Homeಅಂತರಾಷ್ಟ್ರೀಯಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಲಾವೊ ಒಟೆನ್ಸ್ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ

- Advertisement -
- Advertisement -

ಕ್ಯಾಸೆಟ್‌ಗಳು ಯಾರಿಗೆ ಗೊತ್ತಿಲ್ಲ. 90ರ ದಶಕದ ಪೀಳಿಗೆಯವರೆಗಿನ ಯಾರನ್ನು ಕೇಳಿದರೂ ಅವರ ಜೀವನದ ಒಂದಲ್ಲಾ ಒಂದು ಘಳಿಗೆಯಲ್ಲಿ ಕ್ಯಾಸೆಟ್‌ನೊಂದಿಗಿನ ನೆನಪಿನ ಸುರುಳಿಗಳು ಬಿಚ್ಚಿಕೊಳ್ಳುತ್ತವೆ; ಧ್ವನಿ ಸುರುಳಿಯ ಕ್ಯಾಸೆಟ್‌ನಂತೆಯೇ. ಟೇಪ್‌ ರೆಕಾರ್ಡರ್ ಒಳಗೆ ಈ ಕ್ಯಾಸೆಟ್ ಟೇಪ್ ಸಿಕ್ಕಿಕೊಂಡರೆ, ಅದನ್ನು ಹೊರತೆಗೆದು ಮತ್ತೆ ಸುತ್ತಿ ಕ್ಯಾಸೆಟ್‌ ಒಳಗೆ ಸೇರಿಸುವುದು ನಿಜಕ್ಕೂ ಧ್ಯಾನಸ್ಥ ಕೆಲಸವಾಗಿರುತ್ತಿತ್ತು. ಇನ್ನು ಅದು ತುಂಡಾಗಿಬಿಟ್ಟರಂತೂ, ಅದಕ್ಕೆ ಕಳ್ಳಿಹಾಲು ಹಾಕಿ ಅಂಟಿಸಿ, ನೆರಳಿನಲ್ಲಿಯೇ ಒಣಗಿಸಿ ಸುತ್ತುವುದು ಯಾವ ಕರಕುಶಲ ಕೆಲಸಕ್ಕೂ ಕಡಿಮೆಯಿಲ್ಲ. ಇನ್ನು ನಮ್ಮ ಅಚ್ಚುಮೆಚ್ಚಿನ ಚಲನಚಿತ್ರ ಗೀತೆಗಳು, ದೇವರ ಹಾಡುಗಳು, ಜನಪದ ಕಥನಗಳು, ಸಿನಿಮಾಗಳನ್ನು ಕ್ಯಾಸೆಟ್‌ಗಳಲ್ಲಿಯೇ ಕೇಳುತ್ತಿದ್ದೆವು. 1960ರ ದಶಕದಲ್ಲಿ ಅನ್ವೇಷಿಸಲಾದ ಈ ಕ್ಯಾಸೆಟ್ ಬಹುಪಾಲು ಜನರಿಗೆ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದುದರಲ್ಲಿ ಸಂದೇಹವಿಲ್ಲ.

ಇಂತಹ ನೆನಪಿನ ಸುರುಳಿ ನಮ್ಮೊಂದಿಗಿರಲು ಕಾರಣ ಈ ಕ್ಯಾಸೆಟ್‌ ಅನ್ನು ಅನ್ವೇಷಿಸಿದ ಲಾವೊ ಒಟೆನ್ಸ್. ಆದರೆ ಅವರೂ ಕೂಡ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ. ಹೌದು, ಧ್ವನಿ ಸುರುಳಿಯ ಕ್ಯಾಸೆಟ್ (ಟೇಪ್) ಕಂಡುಹಿಡಿದಿದ್ದ ಲಾವೊ ಒಟೆನ್ಸ್ ಇತ್ತೀಚೆಗೆ ನಿಧನರಾಗಿದ್ದಾರೆ. ನೆದರ್ಲೆಂಡ್ ಮೂಲದವರಾದ 94 ವರ್ಷದ ಲಾವೊ ಒಟೆನ್ಸ್ ನಿಧನರಾಗಿದ್ದಾರೆ ಎಂದು ಫಿಲಿಪ್ಸ್‌ ಕಂಪನಿ ದೃಢಪಡಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಟಿಎಂಸಿ ಸೇರ್ಪಡೆ!

21, ಜೂನ್ 1926 ರಲ್ಲಿ ಜನಿಸಿದ ಲಾವೊ ಒಟೆನ್ಸ್ ಡೆಲ್ಫ್‌ನ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದು, 1952ರಲ್ಲಿ ಫಿಲಿಪ್ಸ್‌ ಕಂಪನಿ ಸೇರಿದ್ದರು. ಕಂಪನಿಯ ಉತ್ಪನ್ನಗಳ ಅಭಿವೃದ್ಧಿ ವಿಭಾಗದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಆಗ ಟೇಪ್‌ ರೆಕಾರ್ಡರ್‌ಗೆ ಪರ್ಯಾಯವನ್ನು ಅನ್ವೇಷಿಸಲು ಹೆಚ್ಚಿನ ಒತ್ತು ನೀಡಿದ್ದರು. ಕಾಂಪ್ಯಾಕ್ಟ್‌ ಡಿಸ್ಕ್‌ ಅಭಿವೃದ್ಧಿಪಡಿಸಲು ಒಟೆನ್ಸ್‌ ಅವರು ಫಿಲಿಪ್ಸ್‌ ಕಂಪನಿಗೆ ನೆರವಾಗಿದ್ದರು. ಸಿಡಿ, ಡಿವಿಡಿ ಕ್ಯಾಸೆಟ್‌ಗಳ ಅನ್ವೇಷಣೆಗೂ ಲಾವೊ ಒಟೆನ್ಸ್ ಅವರ ಕೊಡುಗೆಯಿದೆ.

ಧ್ವನಿ ಸಂಗ್ರಹಣ ಟೇಪ್‌ ಮತ್ತು ಪ್ಲೇಯರ್‌ಗಳು ಸುಲಭವಾಗಿ ಬಳಸುವಂತೆ ಇರಬೇಕು ಮತ್ತು ದೊರೆಯಬೇಕು ಎಂಬುದು ಇವರ ಗುರಿಯಾಗಿತ್ತು.

ರೇಡಿಯೋ ನಂತರ ಮನುಷ್ಯನಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಟೇಪ್‌ ರೇಕಾರ್ಡರ್‌ಗಳು. 20ನೇ ಶತಮಾನದ ಅಂತ್ಯದವರೆಗೂ ಜಗತ್ತಿನಾದ್ಯಂತ ಬಹುಪಾಲು ಸಂಗೀತ, ಸಿನಿಮಾಗಳನ್ನು ಧ್ವನಿಸುರುಳಿ ಮತ್ತು ಟೇಪ್‌ ರೆಕಾರ್ಡರ್‌ಗಳಲ್ಲಿಯೇ ಕೇಳಲಾಗುತ್ತಿತ್ತು. ಅದು ಅಂದಿನವರಿಗೆ ಬಹುಪ್ರಿಯವಾದ ಮಾಧ್ಯಮವಾಗಿತ್ತು. ಇಂದಿಗೂ ಕೂಡ ಹಲವರು ಕ್ಯಾಸೆಟ್‌ಗಳನ್ನು ಭಾವನಾತ್ಮವಾಗಿ ನೋಡುತ್ತಾ, ಅವುಗಳನ್ನು ಕಾಪಿಟ್ಟುಕೊಂಡಿದ್ದಾರೆ.


ಇದನ್ನೂ ಓದಿ: ವಿಧಾನಸಭೆಯಲ್ಲೇ ಸ್ಯಾನಿಟೈಸರ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...