Homeಅಂತರಾಷ್ಟ್ರೀಯಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಲಾವೊ ಒಟೆನ್ಸ್ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ

- Advertisement -
- Advertisement -

ಕ್ಯಾಸೆಟ್‌ಗಳು ಯಾರಿಗೆ ಗೊತ್ತಿಲ್ಲ. 90ರ ದಶಕದ ಪೀಳಿಗೆಯವರೆಗಿನ ಯಾರನ್ನು ಕೇಳಿದರೂ ಅವರ ಜೀವನದ ಒಂದಲ್ಲಾ ಒಂದು ಘಳಿಗೆಯಲ್ಲಿ ಕ್ಯಾಸೆಟ್‌ನೊಂದಿಗಿನ ನೆನಪಿನ ಸುರುಳಿಗಳು ಬಿಚ್ಚಿಕೊಳ್ಳುತ್ತವೆ; ಧ್ವನಿ ಸುರುಳಿಯ ಕ್ಯಾಸೆಟ್‌ನಂತೆಯೇ. ಟೇಪ್‌ ರೆಕಾರ್ಡರ್ ಒಳಗೆ ಈ ಕ್ಯಾಸೆಟ್ ಟೇಪ್ ಸಿಕ್ಕಿಕೊಂಡರೆ, ಅದನ್ನು ಹೊರತೆಗೆದು ಮತ್ತೆ ಸುತ್ತಿ ಕ್ಯಾಸೆಟ್‌ ಒಳಗೆ ಸೇರಿಸುವುದು ನಿಜಕ್ಕೂ ಧ್ಯಾನಸ್ಥ ಕೆಲಸವಾಗಿರುತ್ತಿತ್ತು. ಇನ್ನು ಅದು ತುಂಡಾಗಿಬಿಟ್ಟರಂತೂ, ಅದಕ್ಕೆ ಕಳ್ಳಿಹಾಲು ಹಾಕಿ ಅಂಟಿಸಿ, ನೆರಳಿನಲ್ಲಿಯೇ ಒಣಗಿಸಿ ಸುತ್ತುವುದು ಯಾವ ಕರಕುಶಲ ಕೆಲಸಕ್ಕೂ ಕಡಿಮೆಯಿಲ್ಲ. ಇನ್ನು ನಮ್ಮ ಅಚ್ಚುಮೆಚ್ಚಿನ ಚಲನಚಿತ್ರ ಗೀತೆಗಳು, ದೇವರ ಹಾಡುಗಳು, ಜನಪದ ಕಥನಗಳು, ಸಿನಿಮಾಗಳನ್ನು ಕ್ಯಾಸೆಟ್‌ಗಳಲ್ಲಿಯೇ ಕೇಳುತ್ತಿದ್ದೆವು. 1960ರ ದಶಕದಲ್ಲಿ ಅನ್ವೇಷಿಸಲಾದ ಈ ಕ್ಯಾಸೆಟ್ ಬಹುಪಾಲು ಜನರಿಗೆ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದುದರಲ್ಲಿ ಸಂದೇಹವಿಲ್ಲ.

ಇಂತಹ ನೆನಪಿನ ಸುರುಳಿ ನಮ್ಮೊಂದಿಗಿರಲು ಕಾರಣ ಈ ಕ್ಯಾಸೆಟ್‌ ಅನ್ನು ಅನ್ವೇಷಿಸಿದ ಲಾವೊ ಒಟೆನ್ಸ್. ಆದರೆ ಅವರೂ ಕೂಡ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ. ಹೌದು, ಧ್ವನಿ ಸುರುಳಿಯ ಕ್ಯಾಸೆಟ್ (ಟೇಪ್) ಕಂಡುಹಿಡಿದಿದ್ದ ಲಾವೊ ಒಟೆನ್ಸ್ ಇತ್ತೀಚೆಗೆ ನಿಧನರಾಗಿದ್ದಾರೆ. ನೆದರ್ಲೆಂಡ್ ಮೂಲದವರಾದ 94 ವರ್ಷದ ಲಾವೊ ಒಟೆನ್ಸ್ ನಿಧನರಾಗಿದ್ದಾರೆ ಎಂದು ಫಿಲಿಪ್ಸ್‌ ಕಂಪನಿ ದೃಢಪಡಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಟಿಎಂಸಿ ಸೇರ್ಪಡೆ!

21, ಜೂನ್ 1926 ರಲ್ಲಿ ಜನಿಸಿದ ಲಾವೊ ಒಟೆನ್ಸ್ ಡೆಲ್ಫ್‌ನ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದು, 1952ರಲ್ಲಿ ಫಿಲಿಪ್ಸ್‌ ಕಂಪನಿ ಸೇರಿದ್ದರು. ಕಂಪನಿಯ ಉತ್ಪನ್ನಗಳ ಅಭಿವೃದ್ಧಿ ವಿಭಾಗದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಆಗ ಟೇಪ್‌ ರೆಕಾರ್ಡರ್‌ಗೆ ಪರ್ಯಾಯವನ್ನು ಅನ್ವೇಷಿಸಲು ಹೆಚ್ಚಿನ ಒತ್ತು ನೀಡಿದ್ದರು. ಕಾಂಪ್ಯಾಕ್ಟ್‌ ಡಿಸ್ಕ್‌ ಅಭಿವೃದ್ಧಿಪಡಿಸಲು ಒಟೆನ್ಸ್‌ ಅವರು ಫಿಲಿಪ್ಸ್‌ ಕಂಪನಿಗೆ ನೆರವಾಗಿದ್ದರು. ಸಿಡಿ, ಡಿವಿಡಿ ಕ್ಯಾಸೆಟ್‌ಗಳ ಅನ್ವೇಷಣೆಗೂ ಲಾವೊ ಒಟೆನ್ಸ್ ಅವರ ಕೊಡುಗೆಯಿದೆ.

ಧ್ವನಿ ಸಂಗ್ರಹಣ ಟೇಪ್‌ ಮತ್ತು ಪ್ಲೇಯರ್‌ಗಳು ಸುಲಭವಾಗಿ ಬಳಸುವಂತೆ ಇರಬೇಕು ಮತ್ತು ದೊರೆಯಬೇಕು ಎಂಬುದು ಇವರ ಗುರಿಯಾಗಿತ್ತು.

ರೇಡಿಯೋ ನಂತರ ಮನುಷ್ಯನಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಟೇಪ್‌ ರೇಕಾರ್ಡರ್‌ಗಳು. 20ನೇ ಶತಮಾನದ ಅಂತ್ಯದವರೆಗೂ ಜಗತ್ತಿನಾದ್ಯಂತ ಬಹುಪಾಲು ಸಂಗೀತ, ಸಿನಿಮಾಗಳನ್ನು ಧ್ವನಿಸುರುಳಿ ಮತ್ತು ಟೇಪ್‌ ರೆಕಾರ್ಡರ್‌ಗಳಲ್ಲಿಯೇ ಕೇಳಲಾಗುತ್ತಿತ್ತು. ಅದು ಅಂದಿನವರಿಗೆ ಬಹುಪ್ರಿಯವಾದ ಮಾಧ್ಯಮವಾಗಿತ್ತು. ಇಂದಿಗೂ ಕೂಡ ಹಲವರು ಕ್ಯಾಸೆಟ್‌ಗಳನ್ನು ಭಾವನಾತ್ಮವಾಗಿ ನೋಡುತ್ತಾ, ಅವುಗಳನ್ನು ಕಾಪಿಟ್ಟುಕೊಂಡಿದ್ದಾರೆ.


ಇದನ್ನೂ ಓದಿ: ವಿಧಾನಸಭೆಯಲ್ಲೇ ಸ್ಯಾನಿಟೈಸರ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...