Homeಅಂಕಣಗಳುಕ್ಯಾಶ್‍ಲೆಸ್ ಎಕಾನಮಿ ಅಂದಿದ್ದವ್ರು ಕಲರ್‍ಕಲರ್ ನೋಟು ಪ್ರಿಂಟ್ ಮಾಡ್ತಾ ಅವುರೆ

ಕ್ಯಾಶ್‍ಲೆಸ್ ಎಕಾನಮಿ ಅಂದಿದ್ದವ್ರು ಕಲರ್‍ಕಲರ್ ನೋಟು ಪ್ರಿಂಟ್ ಮಾಡ್ತಾ ಅವುರೆ

- Advertisement -
- Advertisement -

ಕೇಳುಗರಿಗೆಲ್ಲ ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಉಡುಪಿಯ ಅಷ್ಟಮಠದ ಶಿರೂರು ಸ್ವಾಮಿಗಳ ಪಾಯ್ಸನ್ ಫುಡ್ ಸಾವಿಗೆ ಕಿಂಚಿತ್ತೂ ಕರುಳು ಕರಗದ ತೇಜಾವರ ಸ್ವಾಮಿಗಳು, ಆ ಸ್ವಾಮಿ ನಂತರ ಫೊರೆನ್ಸಿಕ್ ಸೈನ್ಸನ್ನೇ ನುಣ್ಣಗೆ ಅರೆದು ಗಟಗಟ ಕುಡಿದವರಂತೆ ಕೆಕರುಮಕರಾಗಿ ಹೇಳಿಕೆ ಕೊಟ್ಟಿದ್ದಾರೆ. ಆ ಸ್ವಾಮಿ ಎಣ್ಣೆ ತಗತಿದ್ದ, ಹೆಣ್ಮಕ್ಕಳ ಮ್ಯಾಟ್ರಲ್ಲಿ ವೀಕ್ ಇದ್ದ, ಹಂಗಾಗಿ ಸತ್ತೋಗಿರಬೇಕು ಅಂತ ತೇಜಾವರರು ಕೀರಲು ದನಿಯಲ್ಲಿ ಊಳಿಟ್ಟಿದ್ದಾರೆ. ದಿವಂಗತ ಸ್ವಾಮಿ ಬದುಕಿದ್ದಾಗ “ಎಂಟು ಮಠಗಳ ಎಲ್ಲ ಸ್ವಾಮುಗೋಳು ಮ್ಯಾರೇಜ್ ಮಾಡ್ಕಂಡು, ಕದ್ದು ಮಕ್ಕಳು ಹುಟ್ಟುಸಿ, ಹುಟ್ಟಿಸಿದ ಮಕ್ಳೆಲ್ಲವನ್ನು ಕದ್ದು ಮಡಗಿದ್ದಾರೆ, ಬಾಂಬೆ, ಪೂನಾದಲ್ಲಿ ಹೋಟೆಲ್ ಬ್ಯುಜಿನೆಸ್ ನಡುಸ್ತಾವ್ರೆ, ಮೀಟ್ರುಬಡ್ಡಿಗೆ ಸಾಲ ಕೊಟ್ಟು ಪರ್ಸೆಂಟೇಜ್ ಬಡ್ಡಿ ಯವಾರ ನಡುಸ್ತಾವ್ರೆ” ಅಂತ ಮುರಕೊಂಡು ಬಿದ್ದಿದ್ದಾಗ ಬಾಯಿಗೆ ಹೊಲಿಗೆ ಹಾಕ್ಕಂಡು ಕಮಕ್ ಕಿಮಕ್ ಅನ್ನದೆ ಇದ್ದ ತೇಜಾವರರಿಗೆ ಇದ್ದಕ್ಕಿದ್ದಂತೆ ಈ ಧೈರ್ಯ ಎಲ್ಲಿಂದ ಬಂತು ಎಂದು ಭಕ್ತಾದಿಗಳೇ ಗಾಬರಿಯಾಗಿದ್ದಾರೆ. ನೂರಾರು ಸಲ ಮಠದ ಗಾಯಕಿಯೊಬ್ಬರ ಮೇಲೆ ರೇಪು ಮಾಡಿ ಕೋರ್ಟಿಂದ ಉಗಿಸಿಕೊಂಡ ಕೌಬಾಯ್ ಸ್ವಾಮಿ ವಿಷಯದಲ್ಲಿ ಲವಿಡವಿ ಸೈಲೆನ್ಸ್ ಮೈಂಟೈನ್ ಮಾಡುತ್ತ ಸಪೋರ್ಟ್ ಕೊಡೋ ತೇಜಾವರರು ತಮ್ಮ ಎಂಟು ಮಠಗಳ ಸ್ವಾಮಿಗಳ ರಹಸ್ಯವನ್ನೆಲ್ಲ ಹರಾಜು ಹಾಕುತ್ತಿದ್ದ ಸ್ವಾಮಿ ಅನುಮಾನಾಸ್ಪದವಾಗಿ ಸತ್ತ ನಂತರವೂ ಹಗೆ ಸಾಧಿಸಿ ಕಳಪೆ ಮಾತನ್ನಾಡುವುದು ಆ ಮನುಷ್ಯನ ನೀಚತನ ಎಂಬ ಜನ ಮಾತಾಡಿಕೊಳ್ಳುತ್ತಿರುವುದು ತಿಳಿದುಬಂದಿದೆ.

*****

ರಿಸರ್ವ್ ಬ್ಯಾಂಕ್ ಗೌರ್ನರ್ ಆಗಿದ್ದ ರಘುರಾಮ್ ರಾಜನ್ ರಂಥ ಪಳಗಿದ ಆರ್ಥಿಕತಜ್ಞರಿಗೆ ಕೊಡಬಾರದ ಕಾಟ ಕೊಟ್ಟು ಒಕ್ಕಲೆಬ್ಬಿಸಿದ ಶಿಲಾಯುಗದ ಸನಾತನಿ ಪೀಡೆಗಳು, ಚೀಪಿದ ಮೂಳೆ ತಮ್ಮತ್ತ ಬಿಸಾಕುವ ಅಂಬಾನಿಗಳ ಕೊಂಪೆಯಿಂದ ಕೊಳೆತ ಮಿದುಳಿನ ಆಸಾಮಿಯನ್ನು ತಂದು ಆ ಜಾಗಕ್ಕೆ ಕೂರಿಸಿದ್ದು ಈಗ ಹಳೆಯ ವಿಷಯ, ಹೊಸ ವಿಷಯ ಏನಪ್ಪ ಅಂದ್ರೆ ರಿಸರ್ವ್ ಬ್ಯಾಂಕೆಂದರೆ ಬೊಂಬಾಯ್ ಮಿಠಾಯ್ ಮಾರೋ ಅಂಗಡಿ ಅಂತ ಭ್ರಮೆಯಲ್ಲಿರೋ ಈ ಅಂಬಾನಿ ಜವಾನನಿಗೆ ಒಂದೈವತ್ತು ಹುಚ್ಚರು ಒಮ್ಮೆಲೇ ಕಚ್ಚಿ ತಲೆ ಇನ್ಫೆಕ್ಷನ್ ಆಗಿರೋ ಸಾಧ್ಯತೆಗಳು ಕಂಡುಬರುತ್ತಿವೆ. ಜನರು ಬಳಸುತ್ತಿದ್ದ ಮುದ್ದಾದ ನೋಟುಗಳನ್ನು ಕಚಡಿ ಪಿಚಡಿ ಆಕಾರದಲ್ಲಿ ಇಷ್ಟಬಂದಂತೆ ಚಡ್ಡಿ ಬದಲಿಸಿದಂತೆ ಬದಲಿಸಿ ಒಂದರ ಹಿಂದೊಂದು ಪೀಕಲಾಟ ತಂದಿಡ್ತಿರೋ ಉರ್ಜಿತ್ ಪಟೇಲ್ ಎಟಿಎಂ ವ್ಯವಸ್ಥೆಗೇ ಡಿಚ್ಚಿ ಹೊಡೆಯುತ್ತಿದ್ದಾನೆ. ಇವನು ಬದಲಿಸೋ ನೋಟುಗಳ ಸೈಜು ಎಟಿಎಂಗಳಿಗೆ ಸರಿ ಹೋಗದೆ ಬ್ಯಾಂಕುಗಳು ಲಬೋಲಬೋ ಬಾಯಿ ಬಡ್ಕೊಂಡ್ರೂ ಹೊಸದಾಗಿ 100 ರುಪಾಯಿ ನೋಟು ಡಿಸೈನ್ ಚೇಂಜ್ ಮಾಡಿ ಚಲಾವಣೆಗೆ ಬಿಡಲಾಗಿದೆ. ನೋಟ್ ಬ್ಯಾನ್ ಟೈಮಿನಲ್ಲಿ ನಾವು ನೋಟೇ ಇಲ್ಲದ ಕ್ಯಾಶ್‍ಲೆಸ್ ಎಕಾನಮಿ ನಿರ್ಮಿಸ್ತೀವಿ ಅಂತ ಬೊಗಳಿದವರು ತಿಂಗಳಿಂದ ತಿಂಗಳಿಗೆ ನೋಟುಗಳ ಪ್ರಿಂಟಿಂಗನ್ನು ಹೆಚ್ಚಿಸ್ತಿರೋದ್ಯಾಕೆ ಅನ್ನೋ ಮರ್ಮ ಯಾರಿಗೂ ಗೊತ್ತಾಗ್ತ ಇಲ್ಲ. ಜನರ ಪಡಿಪಾಟಲುಗಳನ್ನು ಸೈಕೋಗಳಂತೆ ಎಂಜಾಯ್ ಮಾಡ್ತಿರೋ ಈ ಸನಾತನಿ ಪಿಶಾಚಿಗಳಿಗೆ ಬರಬಾರದ್ದು ಬಂದು ಹುಳ ಬಿದ್ದು ಸಾಯಲೆಂದು ಜನರು ಶಾಪ ಹಾಕುತ್ತಿರುವುದು ತಿಳಿದು ಬಂದಿದೆ.

*****

ವಯಸ್ಸಲ್ಲದ ವಯಸ್ಸಲ್ಲಿ “ಕುಚ್ ಕುಚ್ ಹೋತಾ ಹೈ, ಬ್ಲೂಜೆಪಿವಾಲೇ ಲಡ್ಕಿ ಲೇಜಾಯೇಂಗೆ” ಅಂತ ಸರ್ಕಾರಿ ಕ್ಲರ್ಕ್ ಹುಡುಗಿಯೊಂದಿಗೆ ಕದ್ದುಮುಚ್ಚಿ ಕುಸುಮುಸು ಮಾಡಿ ಕೈ ಎತ್ತಿದ್ದ ಬ್ಲೂಜೆಪಿಯ ರಾಮದಾಸನಿಗೆ ಶನಿ ಮಕದ ಮೇಲೆ ಅಂಡೂರಿ ಕುಂತುಬಿಟ್ಟಿದ್ದಾನೆ. ಎಲ್ಲ ಮುಗಿದ ಮೇಲೆ ರಾಮ್ದಾಸ ಕೈಗೆ ಸಿಗದಂಗೆ ತಪ್ಪಿಸ್ಕಂಡು ಓಡೋಗವ್ನೆ ಅಂತ ರೊಚ್ಚಿಗೆದ್ದಿರೋ ಪ್ಲೇಮಕುಮಾರಿಯೆಂಬ ರಾಮ್ದಾಸನ ಮಾಜಿ ಲವರ್ರು ಸೀದಾ ಕೈಕೊಟ್ಟ ಮಿಡಲ್ ಏಜ್ ಮನ್ಮಥನ ಆಫೀಸಿನ ಮುಂದೆ ಧುಡುಮ್ಮನೆ ಬಿದ್ದಿದೆ. ದೀಪಾವಳಿಯ ವಿಷ್ಣುಚಕ್ರದಂತೆ ಗರಗರಗರ ತಿರುಗುತ್ತ ನೆಲದ ಮೇಲೆ ಕೂಚಿಪುಡಿ-ಭರತನಾಟ್ಯ ಎರಡನ್ನೂ ಮಿಕ್ಸ್ ಮಾಡಿದ ಘನಘೋರ ನೃತ್ಯವಾಡಿ ರಾಮ್ದಾಸ್ ಕಛೇರಿಯೆದುರು ನೆರೆದ ಬ್ಲೂಜೆಪಿ ಕಾರ್ಯಕರ್ತರಿಗೆ ಪುಗ್ಸಟ್ಟೆ ಮನರಂಜನೆ ಒದಗಿಸಿದ್ದಾರೆ. ಈ ಹೆಣ್ಣಿನೊಡನೆ ಕಳ್ಳಾಟವಾಡಿ ಕೈಗೆ ಚೊಂಬು ಕೊಟ್ಟು ಯಾಮಾರಿಸಿ ಇನ್ನೊಂದರ ಬೆನ್ನುಬೀಳಲು ರೆಡಿಯಾಗಿದ್ದ ರಾಮ್ದಾಸನ ಗಂಟಲಿಗೆ ಹೆಟ್ಟಿದ ಗಢಾರಿಯಾಗಿರೋ ಪ್ಲೇಮಕುಮಾರಿ.. ನಾನು ಕುಲಗೆಟ್ಟು ಹೋಗಿರೋ ರಾಮ್ದಾಸನಿಗೆ ಬಾಳು ಕೊಡ್ತೇನೆ, ಈ ಓತಿಕ್ಯಾತದ ಮೂತಿಯವನ ಬಾಳು ಬಂಗಾರ ಮಾಡಿ, ಮಾನ ಹರಿದು ಊರು ಬಾಗಲು ಮಾಡಿ, ಅವನ ಹಣೆಗೆ ಅಕ್ಕಿಕಾಳು ಮಡಗೋತನಕ ನಾನು ಬ್ಯೂಟಿಪಾರ್ಲರಿನಲ್ಲಿ ಐಬ್ರೋ ಮಾಡ್ಸಲ್ಲ ಅಂತ ಶಪಥಗೈದಿದ್ದಾರೆ. ಈ ವೀರಪ್ರತಿಜ್ಞೆ ತಿಳಿದ ರಾಮ್ದಾಸನು ಕೆ.ಆರ್.ಪುರದ ಬಾರ್‍ನ ಟಾಯ್ಲೆಟ್ಟಿನಲ್ಲಿ ಕುಳಿತು ಗೊಳೋ ಅಂತ ಅಳುತ್ತಿದ್ದಾರೆಂದು ಬಾರ್ ಸಪ್ಲೈಯರ್ ಮಾಹಿತಿ ನೀಡಿದ್ದಾರೆ.

*****

ರಾಜಕಾರಣಿಗಳು ಜನರ ದುಡ್ಡು ದೋಚುವುದನ್ನು ನೀವು ಕೇಳಿದ್ದೀರಿ, ಈಗ ಟಾಯ್ಲೆಟ್, ಕಮೋಡ್, ಪೈಪುಗಳನ್ನೂ ಬಿಡದೆ ದೋಚುತ್ತಿರುವುದು ಹೊಸ ವಿಷಯ. ವಿಷ್ಯ ಏನಪ್ಪ ಅಂದ್ರೆ ಕಾರವಾರದ ಹಿಂದಿನ ಕೈ ಪಕ್ಷದ ಎಮ್ಮೆಲ್ಲೆ ಸತೀಶ್ ಸೈಲ್ ಎಂಬ ಗಣಿ ಗಢವನು ತನಗೆ ಸರ್ಕಾರ ಒದಗಿಸಿದ್ದ ಕಛೇರಿ ಶೌಚಾಲಯದ ಕಮೋಡು, ಪೈಪು, ಫ್ಲಶ್ ಬ್ಲಾಕ್ಸೆಲ್ಲವನ್ನೂ ಬಿಚ್ಚಿಕೊಂಡು ಮಂಗಮಾಯವಾಗಿದ್ದಾನೆ. ಹೊಸದಾಗಿ ಆಯ್ಕೆಯಾದ ಎಮ್ಮೆಲ್ಲೆ ಲೂಪಾಲಿ ನಾಯ್ಕ ಎಂಬ ಬ್ಲೂಜೆಪಿ ಎಮ್ಮೆಲ್ಲೆ ಈ ಕಛೇರಿಗೆ ಬಂದಾಗ ಟಾಯ್ಲೆಟ್ ರೂಮಿನಲ್ಲಿ ಬಕೀಟು ನಲ್ಲಿಯೊಂದನ್ನು ಬಿಟ್ಟು ಉಳಿದದ್ದೆಲ್ಲ ಠಣಾರ್ ಆಗಿರುವುದು ಕಂಡು ಕಂಗಾಲಾಗಿದ್ದಾರೆ. ಅಜೆರ್ಂಟಾಗಿ ನಿತ್ಯಕರ್ಮಗಳನ್ನು ಮುಗಿಸಿಕೊಳ್ಳಲೂ ಸಾಧ್ಯವಾಗದಂತೆ ಪೀಕಲಾಟಕ್ಕೆ ಸಿಲುಕಿರೋ ಬ್ಲೂಜೆಪಿ ಎಮ್ಮೆಲ್ಲೆಗೆ ಸದ್ಯಕ್ಕೆ ಪೇ & ಯೂಸ್ ಸುಲಭ್ ಶೌಚಾಲಯವೇ ಗತಿಯಾಗಿದೆಯಂತೆ. ತನ್ನನ್ನು ಈ ಸ್ಥಿತಿಗೆ ನೂಕಿ ಹೋಗಿರೊ ಹಳೇ ಎಮ್ಮೆಲ್ಲೆ ಸತೀಶನ ಮೇಲೆ ಟಾಯ್ಲೆಟ್ ಕಳ್ಳತನದ ಕೇಸು ಹಾಕಲು ಲೂಪಾಲಿ ಮೇಡಂ ಸಿದ್ದರಾಗಿದ್ದಾರೆಂದು ಸುಲಭ್ ಶೌಚಾಲಯದ ಸಿಬ್ಬಂದಿ ತಿಳಿಸಿದ್ದಾರೆ. ನೂರಾರು ಕೋಟಿ ಗಣಿ ಯವಾರ ನಡೆಸೋ ಸತೀಶನಿಗೆ ಟಾಯ್ಲೆಟ್ ಐಟಂಗಳನ್ನ ಕದ್ಕೊಂಡು ಹೋಗೋ ದುರ್ಗತಿ ಯಾಕೆ ಬಂತೆಂದು ವಿಚಾರಿಸಿದಾಗ ಹೊಸ ಸಂಗತಿಯೊಂದು ಬಯಲಾಗಿದೆ. ವಾಸ್ತುಪ್ರಕಾರ ಪೂಜೆ ಮಾಡಿ ಅಳವಡಿಸಿರೋ ಇದೇ ಐಟಂಗಳನ್ನು ಬಳಸಿದ್ರೆ ನಿನಗೆ ಒಳ್ಳೆಯದೆಂದು ಗಢವ ಗೋರಿಲ್ಲ ಬ್ರಮ್ಮಾಂಡ ಪಿಂಡ ಟಾಯ್ಲೆಟ್ಟೋಪದೇಶ ಮಾಡಿದ್ದನಂತೆ. ಅದಕ್ಕೆಂದು ಅಧಿಕಾರ ಎಗರಿಹೋದ ಮೇಲೆ ಮಾಜಿ ಎಮ್ಮೆಲ್ಲೆ ಸತೀಶನು ಟಾಯ್ಲೆಟ್ಟನ್ನು ಅನಾಮತ್ತಾಗಿ ಪಾರ್ಟ್ ಪಾರ್ಟಾಗಿ ಬಿಚ್ಚಿಕೊಂಡು ಹೋಗಿದ್ದಾನೆಂದು ಬಲ್ಲ ಮೂಲಗಳು ಸ್ಪಷ್ಟಪಡಿಸಿವೆ.

*****

ದನದ ಮಾಂಸ ತಿನ್ನುವುದನ್ನು ನಿಲ್ಲಿಸಿದರೆ, ಗೋರಕ್ಷಕರಿಂದ ನಡೆಯುತ್ತಿರುವ ದನಸಾಗಾಟಗಾರರ ಕೊಲೆಗಳು ನಿಲ್ಲುತ್ತವೆಂದು ರಾಷ್ಟ್ರೀಯ ಸರ್ವನಾಶಕ ಸಂಘದ ಇಂದ್ರೇಶನೆಂಬ ಮುದಿಹೋರಿ ಸ್ಟೇಟ್‍ಮೆಂಟ್ ಎಸೆದಿದೆ. ‘ದನದಮಾಂಸ ತಿನ್ನುವರನ್ನು ನಾವು ಕೊಲ್ತಾನೇ ಇರ್ತೇವೆ, ಜೀವ ಬೇಕೋ ದನದ ಮಾಂಸ ಬೇಕೋ?’ ಅಂತ ಬೆದರಿಕೆಯೊಡ್ಡಿದೆ. ಇತ್ತಕಡೆ ಪಕೋಡತಾತನ ಆಳ್ವಿಕೆಯಲ್ಲಿ ಇಂಡಿಯದೇಶ ಜಗತ್ತಿನಲ್ಲೇ ಅತಿದೊಡ್ಡ ದನದಮಾಂಸ ರಫ್ತುದಾರ ದೇಶವಾಗಿದೆ. ದನಹಸುಗಳನ್ನು ಕೊಂದು ರಫ್ತುಮಾಡೋ ಕಂಪನಿಗಳಿಂದ ಎಂಜಲೆತ್ತಿಕೊಂಡು ಓಡಾಡ್ತಿರೋ ಇವರು ದನಗಳನ್ನು ರಕ್ಷಿಸೋ ಮಾತನಾಡುವುದು, ವಿಕೃತಕಾಮಿ ಉಮೇಶ್ ರೆಡ್ಡಿ ಮಹಿಳಾ ಸುರಕ್ಷತೆ ಬಗ್ಗೆ ಭಾಷಣ ಹೊಡೆದಂತೆ ಕೇಳುತ್ತದೆಯೆಂದು ಸಂತ್ರಸ್ತೆಯೊಬ್ಬರು ತಿಳಿಸಿದ್ದಾರೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...