Homeಅಂಕಣಗಳುಕ್ಯಾಶ್‍ಲೆಸ್ ಎಕಾನಮಿ ಅಂದಿದ್ದವ್ರು ಕಲರ್‍ಕಲರ್ ನೋಟು ಪ್ರಿಂಟ್ ಮಾಡ್ತಾ ಅವುರೆ

ಕ್ಯಾಶ್‍ಲೆಸ್ ಎಕಾನಮಿ ಅಂದಿದ್ದವ್ರು ಕಲರ್‍ಕಲರ್ ನೋಟು ಪ್ರಿಂಟ್ ಮಾಡ್ತಾ ಅವುರೆ

- Advertisement -
- Advertisement -

ಕೇಳುಗರಿಗೆಲ್ಲ ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಉಡುಪಿಯ ಅಷ್ಟಮಠದ ಶಿರೂರು ಸ್ವಾಮಿಗಳ ಪಾಯ್ಸನ್ ಫುಡ್ ಸಾವಿಗೆ ಕಿಂಚಿತ್ತೂ ಕರುಳು ಕರಗದ ತೇಜಾವರ ಸ್ವಾಮಿಗಳು, ಆ ಸ್ವಾಮಿ ನಂತರ ಫೊರೆನ್ಸಿಕ್ ಸೈನ್ಸನ್ನೇ ನುಣ್ಣಗೆ ಅರೆದು ಗಟಗಟ ಕುಡಿದವರಂತೆ ಕೆಕರುಮಕರಾಗಿ ಹೇಳಿಕೆ ಕೊಟ್ಟಿದ್ದಾರೆ. ಆ ಸ್ವಾಮಿ ಎಣ್ಣೆ ತಗತಿದ್ದ, ಹೆಣ್ಮಕ್ಕಳ ಮ್ಯಾಟ್ರಲ್ಲಿ ವೀಕ್ ಇದ್ದ, ಹಂಗಾಗಿ ಸತ್ತೋಗಿರಬೇಕು ಅಂತ ತೇಜಾವರರು ಕೀರಲು ದನಿಯಲ್ಲಿ ಊಳಿಟ್ಟಿದ್ದಾರೆ. ದಿವಂಗತ ಸ್ವಾಮಿ ಬದುಕಿದ್ದಾಗ “ಎಂಟು ಮಠಗಳ ಎಲ್ಲ ಸ್ವಾಮುಗೋಳು ಮ್ಯಾರೇಜ್ ಮಾಡ್ಕಂಡು, ಕದ್ದು ಮಕ್ಕಳು ಹುಟ್ಟುಸಿ, ಹುಟ್ಟಿಸಿದ ಮಕ್ಳೆಲ್ಲವನ್ನು ಕದ್ದು ಮಡಗಿದ್ದಾರೆ, ಬಾಂಬೆ, ಪೂನಾದಲ್ಲಿ ಹೋಟೆಲ್ ಬ್ಯುಜಿನೆಸ್ ನಡುಸ್ತಾವ್ರೆ, ಮೀಟ್ರುಬಡ್ಡಿಗೆ ಸಾಲ ಕೊಟ್ಟು ಪರ್ಸೆಂಟೇಜ್ ಬಡ್ಡಿ ಯವಾರ ನಡುಸ್ತಾವ್ರೆ” ಅಂತ ಮುರಕೊಂಡು ಬಿದ್ದಿದ್ದಾಗ ಬಾಯಿಗೆ ಹೊಲಿಗೆ ಹಾಕ್ಕಂಡು ಕಮಕ್ ಕಿಮಕ್ ಅನ್ನದೆ ಇದ್ದ ತೇಜಾವರರಿಗೆ ಇದ್ದಕ್ಕಿದ್ದಂತೆ ಈ ಧೈರ್ಯ ಎಲ್ಲಿಂದ ಬಂತು ಎಂದು ಭಕ್ತಾದಿಗಳೇ ಗಾಬರಿಯಾಗಿದ್ದಾರೆ. ನೂರಾರು ಸಲ ಮಠದ ಗಾಯಕಿಯೊಬ್ಬರ ಮೇಲೆ ರೇಪು ಮಾಡಿ ಕೋರ್ಟಿಂದ ಉಗಿಸಿಕೊಂಡ ಕೌಬಾಯ್ ಸ್ವಾಮಿ ವಿಷಯದಲ್ಲಿ ಲವಿಡವಿ ಸೈಲೆನ್ಸ್ ಮೈಂಟೈನ್ ಮಾಡುತ್ತ ಸಪೋರ್ಟ್ ಕೊಡೋ ತೇಜಾವರರು ತಮ್ಮ ಎಂಟು ಮಠಗಳ ಸ್ವಾಮಿಗಳ ರಹಸ್ಯವನ್ನೆಲ್ಲ ಹರಾಜು ಹಾಕುತ್ತಿದ್ದ ಸ್ವಾಮಿ ಅನುಮಾನಾಸ್ಪದವಾಗಿ ಸತ್ತ ನಂತರವೂ ಹಗೆ ಸಾಧಿಸಿ ಕಳಪೆ ಮಾತನ್ನಾಡುವುದು ಆ ಮನುಷ್ಯನ ನೀಚತನ ಎಂಬ ಜನ ಮಾತಾಡಿಕೊಳ್ಳುತ್ತಿರುವುದು ತಿಳಿದುಬಂದಿದೆ.

*****

ರಿಸರ್ವ್ ಬ್ಯಾಂಕ್ ಗೌರ್ನರ್ ಆಗಿದ್ದ ರಘುರಾಮ್ ರಾಜನ್ ರಂಥ ಪಳಗಿದ ಆರ್ಥಿಕತಜ್ಞರಿಗೆ ಕೊಡಬಾರದ ಕಾಟ ಕೊಟ್ಟು ಒಕ್ಕಲೆಬ್ಬಿಸಿದ ಶಿಲಾಯುಗದ ಸನಾತನಿ ಪೀಡೆಗಳು, ಚೀಪಿದ ಮೂಳೆ ತಮ್ಮತ್ತ ಬಿಸಾಕುವ ಅಂಬಾನಿಗಳ ಕೊಂಪೆಯಿಂದ ಕೊಳೆತ ಮಿದುಳಿನ ಆಸಾಮಿಯನ್ನು ತಂದು ಆ ಜಾಗಕ್ಕೆ ಕೂರಿಸಿದ್ದು ಈಗ ಹಳೆಯ ವಿಷಯ, ಹೊಸ ವಿಷಯ ಏನಪ್ಪ ಅಂದ್ರೆ ರಿಸರ್ವ್ ಬ್ಯಾಂಕೆಂದರೆ ಬೊಂಬಾಯ್ ಮಿಠಾಯ್ ಮಾರೋ ಅಂಗಡಿ ಅಂತ ಭ್ರಮೆಯಲ್ಲಿರೋ ಈ ಅಂಬಾನಿ ಜವಾನನಿಗೆ ಒಂದೈವತ್ತು ಹುಚ್ಚರು ಒಮ್ಮೆಲೇ ಕಚ್ಚಿ ತಲೆ ಇನ್ಫೆಕ್ಷನ್ ಆಗಿರೋ ಸಾಧ್ಯತೆಗಳು ಕಂಡುಬರುತ್ತಿವೆ. ಜನರು ಬಳಸುತ್ತಿದ್ದ ಮುದ್ದಾದ ನೋಟುಗಳನ್ನು ಕಚಡಿ ಪಿಚಡಿ ಆಕಾರದಲ್ಲಿ ಇಷ್ಟಬಂದಂತೆ ಚಡ್ಡಿ ಬದಲಿಸಿದಂತೆ ಬದಲಿಸಿ ಒಂದರ ಹಿಂದೊಂದು ಪೀಕಲಾಟ ತಂದಿಡ್ತಿರೋ ಉರ್ಜಿತ್ ಪಟೇಲ್ ಎಟಿಎಂ ವ್ಯವಸ್ಥೆಗೇ ಡಿಚ್ಚಿ ಹೊಡೆಯುತ್ತಿದ್ದಾನೆ. ಇವನು ಬದಲಿಸೋ ನೋಟುಗಳ ಸೈಜು ಎಟಿಎಂಗಳಿಗೆ ಸರಿ ಹೋಗದೆ ಬ್ಯಾಂಕುಗಳು ಲಬೋಲಬೋ ಬಾಯಿ ಬಡ್ಕೊಂಡ್ರೂ ಹೊಸದಾಗಿ 100 ರುಪಾಯಿ ನೋಟು ಡಿಸೈನ್ ಚೇಂಜ್ ಮಾಡಿ ಚಲಾವಣೆಗೆ ಬಿಡಲಾಗಿದೆ. ನೋಟ್ ಬ್ಯಾನ್ ಟೈಮಿನಲ್ಲಿ ನಾವು ನೋಟೇ ಇಲ್ಲದ ಕ್ಯಾಶ್‍ಲೆಸ್ ಎಕಾನಮಿ ನಿರ್ಮಿಸ್ತೀವಿ ಅಂತ ಬೊಗಳಿದವರು ತಿಂಗಳಿಂದ ತಿಂಗಳಿಗೆ ನೋಟುಗಳ ಪ್ರಿಂಟಿಂಗನ್ನು ಹೆಚ್ಚಿಸ್ತಿರೋದ್ಯಾಕೆ ಅನ್ನೋ ಮರ್ಮ ಯಾರಿಗೂ ಗೊತ್ತಾಗ್ತ ಇಲ್ಲ. ಜನರ ಪಡಿಪಾಟಲುಗಳನ್ನು ಸೈಕೋಗಳಂತೆ ಎಂಜಾಯ್ ಮಾಡ್ತಿರೋ ಈ ಸನಾತನಿ ಪಿಶಾಚಿಗಳಿಗೆ ಬರಬಾರದ್ದು ಬಂದು ಹುಳ ಬಿದ್ದು ಸಾಯಲೆಂದು ಜನರು ಶಾಪ ಹಾಕುತ್ತಿರುವುದು ತಿಳಿದು ಬಂದಿದೆ.

*****

ವಯಸ್ಸಲ್ಲದ ವಯಸ್ಸಲ್ಲಿ “ಕುಚ್ ಕುಚ್ ಹೋತಾ ಹೈ, ಬ್ಲೂಜೆಪಿವಾಲೇ ಲಡ್ಕಿ ಲೇಜಾಯೇಂಗೆ” ಅಂತ ಸರ್ಕಾರಿ ಕ್ಲರ್ಕ್ ಹುಡುಗಿಯೊಂದಿಗೆ ಕದ್ದುಮುಚ್ಚಿ ಕುಸುಮುಸು ಮಾಡಿ ಕೈ ಎತ್ತಿದ್ದ ಬ್ಲೂಜೆಪಿಯ ರಾಮದಾಸನಿಗೆ ಶನಿ ಮಕದ ಮೇಲೆ ಅಂಡೂರಿ ಕುಂತುಬಿಟ್ಟಿದ್ದಾನೆ. ಎಲ್ಲ ಮುಗಿದ ಮೇಲೆ ರಾಮ್ದಾಸ ಕೈಗೆ ಸಿಗದಂಗೆ ತಪ್ಪಿಸ್ಕಂಡು ಓಡೋಗವ್ನೆ ಅಂತ ರೊಚ್ಚಿಗೆದ್ದಿರೋ ಪ್ಲೇಮಕುಮಾರಿಯೆಂಬ ರಾಮ್ದಾಸನ ಮಾಜಿ ಲವರ್ರು ಸೀದಾ ಕೈಕೊಟ್ಟ ಮಿಡಲ್ ಏಜ್ ಮನ್ಮಥನ ಆಫೀಸಿನ ಮುಂದೆ ಧುಡುಮ್ಮನೆ ಬಿದ್ದಿದೆ. ದೀಪಾವಳಿಯ ವಿಷ್ಣುಚಕ್ರದಂತೆ ಗರಗರಗರ ತಿರುಗುತ್ತ ನೆಲದ ಮೇಲೆ ಕೂಚಿಪುಡಿ-ಭರತನಾಟ್ಯ ಎರಡನ್ನೂ ಮಿಕ್ಸ್ ಮಾಡಿದ ಘನಘೋರ ನೃತ್ಯವಾಡಿ ರಾಮ್ದಾಸ್ ಕಛೇರಿಯೆದುರು ನೆರೆದ ಬ್ಲೂಜೆಪಿ ಕಾರ್ಯಕರ್ತರಿಗೆ ಪುಗ್ಸಟ್ಟೆ ಮನರಂಜನೆ ಒದಗಿಸಿದ್ದಾರೆ. ಈ ಹೆಣ್ಣಿನೊಡನೆ ಕಳ್ಳಾಟವಾಡಿ ಕೈಗೆ ಚೊಂಬು ಕೊಟ್ಟು ಯಾಮಾರಿಸಿ ಇನ್ನೊಂದರ ಬೆನ್ನುಬೀಳಲು ರೆಡಿಯಾಗಿದ್ದ ರಾಮ್ದಾಸನ ಗಂಟಲಿಗೆ ಹೆಟ್ಟಿದ ಗಢಾರಿಯಾಗಿರೋ ಪ್ಲೇಮಕುಮಾರಿ.. ನಾನು ಕುಲಗೆಟ್ಟು ಹೋಗಿರೋ ರಾಮ್ದಾಸನಿಗೆ ಬಾಳು ಕೊಡ್ತೇನೆ, ಈ ಓತಿಕ್ಯಾತದ ಮೂತಿಯವನ ಬಾಳು ಬಂಗಾರ ಮಾಡಿ, ಮಾನ ಹರಿದು ಊರು ಬಾಗಲು ಮಾಡಿ, ಅವನ ಹಣೆಗೆ ಅಕ್ಕಿಕಾಳು ಮಡಗೋತನಕ ನಾನು ಬ್ಯೂಟಿಪಾರ್ಲರಿನಲ್ಲಿ ಐಬ್ರೋ ಮಾಡ್ಸಲ್ಲ ಅಂತ ಶಪಥಗೈದಿದ್ದಾರೆ. ಈ ವೀರಪ್ರತಿಜ್ಞೆ ತಿಳಿದ ರಾಮ್ದಾಸನು ಕೆ.ಆರ್.ಪುರದ ಬಾರ್‍ನ ಟಾಯ್ಲೆಟ್ಟಿನಲ್ಲಿ ಕುಳಿತು ಗೊಳೋ ಅಂತ ಅಳುತ್ತಿದ್ದಾರೆಂದು ಬಾರ್ ಸಪ್ಲೈಯರ್ ಮಾಹಿತಿ ನೀಡಿದ್ದಾರೆ.

*****

ರಾಜಕಾರಣಿಗಳು ಜನರ ದುಡ್ಡು ದೋಚುವುದನ್ನು ನೀವು ಕೇಳಿದ್ದೀರಿ, ಈಗ ಟಾಯ್ಲೆಟ್, ಕಮೋಡ್, ಪೈಪುಗಳನ್ನೂ ಬಿಡದೆ ದೋಚುತ್ತಿರುವುದು ಹೊಸ ವಿಷಯ. ವಿಷ್ಯ ಏನಪ್ಪ ಅಂದ್ರೆ ಕಾರವಾರದ ಹಿಂದಿನ ಕೈ ಪಕ್ಷದ ಎಮ್ಮೆಲ್ಲೆ ಸತೀಶ್ ಸೈಲ್ ಎಂಬ ಗಣಿ ಗಢವನು ತನಗೆ ಸರ್ಕಾರ ಒದಗಿಸಿದ್ದ ಕಛೇರಿ ಶೌಚಾಲಯದ ಕಮೋಡು, ಪೈಪು, ಫ್ಲಶ್ ಬ್ಲಾಕ್ಸೆಲ್ಲವನ್ನೂ ಬಿಚ್ಚಿಕೊಂಡು ಮಂಗಮಾಯವಾಗಿದ್ದಾನೆ. ಹೊಸದಾಗಿ ಆಯ್ಕೆಯಾದ ಎಮ್ಮೆಲ್ಲೆ ಲೂಪಾಲಿ ನಾಯ್ಕ ಎಂಬ ಬ್ಲೂಜೆಪಿ ಎಮ್ಮೆಲ್ಲೆ ಈ ಕಛೇರಿಗೆ ಬಂದಾಗ ಟಾಯ್ಲೆಟ್ ರೂಮಿನಲ್ಲಿ ಬಕೀಟು ನಲ್ಲಿಯೊಂದನ್ನು ಬಿಟ್ಟು ಉಳಿದದ್ದೆಲ್ಲ ಠಣಾರ್ ಆಗಿರುವುದು ಕಂಡು ಕಂಗಾಲಾಗಿದ್ದಾರೆ. ಅಜೆರ್ಂಟಾಗಿ ನಿತ್ಯಕರ್ಮಗಳನ್ನು ಮುಗಿಸಿಕೊಳ್ಳಲೂ ಸಾಧ್ಯವಾಗದಂತೆ ಪೀಕಲಾಟಕ್ಕೆ ಸಿಲುಕಿರೋ ಬ್ಲೂಜೆಪಿ ಎಮ್ಮೆಲ್ಲೆಗೆ ಸದ್ಯಕ್ಕೆ ಪೇ & ಯೂಸ್ ಸುಲಭ್ ಶೌಚಾಲಯವೇ ಗತಿಯಾಗಿದೆಯಂತೆ. ತನ್ನನ್ನು ಈ ಸ್ಥಿತಿಗೆ ನೂಕಿ ಹೋಗಿರೊ ಹಳೇ ಎಮ್ಮೆಲ್ಲೆ ಸತೀಶನ ಮೇಲೆ ಟಾಯ್ಲೆಟ್ ಕಳ್ಳತನದ ಕೇಸು ಹಾಕಲು ಲೂಪಾಲಿ ಮೇಡಂ ಸಿದ್ದರಾಗಿದ್ದಾರೆಂದು ಸುಲಭ್ ಶೌಚಾಲಯದ ಸಿಬ್ಬಂದಿ ತಿಳಿಸಿದ್ದಾರೆ. ನೂರಾರು ಕೋಟಿ ಗಣಿ ಯವಾರ ನಡೆಸೋ ಸತೀಶನಿಗೆ ಟಾಯ್ಲೆಟ್ ಐಟಂಗಳನ್ನ ಕದ್ಕೊಂಡು ಹೋಗೋ ದುರ್ಗತಿ ಯಾಕೆ ಬಂತೆಂದು ವಿಚಾರಿಸಿದಾಗ ಹೊಸ ಸಂಗತಿಯೊಂದು ಬಯಲಾಗಿದೆ. ವಾಸ್ತುಪ್ರಕಾರ ಪೂಜೆ ಮಾಡಿ ಅಳವಡಿಸಿರೋ ಇದೇ ಐಟಂಗಳನ್ನು ಬಳಸಿದ್ರೆ ನಿನಗೆ ಒಳ್ಳೆಯದೆಂದು ಗಢವ ಗೋರಿಲ್ಲ ಬ್ರಮ್ಮಾಂಡ ಪಿಂಡ ಟಾಯ್ಲೆಟ್ಟೋಪದೇಶ ಮಾಡಿದ್ದನಂತೆ. ಅದಕ್ಕೆಂದು ಅಧಿಕಾರ ಎಗರಿಹೋದ ಮೇಲೆ ಮಾಜಿ ಎಮ್ಮೆಲ್ಲೆ ಸತೀಶನು ಟಾಯ್ಲೆಟ್ಟನ್ನು ಅನಾಮತ್ತಾಗಿ ಪಾರ್ಟ್ ಪಾರ್ಟಾಗಿ ಬಿಚ್ಚಿಕೊಂಡು ಹೋಗಿದ್ದಾನೆಂದು ಬಲ್ಲ ಮೂಲಗಳು ಸ್ಪಷ್ಟಪಡಿಸಿವೆ.

*****

ದನದ ಮಾಂಸ ತಿನ್ನುವುದನ್ನು ನಿಲ್ಲಿಸಿದರೆ, ಗೋರಕ್ಷಕರಿಂದ ನಡೆಯುತ್ತಿರುವ ದನಸಾಗಾಟಗಾರರ ಕೊಲೆಗಳು ನಿಲ್ಲುತ್ತವೆಂದು ರಾಷ್ಟ್ರೀಯ ಸರ್ವನಾಶಕ ಸಂಘದ ಇಂದ್ರೇಶನೆಂಬ ಮುದಿಹೋರಿ ಸ್ಟೇಟ್‍ಮೆಂಟ್ ಎಸೆದಿದೆ. ‘ದನದಮಾಂಸ ತಿನ್ನುವರನ್ನು ನಾವು ಕೊಲ್ತಾನೇ ಇರ್ತೇವೆ, ಜೀವ ಬೇಕೋ ದನದ ಮಾಂಸ ಬೇಕೋ?’ ಅಂತ ಬೆದರಿಕೆಯೊಡ್ಡಿದೆ. ಇತ್ತಕಡೆ ಪಕೋಡತಾತನ ಆಳ್ವಿಕೆಯಲ್ಲಿ ಇಂಡಿಯದೇಶ ಜಗತ್ತಿನಲ್ಲೇ ಅತಿದೊಡ್ಡ ದನದಮಾಂಸ ರಫ್ತುದಾರ ದೇಶವಾಗಿದೆ. ದನಹಸುಗಳನ್ನು ಕೊಂದು ರಫ್ತುಮಾಡೋ ಕಂಪನಿಗಳಿಂದ ಎಂಜಲೆತ್ತಿಕೊಂಡು ಓಡಾಡ್ತಿರೋ ಇವರು ದನಗಳನ್ನು ರಕ್ಷಿಸೋ ಮಾತನಾಡುವುದು, ವಿಕೃತಕಾಮಿ ಉಮೇಶ್ ರೆಡ್ಡಿ ಮಹಿಳಾ ಸುರಕ್ಷತೆ ಬಗ್ಗೆ ಭಾಷಣ ಹೊಡೆದಂತೆ ಕೇಳುತ್ತದೆಯೆಂದು ಸಂತ್ರಸ್ತೆಯೊಬ್ಬರು ತಿಳಿಸಿದ್ದಾರೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...