಳು ಬೆಂಬಲವಾಗಿ ಮಾತನಾಡಿದರು, ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಫೆಡರಲ್ ಏಜೆನ್ಸಿಯನ್ನು ದೂಷಿಸಿದರು.

ಇದನ್ನೂ ಓದಿ; ಇಸ್ರೇಲ್ ವಾಯುದಾಳಿ: ಲೆಬನಾನ್‌ ಪ್ರಯಾಣ ತಪ್ಪಿಸುವಂತೆ ಭಾರತೀಯ ರಾಯಭಾರ ಕಚೇರಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...