Homeಮುಖಪುಟನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

- Advertisement -
- Advertisement -

ನವೆಂಬರ್‌‌ 8, 2016ರಂದು ನೋಟು ರದ್ಧತಿಯನ್ನು ಘೋಷಿಸಲಾಯಿತು. ಆ ನಂತರದಲ್ಲಿ ಕಡಿಮೆ ನಗದು ಬಳಕೆಗೆ ಸರ್ಕಾರ ಪ್ರೋತ್ಸಾಹಿಸಿತು. ಆದರೆ ನೋಟು ರದ್ಧತಿಯಾಗಿ ಐದು ವರ್ಷಗಳಾಗುತ್ತಿದ್ದರೂ ನೋಟಿನ ಬಳಕೆ ಹೆಚ್ಚಳ ಕಾಣುತ್ತಲೇ ಇದೆ ಎಂಬುದನ್ನು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಸ್ಪಷ್ಟಪಡಿಸಿದೆ.

ನಗದು ರಹಿತ ಭಾರತವನ್ನಾಗಿ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಭಾರತದ ಆರ್ಥಿಕತೆ ಭೌತಿಕ ಹಣಕಾಸಿನ ವ್ಯವಹಾರದ ಮೇಲೆ ನಿಂತಿದೆ. ಹೀಗಾಗಿ ಸರ್ಕಾರದ ನಿರ್ಧಾರ ವ್ಯತಿರಿಕ್ತವಾಗಿದೆ ಎಂಬುದನ್ನು ನೋಟಿನ ಬಳಕೆ ಹೆಚ್ಚಾಗಿರುವುದು ಸೂಚಿಸುತ್ತದೆ.

ನಗದು ಪಾವತಿಯು ಆದ್ಯತೆಯ ವಿಧಾನವಾಗಿ ಉಳಿದಿರುವುದರಿಂದ, ಅಕ್ಟೋಬರ್ 8, 2021ರ ವೇಳೆಗೆ ಕಳೆದ ಹದಿನೈದು ದಿನಗಳಲ್ಲಿ ಸಾರ್ವಜನಿಕರೊಂದಿಗಿನ ನಗದು ಗರಿಷ್ಠ ಮಟ್ಟದ್ದಾಗಿದ್ದು, 28.30 ಲಕ್ಷ ಕೋಟಿ ರೂ. ಆಗಿದೆ.

ನವೆಂಬರ್‌ 4, 2016ರಂದು ಜನರು ಹೊಂದಿದ್ದ ನಗದಿಗಿಂತ 10.33 ಲಕ್ಷ ಕೋಟಿ ರೂ. ಹೆಚ್ಚಿನ ನಗದನ್ನು ಹೊಂದಿರುವುದು ತಿಳಿದುಬಂದಿದೆ.  2016ರ ನವೆಂಬರ್‌ 4ರಂದು 17.97 ಲಕ್ಷ ಕೋಟಿ ರೂ. ನಗದು ಜನರೊಂದಿಗೆ ಇತ್ತು. ನವೆಂಬರ್ 25, 2016 ರಂದು ದಾಖಲಾದಂತೆ ಸಾರ್ವಜನಿಕರ ಬಳಿ ಇದ್ದ 9.11 ಲಕ್ಷ ಕೋಟಿ ರೂ.ಗಳಿಗಿಂತ ನಗದು ಪ್ರಮಾಣ ಶೇಕಡಾ 211 ರಷ್ಟು ಈಗ ಹೆಚ್ಚಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಂಕಿಅಂಶಗಳ ಪ್ರಕಾರ, ಅಕ್ಟೋಬರ್ 23, 2020ಕ್ಕೆ ಕೊನೆಗೊಂಡ ಹದಿನೈದು ದಿನಗಳಲ್ಲಿ, ದೀಪಾವಳಿ ಹಬ್ಬದ ಮೊದಲು ಸಾರ್ವಜನಿಕರ ಕರೆನ್ಸಿ 15,582 ಕೋಟಿ ರೂ. ಇದೆ. ನಗದು ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇ.8.5ರಷ್ಟು ಅಂದರೆ 2.21 ಲಕ್ಷ ಕೋಟಿ ರೂ. ಹೆಚ್ಚಳ ಕಂಡಿದೆ.

ನವೆಂಬರ್ 2016ರಲ್ಲಿ 500 ಮತ್ತು 1,000 ರೂಪಾಯಿ ನೋಟುಗಳನ್ನು ಹಿಂತೆಗೆದುಕೊಂಡ ನಂತರ, ನವೆಂಬರ್ 4, 2016 ರಂದು 17.97 ಲಕ್ಷ ಕೋಟಿ ರೂಪಾಯಿಗಳ ಸಾರ್ವಜನಿಕರ ಬಳಿಯಿದ್ದ ಕರೆನ್ಸಿ 2017ರ ಜನವರಿಯಲ್ಲಿ 7.8 ಲಕ್ಷ ಕೋಟಿ ರೂಪಾಯಿಗಳಿಗೆ ಕುಸಿಯಿತು.

ಸರ್ಕಾರ ಮತ್ತು ಆರ್‌ಬಿಐ “ಕಡಿಮೆ ನಗದು ಸಮಾಜ”, ಪಾವತಿಗಳ ಡಿಜಿಟಲೀಕರಣ ಮತ್ತು ವಿವಿಧ ವಹಿವಾಟುಗಳಲ್ಲಿ ನಗದು ಬಳಕೆಯ ಮೇಲೆ ನಿರ್ಬಂಧಗಳನ್ನು ಹೇರಿದ್ದರೂ ಸಹ, ವ್ಯವಸ್ಥೆಯಲ್ಲಿ ನಗದು ಸ್ಥಿರವಾಗಿ ಏರುತ್ತಿದೆ.

ಕೋವಿಡ್ ಸಾಂಕ್ರಾಮಿಕದ ತಡೆಯಲು ಸರ್ಕಾರವು ಕಟ್ಟುನಿಟ್ಟಾದ ಲಾಕ್‌ಡೌನ್ ಘೋಷಿಸಿದ್ದರಿಂದ 2020ರಲ್ಲಿ ಜನರು ನಗದನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಲು ಮುಂದಾದರು. ಫೆಬ್ರವರಿಯಲ್ಲಿ ಪ್ರಪಂಚದಾದ್ಯಂತ ರಾಷ್ಟ್ರಗಳು ಲಾಕ್‌ಡೌನ್‌ಗಳನ್ನು ಘೋಷಿಸುತ್ತಿದ್ದಂತೆ ಮತ್ತು ಭಾರತ ಸರ್ಕಾರವು ಲಾಕ್‌ಡೌನ್ ಘೋಷಿಸಲು ಸಿದ್ಧವಾಗುತ್ತಿದ್ದಂತೆ, ಜನರು ತಮ್ಮ ದಿನಸಿ ಮತ್ತು ಇತರ ಅಗತ್ಯ ಅಗತ್ಯಗಳನ್ನು ಪೂರೈಸಲು ಹಣವನ್ನು ಸಂಗ್ರಹಿಸಲು ಪ್ರಾರಂಭಿಸಿದರು.

ನವೆಂಬರ್ 2016ರಲ್ಲಿ ನೋಟುಗಳ ಹಠಾತ್ ರದ್ಧತಿಯು ಆರ್ಥಿಕತೆಯನ್ನು ಹಳ್ಳ ಹಿಡಿಸಿತು. ಬೇಡಿಕೆ ಇಲ್ಲವಾಯಿತು, ವ್ಯವಹಾರಗಳು ಕುಸಿದವು. ಜಿಡಿಪಿ ಬೆಳವಣಿಗೆಯು ಸುಮಾರು ಶೇಕಡಾ 1.5ರಷ್ಟು ಕುಸಿಯಿತು. ನೋಟು ನಿಷೇಧದ ನಂತರ ಹಲವು ಸಣ್ಣ ಕೈಗಾರಿಕೆಗಳು ಬಾಗಿಲು ಮುಚ್ಚಿದವು.


ಇದನ್ನೂ ಓದಿರಿ: ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಭೀಕರ ಸ್ಪೋಟ: ತಂದೆ-ಮಗ ಸ್ಥಳದಲ್ಲೇ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...