Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ಮಾಹಿತಿ ಸೋರಿಕೆ ಮಾಡದಂತೆ ಮಹುವಾ ಸಲ್ಲಿಸಿದ್ದ ಅರ್ಜಿ ಹೈಕೋರ್ಟಿನಲ್ಲಿ ವಜಾ

ಪ್ರಶ್ನೆಗಾಗಿ ನಗದು ಪ್ರಕರಣ: ಮಾಹಿತಿ ಸೋರಿಕೆ ಮಾಡದಂತೆ ಮಹುವಾ ಸಲ್ಲಿಸಿದ್ದ ಅರ್ಜಿ ಹೈಕೋರ್ಟಿನಲ್ಲಿ ವಜಾ

- Advertisement -
- Advertisement -

ವಿದೇಶಿ ವಿನಿಮಯ ಕಾಯಿದೆಗೆ ಸಂಬಂಧಿಸಿದಂತೆ ಯಾವುದೇ ಗೌಪ್ಯ, ಸೂಕ್ಷ್ಮ ಅಥವಾ ದೃಢೀಕರಿಸದ ಮಾಹಿತಿಯನ್ನು ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಸೋರಿಕೆ ಮಾಡುವ ಜಾರಿ ನಿರ್ದೇಶನಾಲಯವನ್ನು (ಇಡಿ) ನಿರ್ಬಂಧಿಸುವಂತೆ ಕೋರಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಫೆಮಾದ ಆಪಾದಿತ ಉಲ್ಲಂಘನೆಗಳ ಬಗ್ಗೆ ನ್ಯಾಯಯುತ, ಪಾರದರ್ಶಕ ಮತ್ತು ನೈತಿಕ ತನಿಖೆಯನ್ನು ಕೈಗೊಳ್ಳುವ ಬದಲು, ತನಿಖಾ ಸಂಸ್ಥೆಯು (ಇಡಿ) ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶಪೂರಿತವಾಗಿ ಫೆಮಾ ಸಮನ್ಸ್‌ನ ವಿವರಗಳನ್ನು, ಸಂಸ್ಥೆಗೆ ಸಲ್ಲಿಸಿದ ಪ್ರಾಥಮಿಕ ಪ್ರತಿಕ್ರಿಯೆಯನ್ನು ಸೋರಿಕೆ ಮಾಡಿದೆ ಎಂದು ತನ್ನ ಅರ್ಜಿಯಲ್ಲಿ ಟಿಎಂಸಿ ನಾಯಕಿ ವಾದಿಸಿದ್ದಾರೆ.

‘ನನ್ನ ವಿರುದ್ಧ ನಡೆಯುತ್ತಿರುವ ತನಿಖೆಯಿಂದ ಉಂಟಾದ ಆರೋಪಗಳನ್ನು ಒಳಗೊಂಡಂತೆ ಸೂಕ್ಷ್ಮ ವಿವರಗಳನ್ನು ಸೋರಿಕೆ ಮಾಡುವ ಮೂಲಕ ಅರ್ಜಿದಾರರನ್ನು ಮಾಧ್ಯಮ ವಿಚಾರಣೆಗೆ ಒಳಪಡಿಸಲು ಉದ್ದೇಶಿಸಿರುವಂತೆ ತೋರುತ್ತಿದೆ. ಆ ಮೂಲಕ ಈ ವಿಷಯದ ತನಿಖೆಗೆ ಪೂರ್ವಾಗ್ರಹವನ್ನು ಉಂಟುಮಾಡುತ್ತದೆ. ಸಾರ್ವಜನಿಕರ ದೃಷ್ಟಿಯಲ್ಲಿ ಅರ್ಜಿದಾರರ ಪ್ರತಿಷ್ಠೆಯನ್ನು ಹಾಳು ಮಾಡಿದೆ’ ಎಂದು ಮನವಿಯಲ್ಲಿ ಹೇಳಲಾಗಿದೆ.

ಬಾಕಿ ಉಳಿದಿರುವ ತನಿಖೆಗೆ ಸಂಬಂಧಿಸಿದಂತೆ ಯಾವುದೇ ಪರಿಶೀಲಿಸದ, ದೃಢೀಕರಿಸದ, ಸುಳ್ಳು, ಅವಹೇಳನಕಾರಿ ವಿಷಯವನ್ನು ಪ್ರಕಟಿಸಲು ಮತ್ತು ಪ್ರಸಾರ ಮಾಡದಂತೆ 19 ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸುವಂತೆ ಮೊಯಿತ್ರಾ ಪ್ರಯತ್ನಿಸಿದರು. ಅಂತಹ ಮಾಹಿತಿ ಸೋರಿಕೆಯು ತನಿಖೆಯ ಪ್ರಕ್ರಿಯೆಗೆ ಅಡ್ಡಿಪಡಿಸುತ್ತದೆ, ಗೌಪ್ಯತೆ, ಘನತೆಯ ಹಕ್ಕುಗಳನ್ನು ಮತ್ತು ನ್ಯಾಯಯುತ ತನಿಖೆಯ ಹಕ್ಕನ್ನು ಉಲ್ಲಂಘಿಸಿದೆ ಎಂದು ಮೊಯಿತ್ರಾ ಅವರು ವಾದಿಸಿದ್ದಾರೆ.

ಅರ್ಜಿದಾರರ ವಿರುದ್ಧ ಫೆಮಾ ಅಡಿಯಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳು, ತನಿಖೆಗೆ ಸಂಬಂಧಿಸಿದಂತೆ ಗೌಪ್ಯ, ಊಹಾತ್ಮಕ ಮತ್ತು ದೃಢೀಕರಿಸದ ಮಾಹಿತಿಯನ್ನು ಮಾಧ್ಯಮಕ್ಕೆ ಸೋರಿಕೆ ಮಾಡಿರುವುದರಿಂದ ಪ್ರತಿವಾದಿಗಳು ಕಾನೂನಿನಡಿಯಲ್ಲಿ ಸೂಚಿಸಲಾದ ಕಾರ್ಯವಿಧಾನಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರತಿವಾದಿರವರು ಪ್ರತಿನಿತ್ಯ ಮತ್ತು ನಿಯತವಾಗಿ ಪ್ರತಿವಾದಿ ಮೂರಿಂದ 21 ರವರೆಗೆ ಪರಿಶೀಲಿಸದ ಮಾಹಿತಿ  ಮತ್ತು ಸುಳಿವುಗಳನ್ನು ಸೋರಿಕೆ ಮಾಡುವ ಮೂಲಕ ನಡೆಯುತ್ತಿರುವ ತನಿಖೆಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

ಹಿರಿಯ ವಕೀಲ ರೆಬೆಕ್ಕಾ ಜಾನ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಟಿಎಂಸಿ ನಾಯಕಿ, ತನಿಖಾ ಸಂಸ್ಥೆಯು ಪ್ರಕರಣಕ್ಕೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡುತ್ತಿದೆ ಎಂದು ಆರೋಪಿಸಿದರು.

‘ನನ್ನನ್ನು ಬೇಟೆಯಾಡಲಾಗುತ್ತಿದೆ; ಅವರು ನನ್ನ ಬಳಿ ಸಾಕಷ್ಟು ವಸ್ತುಗಳನ್ನು ಕೇಳಿದ್ದಾರೆ. ಅದೂ ಪತ್ರಿಕೆಗೆ ಹೋಗುತ್ತದೆಯೇ? ಒಂದೋ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.. ಅವರು ನೀಡದಿದ್ದರೆ, ನನಗೆ ಸಮನ್ಸ್ ನೀಡಲಾಗುತ್ತಿದೆ ಎಂದು ಅವರಿಗೆ ಹೇಗೆ ಗೊತ್ತು? ಇದು ನನಗೆ ತಿಳಿಸುವ ಮೊದಲು ಸೋರಿಕೆಯಾದ ಮಾಹಿತಿಯ ಬಗ್ಗೆ’ ಎಂದು ಮೊಯಿತ್ರಾ ಪರವಾಗಿ ಹಿರಿಯ ವಕೀಲರು ಹೇಳಿದರು.

ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರ ಮೂಲಕ ಹಾಜರಾದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಮಾಹಿತಿ ಸೋರಿಕೆಯಾದ ಮೂಲಗಳ ಬಗ್ಗೆ ಸಚಿವಾಲಯದ ಬಳಿ ಯಾವುದೇ ಉತ್ತರವಿಲ್ಲ ಎಂದು ಹೇಳಿತು.

ತನ್ನ ವಿಶೇಷ ವಕೀಲ ಜೊಹೆಬ್ ಹುಸೇನ್ ಮತ್ತು ವಕೀಲ ವಿವೇಕ್ ಗುರ್ನಾನಿ ಅವರ ಮೂಲಕ ಹಾಜರಾದ ಇಡಿ, ‘ತನಿಖಾ ಸಂಸ್ಥೆಯು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪತ್ರಿಕಾ ಪ್ರಕಟಣೆಯನ್ನು ನೀಡಿಲ್ಲ ಅಥವಾ ಯಾವುದೇ ಮಾಹಿತಿಯನ್ನು ಸೋರಿಕೆ ಮಾಡಿಲ್ಲ. ಲೇಖನದ ಮೂಲಗಳು ಯಾವುವು ಎಂಬುದು ನಮಗೆ ತಿಳಿದಿಲ್ಲ’ ಎಂದು ಅವರು ಹೇಳಿದರು.

ವಕೀಲ ಸಿದ್ದಾಂತ್ ಕುಮಾರ್ ಅವರ ಮೂಲಕ ಹಾಜರಾದ ಸುದ್ದಿ ಸಂಸ್ಥೆ ‘ಎಎನ್‌ಐ’ ಈ ವಿಷಯದಲ್ಲಿ ಯಾವುದೇ ಪೂರ್ವಾಗ್ರಹವಿಲ್ಲ ಎಂದು ಹೇಳಿ, ಮಾಧ್ಯಮ ವರದಿಗಳು ಮೂಲಗಳನ್ನು ಆಧರಿಸಿವೆ ಮತ್ತು ಟಿಎಂಸಿ ನಾಯಕಿ ಸಾರ್ವಜನಿಕ ವ್ಯಕ್ತಿಯಾಗಿದ್ದು, ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿರುವ ಆರೋಪಗಳಿಗೆ ತನಿಖೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದೆ.

ಫೆಮಾ ಅಡಿಯಲ್ಲಿ ತನಿಖೆ ನಡೆಸುತ್ತಿರುವ ಬಹಿರಂಗಪಡಿಸದ ವ್ಯವಹಾರಗಳು ಸೇರಿದಂತೆ ಕೆಲವು ವಿದೇಶಿ ವಹಿವಾಟುಗಳ ಬಗ್ಗೆ ಮಾಹಿತಿ ಇರುವುದರಿಂದ, ಇಡಿ ಆಕೆಯ ವಿರುದ್ಧ ಫೆಮಾ ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ.

ದನ್ನು ಓದಿ; ದೆಹಲಿ ಚಲೋ ಮೆರವಣಿಗೆ: ಹಿಸಾರ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸರಿಂದ ಲಾಠಿ ಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...