Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿ ವರದಿ ಲೋಕಸಭೆಯಲ್ಲಿ ಮಂಡನೆ

ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿ ವರದಿ ಲೋಕಸಭೆಯಲ್ಲಿ ಮಂಡನೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಪ್ರಶ್ನೆಗಾಗಿ ನಗದು ಆರೋಪದ ಕುರಿತು ಲೋಕಸಭೆಯ ನೈತಿಕ ಸಮಿತಿಯು ಇಂದು (ಶುಕ್ರವಾರ) ಲೋಕಸಭೆಯಲ್ಲಿ ವರದಿ ಮಂಡಿಸಿದೆ.

ಸಮಿತಿಯ ಮುಖ್ಯಸ್ಥ, ಬಿಜೆಪಿ ಸಂಸದ ವಿಜಯ್ ಸೋನ್ಕರ್‌ ಅವರು ವರದಿಯನ್ನು ಮಂಡಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಗದ್ದಲ ಉಂಟಾಯಿತು. ಪರಿಣಾಮ ಎರಡು ಗಂಟೆಗಳ ಕಾಲ ಸದನವನ್ನು ಮುಂದೂಡಲಾಯಿತು.

ಹಣ ಪಡೆದು ತಮ್ಮ ಸಂಸದೀಯ ಪೋರ್ಟಲ್ ಬಳಸಿ ಉದ್ಯಮಿ ದರ್ಶನ್ ಹಿರಾನಂದಾನಿಗೆ ಪ್ರಶ್ನೆಗಳನ್ನು ಕೇಳಲು ಮಹುವಾ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಸಮಿತಿಯು ಶಿಫಾರಸು ಮಾಡಿದೆ ಎಂದು ವರದಿಯಾಗಿದೆ.

“ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವ ಪ್ರಸ್ತಾಪವನ್ನು ಕಾಂಗ್ರೆಸ್ ವಿರೋಧಿಸಲಿದೆ. ಇದು ಸಂಸತ್ತಿನ ಮೇಲಿನ ದಾಳಿಯಾಗಿದೆ. ಮಹುವಾ ಅವರು ಕಾರ್ಪೊರೇಟ್‌ಗೆ ಸಂಬಂಧಿಸಿದ ಪ್ರಶ್ನೆ ಕೇಳಿದ್ದಕ್ಕೆ ನೈತಿಕ ಸಮಿತಿಯ ಮೂಲಕ ಅನರ್ಹಗೊಳಿಸುವ ಸಂಚು ನಡೆಯುತ್ತಿದೆ” ಎಂದು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.

ತೃಣಮೂಲ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರು ವರದಿಯನ್ನು ಅಧ್ಯಯನ ಮಾಡಲು 48 ಗಂಟೆಗಳ ಕಾಲಾವಕಾಶ ನೀಡಬೇಕು ಎಂದು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ : ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಯಾಚಿಸಿದ ಬಿಜೆಪಿ ಸಂಸದ ರಮೇಶ್ ಬಿಧುರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...