Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ಮಾಹಿತಿ ಸೋರಿಕೆ ಮಾಡದಂತೆ ಮಹುವಾ ಸಲ್ಲಿಸಿದ್ದ ಅರ್ಜಿ ಹೈಕೋರ್ಟಿನಲ್ಲಿ ವಜಾ

ಪ್ರಶ್ನೆಗಾಗಿ ನಗದು ಪ್ರಕರಣ: ಮಾಹಿತಿ ಸೋರಿಕೆ ಮಾಡದಂತೆ ಮಹುವಾ ಸಲ್ಲಿಸಿದ್ದ ಅರ್ಜಿ ಹೈಕೋರ್ಟಿನಲ್ಲಿ ವಜಾ

- Advertisement -
- Advertisement -

ವಿದೇಶಿ ವಿನಿಮಯ ಕಾಯಿದೆಗೆ ಸಂಬಂಧಿಸಿದಂತೆ ಯಾವುದೇ ಗೌಪ್ಯ, ಸೂಕ್ಷ್ಮ ಅಥವಾ ದೃಢೀಕರಿಸದ ಮಾಹಿತಿಯನ್ನು ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಸೋರಿಕೆ ಮಾಡುವ ಜಾರಿ ನಿರ್ದೇಶನಾಲಯವನ್ನು (ಇಡಿ) ನಿರ್ಬಂಧಿಸುವಂತೆ ಕೋರಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಫೆಮಾದ ಆಪಾದಿತ ಉಲ್ಲಂಘನೆಗಳ ಬಗ್ಗೆ ನ್ಯಾಯಯುತ, ಪಾರದರ್ಶಕ ಮತ್ತು ನೈತಿಕ ತನಿಖೆಯನ್ನು ಕೈಗೊಳ್ಳುವ ಬದಲು, ತನಿಖಾ ಸಂಸ್ಥೆಯು (ಇಡಿ) ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶಪೂರಿತವಾಗಿ ಫೆಮಾ ಸಮನ್ಸ್‌ನ ವಿವರಗಳನ್ನು, ಸಂಸ್ಥೆಗೆ ಸಲ್ಲಿಸಿದ ಪ್ರಾಥಮಿಕ ಪ್ರತಿಕ್ರಿಯೆಯನ್ನು ಸೋರಿಕೆ ಮಾಡಿದೆ ಎಂದು ತನ್ನ ಅರ್ಜಿಯಲ್ಲಿ ಟಿಎಂಸಿ ನಾಯಕಿ ವಾದಿಸಿದ್ದಾರೆ.

‘ನನ್ನ ವಿರುದ್ಧ ನಡೆಯುತ್ತಿರುವ ತನಿಖೆಯಿಂದ ಉಂಟಾದ ಆರೋಪಗಳನ್ನು ಒಳಗೊಂಡಂತೆ ಸೂಕ್ಷ್ಮ ವಿವರಗಳನ್ನು ಸೋರಿಕೆ ಮಾಡುವ ಮೂಲಕ ಅರ್ಜಿದಾರರನ್ನು ಮಾಧ್ಯಮ ವಿಚಾರಣೆಗೆ ಒಳಪಡಿಸಲು ಉದ್ದೇಶಿಸಿರುವಂತೆ ತೋರುತ್ತಿದೆ. ಆ ಮೂಲಕ ಈ ವಿಷಯದ ತನಿಖೆಗೆ ಪೂರ್ವಾಗ್ರಹವನ್ನು ಉಂಟುಮಾಡುತ್ತದೆ. ಸಾರ್ವಜನಿಕರ ದೃಷ್ಟಿಯಲ್ಲಿ ಅರ್ಜಿದಾರರ ಪ್ರತಿಷ್ಠೆಯನ್ನು ಹಾಳು ಮಾಡಿದೆ’ ಎಂದು ಮನವಿಯಲ್ಲಿ ಹೇಳಲಾಗಿದೆ.

ಬಾಕಿ ಉಳಿದಿರುವ ತನಿಖೆಗೆ ಸಂಬಂಧಿಸಿದಂತೆ ಯಾವುದೇ ಪರಿಶೀಲಿಸದ, ದೃಢೀಕರಿಸದ, ಸುಳ್ಳು, ಅವಹೇಳನಕಾರಿ ವಿಷಯವನ್ನು ಪ್ರಕಟಿಸಲು ಮತ್ತು ಪ್ರಸಾರ ಮಾಡದಂತೆ 19 ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸುವಂತೆ ಮೊಯಿತ್ರಾ ಪ್ರಯತ್ನಿಸಿದರು. ಅಂತಹ ಮಾಹಿತಿ ಸೋರಿಕೆಯು ತನಿಖೆಯ ಪ್ರಕ್ರಿಯೆಗೆ ಅಡ್ಡಿಪಡಿಸುತ್ತದೆ, ಗೌಪ್ಯತೆ, ಘನತೆಯ ಹಕ್ಕುಗಳನ್ನು ಮತ್ತು ನ್ಯಾಯಯುತ ತನಿಖೆಯ ಹಕ್ಕನ್ನು ಉಲ್ಲಂಘಿಸಿದೆ ಎಂದು ಮೊಯಿತ್ರಾ ಅವರು ವಾದಿಸಿದ್ದಾರೆ.

ಅರ್ಜಿದಾರರ ವಿರುದ್ಧ ಫೆಮಾ ಅಡಿಯಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳು, ತನಿಖೆಗೆ ಸಂಬಂಧಿಸಿದಂತೆ ಗೌಪ್ಯ, ಊಹಾತ್ಮಕ ಮತ್ತು ದೃಢೀಕರಿಸದ ಮಾಹಿತಿಯನ್ನು ಮಾಧ್ಯಮಕ್ಕೆ ಸೋರಿಕೆ ಮಾಡಿರುವುದರಿಂದ ಪ್ರತಿವಾದಿಗಳು ಕಾನೂನಿನಡಿಯಲ್ಲಿ ಸೂಚಿಸಲಾದ ಕಾರ್ಯವಿಧಾನಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರತಿವಾದಿರವರು ಪ್ರತಿನಿತ್ಯ ಮತ್ತು ನಿಯತವಾಗಿ ಪ್ರತಿವಾದಿ ಮೂರಿಂದ 21 ರವರೆಗೆ ಪರಿಶೀಲಿಸದ ಮಾಹಿತಿ  ಮತ್ತು ಸುಳಿವುಗಳನ್ನು ಸೋರಿಕೆ ಮಾಡುವ ಮೂಲಕ ನಡೆಯುತ್ತಿರುವ ತನಿಖೆಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

ಹಿರಿಯ ವಕೀಲ ರೆಬೆಕ್ಕಾ ಜಾನ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಟಿಎಂಸಿ ನಾಯಕಿ, ತನಿಖಾ ಸಂಸ್ಥೆಯು ಪ್ರಕರಣಕ್ಕೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡುತ್ತಿದೆ ಎಂದು ಆರೋಪಿಸಿದರು.

‘ನನ್ನನ್ನು ಬೇಟೆಯಾಡಲಾಗುತ್ತಿದೆ; ಅವರು ನನ್ನ ಬಳಿ ಸಾಕಷ್ಟು ವಸ್ತುಗಳನ್ನು ಕೇಳಿದ್ದಾರೆ. ಅದೂ ಪತ್ರಿಕೆಗೆ ಹೋಗುತ್ತದೆಯೇ? ಒಂದೋ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.. ಅವರು ನೀಡದಿದ್ದರೆ, ನನಗೆ ಸಮನ್ಸ್ ನೀಡಲಾಗುತ್ತಿದೆ ಎಂದು ಅವರಿಗೆ ಹೇಗೆ ಗೊತ್ತು? ಇದು ನನಗೆ ತಿಳಿಸುವ ಮೊದಲು ಸೋರಿಕೆಯಾದ ಮಾಹಿತಿಯ ಬಗ್ಗೆ’ ಎಂದು ಮೊಯಿತ್ರಾ ಪರವಾಗಿ ಹಿರಿಯ ವಕೀಲರು ಹೇಳಿದರು.

ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರ ಮೂಲಕ ಹಾಜರಾದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಮಾಹಿತಿ ಸೋರಿಕೆಯಾದ ಮೂಲಗಳ ಬಗ್ಗೆ ಸಚಿವಾಲಯದ ಬಳಿ ಯಾವುದೇ ಉತ್ತರವಿಲ್ಲ ಎಂದು ಹೇಳಿತು.

ತನ್ನ ವಿಶೇಷ ವಕೀಲ ಜೊಹೆಬ್ ಹುಸೇನ್ ಮತ್ತು ವಕೀಲ ವಿವೇಕ್ ಗುರ್ನಾನಿ ಅವರ ಮೂಲಕ ಹಾಜರಾದ ಇಡಿ, ‘ತನಿಖಾ ಸಂಸ್ಥೆಯು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪತ್ರಿಕಾ ಪ್ರಕಟಣೆಯನ್ನು ನೀಡಿಲ್ಲ ಅಥವಾ ಯಾವುದೇ ಮಾಹಿತಿಯನ್ನು ಸೋರಿಕೆ ಮಾಡಿಲ್ಲ. ಲೇಖನದ ಮೂಲಗಳು ಯಾವುವು ಎಂಬುದು ನಮಗೆ ತಿಳಿದಿಲ್ಲ’ ಎಂದು ಅವರು ಹೇಳಿದರು.

ವಕೀಲ ಸಿದ್ದಾಂತ್ ಕುಮಾರ್ ಅವರ ಮೂಲಕ ಹಾಜರಾದ ಸುದ್ದಿ ಸಂಸ್ಥೆ ‘ಎಎನ್‌ಐ’ ಈ ವಿಷಯದಲ್ಲಿ ಯಾವುದೇ ಪೂರ್ವಾಗ್ರಹವಿಲ್ಲ ಎಂದು ಹೇಳಿ, ಮಾಧ್ಯಮ ವರದಿಗಳು ಮೂಲಗಳನ್ನು ಆಧರಿಸಿವೆ ಮತ್ತು ಟಿಎಂಸಿ ನಾಯಕಿ ಸಾರ್ವಜನಿಕ ವ್ಯಕ್ತಿಯಾಗಿದ್ದು, ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿರುವ ಆರೋಪಗಳಿಗೆ ತನಿಖೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದೆ.

ಫೆಮಾ ಅಡಿಯಲ್ಲಿ ತನಿಖೆ ನಡೆಸುತ್ತಿರುವ ಬಹಿರಂಗಪಡಿಸದ ವ್ಯವಹಾರಗಳು ಸೇರಿದಂತೆ ಕೆಲವು ವಿದೇಶಿ ವಹಿವಾಟುಗಳ ಬಗ್ಗೆ ಮಾಹಿತಿ ಇರುವುದರಿಂದ, ಇಡಿ ಆಕೆಯ ವಿರುದ್ಧ ಫೆಮಾ ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ.

ದನ್ನು ಓದಿ; ದೆಹಲಿ ಚಲೋ ಮೆರವಣಿಗೆ: ಹಿಸಾರ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸರಿಂದ ಲಾಠಿ ಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...