Homeಅಂತರಾಷ್ಟ್ರೀಯಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಲಾವೊ ಒಟೆನ್ಸ್ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ

- Advertisement -
- Advertisement -

ಕ್ಯಾಸೆಟ್‌ಗಳು ಯಾರಿಗೆ ಗೊತ್ತಿಲ್ಲ. 90ರ ದಶಕದ ಪೀಳಿಗೆಯವರೆಗಿನ ಯಾರನ್ನು ಕೇಳಿದರೂ ಅವರ ಜೀವನದ ಒಂದಲ್ಲಾ ಒಂದು ಘಳಿಗೆಯಲ್ಲಿ ಕ್ಯಾಸೆಟ್‌ನೊಂದಿಗಿನ ನೆನಪಿನ ಸುರುಳಿಗಳು ಬಿಚ್ಚಿಕೊಳ್ಳುತ್ತವೆ; ಧ್ವನಿ ಸುರುಳಿಯ ಕ್ಯಾಸೆಟ್‌ನಂತೆಯೇ. ಟೇಪ್‌ ರೆಕಾರ್ಡರ್ ಒಳಗೆ ಈ ಕ್ಯಾಸೆಟ್ ಟೇಪ್ ಸಿಕ್ಕಿಕೊಂಡರೆ, ಅದನ್ನು ಹೊರತೆಗೆದು ಮತ್ತೆ ಸುತ್ತಿ ಕ್ಯಾಸೆಟ್‌ ಒಳಗೆ ಸೇರಿಸುವುದು ನಿಜಕ್ಕೂ ಧ್ಯಾನಸ್ಥ ಕೆಲಸವಾಗಿರುತ್ತಿತ್ತು. ಇನ್ನು ಅದು ತುಂಡಾಗಿಬಿಟ್ಟರಂತೂ, ಅದಕ್ಕೆ ಕಳ್ಳಿಹಾಲು ಹಾಕಿ ಅಂಟಿಸಿ, ನೆರಳಿನಲ್ಲಿಯೇ ಒಣಗಿಸಿ ಸುತ್ತುವುದು ಯಾವ ಕರಕುಶಲ ಕೆಲಸಕ್ಕೂ ಕಡಿಮೆಯಿಲ್ಲ. ಇನ್ನು ನಮ್ಮ ಅಚ್ಚುಮೆಚ್ಚಿನ ಚಲನಚಿತ್ರ ಗೀತೆಗಳು, ದೇವರ ಹಾಡುಗಳು, ಜನಪದ ಕಥನಗಳು, ಸಿನಿಮಾಗಳನ್ನು ಕ್ಯಾಸೆಟ್‌ಗಳಲ್ಲಿಯೇ ಕೇಳುತ್ತಿದ್ದೆವು. 1960ರ ದಶಕದಲ್ಲಿ ಅನ್ವೇಷಿಸಲಾದ ಈ ಕ್ಯಾಸೆಟ್ ಬಹುಪಾಲು ಜನರಿಗೆ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದುದರಲ್ಲಿ ಸಂದೇಹವಿಲ್ಲ.

ಇಂತಹ ನೆನಪಿನ ಸುರುಳಿ ನಮ್ಮೊಂದಿಗಿರಲು ಕಾರಣ ಈ ಕ್ಯಾಸೆಟ್‌ ಅನ್ನು ಅನ್ವೇಷಿಸಿದ ಲಾವೊ ಒಟೆನ್ಸ್. ಆದರೆ ಅವರೂ ಕೂಡ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ. ಹೌದು, ಧ್ವನಿ ಸುರುಳಿಯ ಕ್ಯಾಸೆಟ್ (ಟೇಪ್) ಕಂಡುಹಿಡಿದಿದ್ದ ಲಾವೊ ಒಟೆನ್ಸ್ ಇತ್ತೀಚೆಗೆ ನಿಧನರಾಗಿದ್ದಾರೆ. ನೆದರ್ಲೆಂಡ್ ಮೂಲದವರಾದ 94 ವರ್ಷದ ಲಾವೊ ಒಟೆನ್ಸ್ ನಿಧನರಾಗಿದ್ದಾರೆ ಎಂದು ಫಿಲಿಪ್ಸ್‌ ಕಂಪನಿ ದೃಢಪಡಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಟಿಎಂಸಿ ಸೇರ್ಪಡೆ!

21, ಜೂನ್ 1926 ರಲ್ಲಿ ಜನಿಸಿದ ಲಾವೊ ಒಟೆನ್ಸ್ ಡೆಲ್ಫ್‌ನ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದು, 1952ರಲ್ಲಿ ಫಿಲಿಪ್ಸ್‌ ಕಂಪನಿ ಸೇರಿದ್ದರು. ಕಂಪನಿಯ ಉತ್ಪನ್ನಗಳ ಅಭಿವೃದ್ಧಿ ವಿಭಾಗದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಆಗ ಟೇಪ್‌ ರೆಕಾರ್ಡರ್‌ಗೆ ಪರ್ಯಾಯವನ್ನು ಅನ್ವೇಷಿಸಲು ಹೆಚ್ಚಿನ ಒತ್ತು ನೀಡಿದ್ದರು. ಕಾಂಪ್ಯಾಕ್ಟ್‌ ಡಿಸ್ಕ್‌ ಅಭಿವೃದ್ಧಿಪಡಿಸಲು ಒಟೆನ್ಸ್‌ ಅವರು ಫಿಲಿಪ್ಸ್‌ ಕಂಪನಿಗೆ ನೆರವಾಗಿದ್ದರು. ಸಿಡಿ, ಡಿವಿಡಿ ಕ್ಯಾಸೆಟ್‌ಗಳ ಅನ್ವೇಷಣೆಗೂ ಲಾವೊ ಒಟೆನ್ಸ್ ಅವರ ಕೊಡುಗೆಯಿದೆ.

ಧ್ವನಿ ಸಂಗ್ರಹಣ ಟೇಪ್‌ ಮತ್ತು ಪ್ಲೇಯರ್‌ಗಳು ಸುಲಭವಾಗಿ ಬಳಸುವಂತೆ ಇರಬೇಕು ಮತ್ತು ದೊರೆಯಬೇಕು ಎಂಬುದು ಇವರ ಗುರಿಯಾಗಿತ್ತು.

ರೇಡಿಯೋ ನಂತರ ಮನುಷ್ಯನಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಟೇಪ್‌ ರೇಕಾರ್ಡರ್‌ಗಳು. 20ನೇ ಶತಮಾನದ ಅಂತ್ಯದವರೆಗೂ ಜಗತ್ತಿನಾದ್ಯಂತ ಬಹುಪಾಲು ಸಂಗೀತ, ಸಿನಿಮಾಗಳನ್ನು ಧ್ವನಿಸುರುಳಿ ಮತ್ತು ಟೇಪ್‌ ರೆಕಾರ್ಡರ್‌ಗಳಲ್ಲಿಯೇ ಕೇಳಲಾಗುತ್ತಿತ್ತು. ಅದು ಅಂದಿನವರಿಗೆ ಬಹುಪ್ರಿಯವಾದ ಮಾಧ್ಯಮವಾಗಿತ್ತು. ಇಂದಿಗೂ ಕೂಡ ಹಲವರು ಕ್ಯಾಸೆಟ್‌ಗಳನ್ನು ಭಾವನಾತ್ಮವಾಗಿ ನೋಡುತ್ತಾ, ಅವುಗಳನ್ನು ಕಾಪಿಟ್ಟುಕೊಂಡಿದ್ದಾರೆ.


ಇದನ್ನೂ ಓದಿ: ವಿಧಾನಸಭೆಯಲ್ಲೇ ಸ್ಯಾನಿಟೈಸರ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...