Homeಅಂಕಣಗಳುಕ್ಯಾಶ್‍ಲೆಸ್ ಎಕಾನಮಿ ಅಂದಿದ್ದವ್ರು ಕಲರ್‍ಕಲರ್ ನೋಟು ಪ್ರಿಂಟ್ ಮಾಡ್ತಾ ಅವುರೆ

ಕ್ಯಾಶ್‍ಲೆಸ್ ಎಕಾನಮಿ ಅಂದಿದ್ದವ್ರು ಕಲರ್‍ಕಲರ್ ನೋಟು ಪ್ರಿಂಟ್ ಮಾಡ್ತಾ ಅವುರೆ

- Advertisement -
- Advertisement -

ಕೇಳುಗರಿಗೆಲ್ಲ ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಉಡುಪಿಯ ಅಷ್ಟಮಠದ ಶಿರೂರು ಸ್ವಾಮಿಗಳ ಪಾಯ್ಸನ್ ಫುಡ್ ಸಾವಿಗೆ ಕಿಂಚಿತ್ತೂ ಕರುಳು ಕರಗದ ತೇಜಾವರ ಸ್ವಾಮಿಗಳು, ಆ ಸ್ವಾಮಿ ನಂತರ ಫೊರೆನ್ಸಿಕ್ ಸೈನ್ಸನ್ನೇ ನುಣ್ಣಗೆ ಅರೆದು ಗಟಗಟ ಕುಡಿದವರಂತೆ ಕೆಕರುಮಕರಾಗಿ ಹೇಳಿಕೆ ಕೊಟ್ಟಿದ್ದಾರೆ. ಆ ಸ್ವಾಮಿ ಎಣ್ಣೆ ತಗತಿದ್ದ, ಹೆಣ್ಮಕ್ಕಳ ಮ್ಯಾಟ್ರಲ್ಲಿ ವೀಕ್ ಇದ್ದ, ಹಂಗಾಗಿ ಸತ್ತೋಗಿರಬೇಕು ಅಂತ ತೇಜಾವರರು ಕೀರಲು ದನಿಯಲ್ಲಿ ಊಳಿಟ್ಟಿದ್ದಾರೆ. ದಿವಂಗತ ಸ್ವಾಮಿ ಬದುಕಿದ್ದಾಗ “ಎಂಟು ಮಠಗಳ ಎಲ್ಲ ಸ್ವಾಮುಗೋಳು ಮ್ಯಾರೇಜ್ ಮಾಡ್ಕಂಡು, ಕದ್ದು ಮಕ್ಕಳು ಹುಟ್ಟುಸಿ, ಹುಟ್ಟಿಸಿದ ಮಕ್ಳೆಲ್ಲವನ್ನು ಕದ್ದು ಮಡಗಿದ್ದಾರೆ, ಬಾಂಬೆ, ಪೂನಾದಲ್ಲಿ ಹೋಟೆಲ್ ಬ್ಯುಜಿನೆಸ್ ನಡುಸ್ತಾವ್ರೆ, ಮೀಟ್ರುಬಡ್ಡಿಗೆ ಸಾಲ ಕೊಟ್ಟು ಪರ್ಸೆಂಟೇಜ್ ಬಡ್ಡಿ ಯವಾರ ನಡುಸ್ತಾವ್ರೆ” ಅಂತ ಮುರಕೊಂಡು ಬಿದ್ದಿದ್ದಾಗ ಬಾಯಿಗೆ ಹೊಲಿಗೆ ಹಾಕ್ಕಂಡು ಕಮಕ್ ಕಿಮಕ್ ಅನ್ನದೆ ಇದ್ದ ತೇಜಾವರರಿಗೆ ಇದ್ದಕ್ಕಿದ್ದಂತೆ ಈ ಧೈರ್ಯ ಎಲ್ಲಿಂದ ಬಂತು ಎಂದು ಭಕ್ತಾದಿಗಳೇ ಗಾಬರಿಯಾಗಿದ್ದಾರೆ. ನೂರಾರು ಸಲ ಮಠದ ಗಾಯಕಿಯೊಬ್ಬರ ಮೇಲೆ ರೇಪು ಮಾಡಿ ಕೋರ್ಟಿಂದ ಉಗಿಸಿಕೊಂಡ ಕೌಬಾಯ್ ಸ್ವಾಮಿ ವಿಷಯದಲ್ಲಿ ಲವಿಡವಿ ಸೈಲೆನ್ಸ್ ಮೈಂಟೈನ್ ಮಾಡುತ್ತ ಸಪೋರ್ಟ್ ಕೊಡೋ ತೇಜಾವರರು ತಮ್ಮ ಎಂಟು ಮಠಗಳ ಸ್ವಾಮಿಗಳ ರಹಸ್ಯವನ್ನೆಲ್ಲ ಹರಾಜು ಹಾಕುತ್ತಿದ್ದ ಸ್ವಾಮಿ ಅನುಮಾನಾಸ್ಪದವಾಗಿ ಸತ್ತ ನಂತರವೂ ಹಗೆ ಸಾಧಿಸಿ ಕಳಪೆ ಮಾತನ್ನಾಡುವುದು ಆ ಮನುಷ್ಯನ ನೀಚತನ ಎಂಬ ಜನ ಮಾತಾಡಿಕೊಳ್ಳುತ್ತಿರುವುದು ತಿಳಿದುಬಂದಿದೆ.

*****

ರಿಸರ್ವ್ ಬ್ಯಾಂಕ್ ಗೌರ್ನರ್ ಆಗಿದ್ದ ರಘುರಾಮ್ ರಾಜನ್ ರಂಥ ಪಳಗಿದ ಆರ್ಥಿಕತಜ್ಞರಿಗೆ ಕೊಡಬಾರದ ಕಾಟ ಕೊಟ್ಟು ಒಕ್ಕಲೆಬ್ಬಿಸಿದ ಶಿಲಾಯುಗದ ಸನಾತನಿ ಪೀಡೆಗಳು, ಚೀಪಿದ ಮೂಳೆ ತಮ್ಮತ್ತ ಬಿಸಾಕುವ ಅಂಬಾನಿಗಳ ಕೊಂಪೆಯಿಂದ ಕೊಳೆತ ಮಿದುಳಿನ ಆಸಾಮಿಯನ್ನು ತಂದು ಆ ಜಾಗಕ್ಕೆ ಕೂರಿಸಿದ್ದು ಈಗ ಹಳೆಯ ವಿಷಯ, ಹೊಸ ವಿಷಯ ಏನಪ್ಪ ಅಂದ್ರೆ ರಿಸರ್ವ್ ಬ್ಯಾಂಕೆಂದರೆ ಬೊಂಬಾಯ್ ಮಿಠಾಯ್ ಮಾರೋ ಅಂಗಡಿ ಅಂತ ಭ್ರಮೆಯಲ್ಲಿರೋ ಈ ಅಂಬಾನಿ ಜವಾನನಿಗೆ ಒಂದೈವತ್ತು ಹುಚ್ಚರು ಒಮ್ಮೆಲೇ ಕಚ್ಚಿ ತಲೆ ಇನ್ಫೆಕ್ಷನ್ ಆಗಿರೋ ಸಾಧ್ಯತೆಗಳು ಕಂಡುಬರುತ್ತಿವೆ. ಜನರು ಬಳಸುತ್ತಿದ್ದ ಮುದ್ದಾದ ನೋಟುಗಳನ್ನು ಕಚಡಿ ಪಿಚಡಿ ಆಕಾರದಲ್ಲಿ ಇಷ್ಟಬಂದಂತೆ ಚಡ್ಡಿ ಬದಲಿಸಿದಂತೆ ಬದಲಿಸಿ ಒಂದರ ಹಿಂದೊಂದು ಪೀಕಲಾಟ ತಂದಿಡ್ತಿರೋ ಉರ್ಜಿತ್ ಪಟೇಲ್ ಎಟಿಎಂ ವ್ಯವಸ್ಥೆಗೇ ಡಿಚ್ಚಿ ಹೊಡೆಯುತ್ತಿದ್ದಾನೆ. ಇವನು ಬದಲಿಸೋ ನೋಟುಗಳ ಸೈಜು ಎಟಿಎಂಗಳಿಗೆ ಸರಿ ಹೋಗದೆ ಬ್ಯಾಂಕುಗಳು ಲಬೋಲಬೋ ಬಾಯಿ ಬಡ್ಕೊಂಡ್ರೂ ಹೊಸದಾಗಿ 100 ರುಪಾಯಿ ನೋಟು ಡಿಸೈನ್ ಚೇಂಜ್ ಮಾಡಿ ಚಲಾವಣೆಗೆ ಬಿಡಲಾಗಿದೆ. ನೋಟ್ ಬ್ಯಾನ್ ಟೈಮಿನಲ್ಲಿ ನಾವು ನೋಟೇ ಇಲ್ಲದ ಕ್ಯಾಶ್‍ಲೆಸ್ ಎಕಾನಮಿ ನಿರ್ಮಿಸ್ತೀವಿ ಅಂತ ಬೊಗಳಿದವರು ತಿಂಗಳಿಂದ ತಿಂಗಳಿಗೆ ನೋಟುಗಳ ಪ್ರಿಂಟಿಂಗನ್ನು ಹೆಚ್ಚಿಸ್ತಿರೋದ್ಯಾಕೆ ಅನ್ನೋ ಮರ್ಮ ಯಾರಿಗೂ ಗೊತ್ತಾಗ್ತ ಇಲ್ಲ. ಜನರ ಪಡಿಪಾಟಲುಗಳನ್ನು ಸೈಕೋಗಳಂತೆ ಎಂಜಾಯ್ ಮಾಡ್ತಿರೋ ಈ ಸನಾತನಿ ಪಿಶಾಚಿಗಳಿಗೆ ಬರಬಾರದ್ದು ಬಂದು ಹುಳ ಬಿದ್ದು ಸಾಯಲೆಂದು ಜನರು ಶಾಪ ಹಾಕುತ್ತಿರುವುದು ತಿಳಿದು ಬಂದಿದೆ.

*****

ವಯಸ್ಸಲ್ಲದ ವಯಸ್ಸಲ್ಲಿ “ಕುಚ್ ಕುಚ್ ಹೋತಾ ಹೈ, ಬ್ಲೂಜೆಪಿವಾಲೇ ಲಡ್ಕಿ ಲೇಜಾಯೇಂಗೆ” ಅಂತ ಸರ್ಕಾರಿ ಕ್ಲರ್ಕ್ ಹುಡುಗಿಯೊಂದಿಗೆ ಕದ್ದುಮುಚ್ಚಿ ಕುಸುಮುಸು ಮಾಡಿ ಕೈ ಎತ್ತಿದ್ದ ಬ್ಲೂಜೆಪಿಯ ರಾಮದಾಸನಿಗೆ ಶನಿ ಮಕದ ಮೇಲೆ ಅಂಡೂರಿ ಕುಂತುಬಿಟ್ಟಿದ್ದಾನೆ. ಎಲ್ಲ ಮುಗಿದ ಮೇಲೆ ರಾಮ್ದಾಸ ಕೈಗೆ ಸಿಗದಂಗೆ ತಪ್ಪಿಸ್ಕಂಡು ಓಡೋಗವ್ನೆ ಅಂತ ರೊಚ್ಚಿಗೆದ್ದಿರೋ ಪ್ಲೇಮಕುಮಾರಿಯೆಂಬ ರಾಮ್ದಾಸನ ಮಾಜಿ ಲವರ್ರು ಸೀದಾ ಕೈಕೊಟ್ಟ ಮಿಡಲ್ ಏಜ್ ಮನ್ಮಥನ ಆಫೀಸಿನ ಮುಂದೆ ಧುಡುಮ್ಮನೆ ಬಿದ್ದಿದೆ. ದೀಪಾವಳಿಯ ವಿಷ್ಣುಚಕ್ರದಂತೆ ಗರಗರಗರ ತಿರುಗುತ್ತ ನೆಲದ ಮೇಲೆ ಕೂಚಿಪುಡಿ-ಭರತನಾಟ್ಯ ಎರಡನ್ನೂ ಮಿಕ್ಸ್ ಮಾಡಿದ ಘನಘೋರ ನೃತ್ಯವಾಡಿ ರಾಮ್ದಾಸ್ ಕಛೇರಿಯೆದುರು ನೆರೆದ ಬ್ಲೂಜೆಪಿ ಕಾರ್ಯಕರ್ತರಿಗೆ ಪುಗ್ಸಟ್ಟೆ ಮನರಂಜನೆ ಒದಗಿಸಿದ್ದಾರೆ. ಈ ಹೆಣ್ಣಿನೊಡನೆ ಕಳ್ಳಾಟವಾಡಿ ಕೈಗೆ ಚೊಂಬು ಕೊಟ್ಟು ಯಾಮಾರಿಸಿ ಇನ್ನೊಂದರ ಬೆನ್ನುಬೀಳಲು ರೆಡಿಯಾಗಿದ್ದ ರಾಮ್ದಾಸನ ಗಂಟಲಿಗೆ ಹೆಟ್ಟಿದ ಗಢಾರಿಯಾಗಿರೋ ಪ್ಲೇಮಕುಮಾರಿ.. ನಾನು ಕುಲಗೆಟ್ಟು ಹೋಗಿರೋ ರಾಮ್ದಾಸನಿಗೆ ಬಾಳು ಕೊಡ್ತೇನೆ, ಈ ಓತಿಕ್ಯಾತದ ಮೂತಿಯವನ ಬಾಳು ಬಂಗಾರ ಮಾಡಿ, ಮಾನ ಹರಿದು ಊರು ಬಾಗಲು ಮಾಡಿ, ಅವನ ಹಣೆಗೆ ಅಕ್ಕಿಕಾಳು ಮಡಗೋತನಕ ನಾನು ಬ್ಯೂಟಿಪಾರ್ಲರಿನಲ್ಲಿ ಐಬ್ರೋ ಮಾಡ್ಸಲ್ಲ ಅಂತ ಶಪಥಗೈದಿದ್ದಾರೆ. ಈ ವೀರಪ್ರತಿಜ್ಞೆ ತಿಳಿದ ರಾಮ್ದಾಸನು ಕೆ.ಆರ್.ಪುರದ ಬಾರ್‍ನ ಟಾಯ್ಲೆಟ್ಟಿನಲ್ಲಿ ಕುಳಿತು ಗೊಳೋ ಅಂತ ಅಳುತ್ತಿದ್ದಾರೆಂದು ಬಾರ್ ಸಪ್ಲೈಯರ್ ಮಾಹಿತಿ ನೀಡಿದ್ದಾರೆ.

*****

ರಾಜಕಾರಣಿಗಳು ಜನರ ದುಡ್ಡು ದೋಚುವುದನ್ನು ನೀವು ಕೇಳಿದ್ದೀರಿ, ಈಗ ಟಾಯ್ಲೆಟ್, ಕಮೋಡ್, ಪೈಪುಗಳನ್ನೂ ಬಿಡದೆ ದೋಚುತ್ತಿರುವುದು ಹೊಸ ವಿಷಯ. ವಿಷ್ಯ ಏನಪ್ಪ ಅಂದ್ರೆ ಕಾರವಾರದ ಹಿಂದಿನ ಕೈ ಪಕ್ಷದ ಎಮ್ಮೆಲ್ಲೆ ಸತೀಶ್ ಸೈಲ್ ಎಂಬ ಗಣಿ ಗಢವನು ತನಗೆ ಸರ್ಕಾರ ಒದಗಿಸಿದ್ದ ಕಛೇರಿ ಶೌಚಾಲಯದ ಕಮೋಡು, ಪೈಪು, ಫ್ಲಶ್ ಬ್ಲಾಕ್ಸೆಲ್ಲವನ್ನೂ ಬಿಚ್ಚಿಕೊಂಡು ಮಂಗಮಾಯವಾಗಿದ್ದಾನೆ. ಹೊಸದಾಗಿ ಆಯ್ಕೆಯಾದ ಎಮ್ಮೆಲ್ಲೆ ಲೂಪಾಲಿ ನಾಯ್ಕ ಎಂಬ ಬ್ಲೂಜೆಪಿ ಎಮ್ಮೆಲ್ಲೆ ಈ ಕಛೇರಿಗೆ ಬಂದಾಗ ಟಾಯ್ಲೆಟ್ ರೂಮಿನಲ್ಲಿ ಬಕೀಟು ನಲ್ಲಿಯೊಂದನ್ನು ಬಿಟ್ಟು ಉಳಿದದ್ದೆಲ್ಲ ಠಣಾರ್ ಆಗಿರುವುದು ಕಂಡು ಕಂಗಾಲಾಗಿದ್ದಾರೆ. ಅಜೆರ್ಂಟಾಗಿ ನಿತ್ಯಕರ್ಮಗಳನ್ನು ಮುಗಿಸಿಕೊಳ್ಳಲೂ ಸಾಧ್ಯವಾಗದಂತೆ ಪೀಕಲಾಟಕ್ಕೆ ಸಿಲುಕಿರೋ ಬ್ಲೂಜೆಪಿ ಎಮ್ಮೆಲ್ಲೆಗೆ ಸದ್ಯಕ್ಕೆ ಪೇ & ಯೂಸ್ ಸುಲಭ್ ಶೌಚಾಲಯವೇ ಗತಿಯಾಗಿದೆಯಂತೆ. ತನ್ನನ್ನು ಈ ಸ್ಥಿತಿಗೆ ನೂಕಿ ಹೋಗಿರೊ ಹಳೇ ಎಮ್ಮೆಲ್ಲೆ ಸತೀಶನ ಮೇಲೆ ಟಾಯ್ಲೆಟ್ ಕಳ್ಳತನದ ಕೇಸು ಹಾಕಲು ಲೂಪಾಲಿ ಮೇಡಂ ಸಿದ್ದರಾಗಿದ್ದಾರೆಂದು ಸುಲಭ್ ಶೌಚಾಲಯದ ಸಿಬ್ಬಂದಿ ತಿಳಿಸಿದ್ದಾರೆ. ನೂರಾರು ಕೋಟಿ ಗಣಿ ಯವಾರ ನಡೆಸೋ ಸತೀಶನಿಗೆ ಟಾಯ್ಲೆಟ್ ಐಟಂಗಳನ್ನ ಕದ್ಕೊಂಡು ಹೋಗೋ ದುರ್ಗತಿ ಯಾಕೆ ಬಂತೆಂದು ವಿಚಾರಿಸಿದಾಗ ಹೊಸ ಸಂಗತಿಯೊಂದು ಬಯಲಾಗಿದೆ. ವಾಸ್ತುಪ್ರಕಾರ ಪೂಜೆ ಮಾಡಿ ಅಳವಡಿಸಿರೋ ಇದೇ ಐಟಂಗಳನ್ನು ಬಳಸಿದ್ರೆ ನಿನಗೆ ಒಳ್ಳೆಯದೆಂದು ಗಢವ ಗೋರಿಲ್ಲ ಬ್ರಮ್ಮಾಂಡ ಪಿಂಡ ಟಾಯ್ಲೆಟ್ಟೋಪದೇಶ ಮಾಡಿದ್ದನಂತೆ. ಅದಕ್ಕೆಂದು ಅಧಿಕಾರ ಎಗರಿಹೋದ ಮೇಲೆ ಮಾಜಿ ಎಮ್ಮೆಲ್ಲೆ ಸತೀಶನು ಟಾಯ್ಲೆಟ್ಟನ್ನು ಅನಾಮತ್ತಾಗಿ ಪಾರ್ಟ್ ಪಾರ್ಟಾಗಿ ಬಿಚ್ಚಿಕೊಂಡು ಹೋಗಿದ್ದಾನೆಂದು ಬಲ್ಲ ಮೂಲಗಳು ಸ್ಪಷ್ಟಪಡಿಸಿವೆ.

*****

ದನದ ಮಾಂಸ ತಿನ್ನುವುದನ್ನು ನಿಲ್ಲಿಸಿದರೆ, ಗೋರಕ್ಷಕರಿಂದ ನಡೆಯುತ್ತಿರುವ ದನಸಾಗಾಟಗಾರರ ಕೊಲೆಗಳು ನಿಲ್ಲುತ್ತವೆಂದು ರಾಷ್ಟ್ರೀಯ ಸರ್ವನಾಶಕ ಸಂಘದ ಇಂದ್ರೇಶನೆಂಬ ಮುದಿಹೋರಿ ಸ್ಟೇಟ್‍ಮೆಂಟ್ ಎಸೆದಿದೆ. ‘ದನದಮಾಂಸ ತಿನ್ನುವರನ್ನು ನಾವು ಕೊಲ್ತಾನೇ ಇರ್ತೇವೆ, ಜೀವ ಬೇಕೋ ದನದ ಮಾಂಸ ಬೇಕೋ?’ ಅಂತ ಬೆದರಿಕೆಯೊಡ್ಡಿದೆ. ಇತ್ತಕಡೆ ಪಕೋಡತಾತನ ಆಳ್ವಿಕೆಯಲ್ಲಿ ಇಂಡಿಯದೇಶ ಜಗತ್ತಿನಲ್ಲೇ ಅತಿದೊಡ್ಡ ದನದಮಾಂಸ ರಫ್ತುದಾರ ದೇಶವಾಗಿದೆ. ದನಹಸುಗಳನ್ನು ಕೊಂದು ರಫ್ತುಮಾಡೋ ಕಂಪನಿಗಳಿಂದ ಎಂಜಲೆತ್ತಿಕೊಂಡು ಓಡಾಡ್ತಿರೋ ಇವರು ದನಗಳನ್ನು ರಕ್ಷಿಸೋ ಮಾತನಾಡುವುದು, ವಿಕೃತಕಾಮಿ ಉಮೇಶ್ ರೆಡ್ಡಿ ಮಹಿಳಾ ಸುರಕ್ಷತೆ ಬಗ್ಗೆ ಭಾಷಣ ಹೊಡೆದಂತೆ ಕೇಳುತ್ತದೆಯೆಂದು ಸಂತ್ರಸ್ತೆಯೊಬ್ಬರು ತಿಳಿಸಿದ್ದಾರೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...