Homeಅಂತರಾಷ್ಟ್ರೀಯಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಲಾವೊ ಒಟೆನ್ಸ್ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ

- Advertisement -
- Advertisement -

ಕ್ಯಾಸೆಟ್‌ಗಳು ಯಾರಿಗೆ ಗೊತ್ತಿಲ್ಲ. 90ರ ದಶಕದ ಪೀಳಿಗೆಯವರೆಗಿನ ಯಾರನ್ನು ಕೇಳಿದರೂ ಅವರ ಜೀವನದ ಒಂದಲ್ಲಾ ಒಂದು ಘಳಿಗೆಯಲ್ಲಿ ಕ್ಯಾಸೆಟ್‌ನೊಂದಿಗಿನ ನೆನಪಿನ ಸುರುಳಿಗಳು ಬಿಚ್ಚಿಕೊಳ್ಳುತ್ತವೆ; ಧ್ವನಿ ಸುರುಳಿಯ ಕ್ಯಾಸೆಟ್‌ನಂತೆಯೇ. ಟೇಪ್‌ ರೆಕಾರ್ಡರ್ ಒಳಗೆ ಈ ಕ್ಯಾಸೆಟ್ ಟೇಪ್ ಸಿಕ್ಕಿಕೊಂಡರೆ, ಅದನ್ನು ಹೊರತೆಗೆದು ಮತ್ತೆ ಸುತ್ತಿ ಕ್ಯಾಸೆಟ್‌ ಒಳಗೆ ಸೇರಿಸುವುದು ನಿಜಕ್ಕೂ ಧ್ಯಾನಸ್ಥ ಕೆಲಸವಾಗಿರುತ್ತಿತ್ತು. ಇನ್ನು ಅದು ತುಂಡಾಗಿಬಿಟ್ಟರಂತೂ, ಅದಕ್ಕೆ ಕಳ್ಳಿಹಾಲು ಹಾಕಿ ಅಂಟಿಸಿ, ನೆರಳಿನಲ್ಲಿಯೇ ಒಣಗಿಸಿ ಸುತ್ತುವುದು ಯಾವ ಕರಕುಶಲ ಕೆಲಸಕ್ಕೂ ಕಡಿಮೆಯಿಲ್ಲ. ಇನ್ನು ನಮ್ಮ ಅಚ್ಚುಮೆಚ್ಚಿನ ಚಲನಚಿತ್ರ ಗೀತೆಗಳು, ದೇವರ ಹಾಡುಗಳು, ಜನಪದ ಕಥನಗಳು, ಸಿನಿಮಾಗಳನ್ನು ಕ್ಯಾಸೆಟ್‌ಗಳಲ್ಲಿಯೇ ಕೇಳುತ್ತಿದ್ದೆವು. 1960ರ ದಶಕದಲ್ಲಿ ಅನ್ವೇಷಿಸಲಾದ ಈ ಕ್ಯಾಸೆಟ್ ಬಹುಪಾಲು ಜನರಿಗೆ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದುದರಲ್ಲಿ ಸಂದೇಹವಿಲ್ಲ.

ಇಂತಹ ನೆನಪಿನ ಸುರುಳಿ ನಮ್ಮೊಂದಿಗಿರಲು ಕಾರಣ ಈ ಕ್ಯಾಸೆಟ್‌ ಅನ್ನು ಅನ್ವೇಷಿಸಿದ ಲಾವೊ ಒಟೆನ್ಸ್. ಆದರೆ ಅವರೂ ಕೂಡ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ. ಹೌದು, ಧ್ವನಿ ಸುರುಳಿಯ ಕ್ಯಾಸೆಟ್ (ಟೇಪ್) ಕಂಡುಹಿಡಿದಿದ್ದ ಲಾವೊ ಒಟೆನ್ಸ್ ಇತ್ತೀಚೆಗೆ ನಿಧನರಾಗಿದ್ದಾರೆ. ನೆದರ್ಲೆಂಡ್ ಮೂಲದವರಾದ 94 ವರ್ಷದ ಲಾವೊ ಒಟೆನ್ಸ್ ನಿಧನರಾಗಿದ್ದಾರೆ ಎಂದು ಫಿಲಿಪ್ಸ್‌ ಕಂಪನಿ ದೃಢಪಡಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಟಿಎಂಸಿ ಸೇರ್ಪಡೆ!

21, ಜೂನ್ 1926 ರಲ್ಲಿ ಜನಿಸಿದ ಲಾವೊ ಒಟೆನ್ಸ್ ಡೆಲ್ಫ್‌ನ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದು, 1952ರಲ್ಲಿ ಫಿಲಿಪ್ಸ್‌ ಕಂಪನಿ ಸೇರಿದ್ದರು. ಕಂಪನಿಯ ಉತ್ಪನ್ನಗಳ ಅಭಿವೃದ್ಧಿ ವಿಭಾಗದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಆಗ ಟೇಪ್‌ ರೆಕಾರ್ಡರ್‌ಗೆ ಪರ್ಯಾಯವನ್ನು ಅನ್ವೇಷಿಸಲು ಹೆಚ್ಚಿನ ಒತ್ತು ನೀಡಿದ್ದರು. ಕಾಂಪ್ಯಾಕ್ಟ್‌ ಡಿಸ್ಕ್‌ ಅಭಿವೃದ್ಧಿಪಡಿಸಲು ಒಟೆನ್ಸ್‌ ಅವರು ಫಿಲಿಪ್ಸ್‌ ಕಂಪನಿಗೆ ನೆರವಾಗಿದ್ದರು. ಸಿಡಿ, ಡಿವಿಡಿ ಕ್ಯಾಸೆಟ್‌ಗಳ ಅನ್ವೇಷಣೆಗೂ ಲಾವೊ ಒಟೆನ್ಸ್ ಅವರ ಕೊಡುಗೆಯಿದೆ.

ಧ್ವನಿ ಸಂಗ್ರಹಣ ಟೇಪ್‌ ಮತ್ತು ಪ್ಲೇಯರ್‌ಗಳು ಸುಲಭವಾಗಿ ಬಳಸುವಂತೆ ಇರಬೇಕು ಮತ್ತು ದೊರೆಯಬೇಕು ಎಂಬುದು ಇವರ ಗುರಿಯಾಗಿತ್ತು.

ರೇಡಿಯೋ ನಂತರ ಮನುಷ್ಯನಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಟೇಪ್‌ ರೇಕಾರ್ಡರ್‌ಗಳು. 20ನೇ ಶತಮಾನದ ಅಂತ್ಯದವರೆಗೂ ಜಗತ್ತಿನಾದ್ಯಂತ ಬಹುಪಾಲು ಸಂಗೀತ, ಸಿನಿಮಾಗಳನ್ನು ಧ್ವನಿಸುರುಳಿ ಮತ್ತು ಟೇಪ್‌ ರೆಕಾರ್ಡರ್‌ಗಳಲ್ಲಿಯೇ ಕೇಳಲಾಗುತ್ತಿತ್ತು. ಅದು ಅಂದಿನವರಿಗೆ ಬಹುಪ್ರಿಯವಾದ ಮಾಧ್ಯಮವಾಗಿತ್ತು. ಇಂದಿಗೂ ಕೂಡ ಹಲವರು ಕ್ಯಾಸೆಟ್‌ಗಳನ್ನು ಭಾವನಾತ್ಮವಾಗಿ ನೋಡುತ್ತಾ, ಅವುಗಳನ್ನು ಕಾಪಿಟ್ಟುಕೊಂಡಿದ್ದಾರೆ.


ಇದನ್ನೂ ಓದಿ: ವಿಧಾನಸಭೆಯಲ್ಲೇ ಸ್ಯಾನಿಟೈಸರ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...