Homeಅಂತರಾಷ್ಟ್ರೀಯಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಲಾವೊ ಒಟೆನ್ಸ್ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ

- Advertisement -
- Advertisement -

ಕ್ಯಾಸೆಟ್‌ಗಳು ಯಾರಿಗೆ ಗೊತ್ತಿಲ್ಲ. 90ರ ದಶಕದ ಪೀಳಿಗೆಯವರೆಗಿನ ಯಾರನ್ನು ಕೇಳಿದರೂ ಅವರ ಜೀವನದ ಒಂದಲ್ಲಾ ಒಂದು ಘಳಿಗೆಯಲ್ಲಿ ಕ್ಯಾಸೆಟ್‌ನೊಂದಿಗಿನ ನೆನಪಿನ ಸುರುಳಿಗಳು ಬಿಚ್ಚಿಕೊಳ್ಳುತ್ತವೆ; ಧ್ವನಿ ಸುರುಳಿಯ ಕ್ಯಾಸೆಟ್‌ನಂತೆಯೇ. ಟೇಪ್‌ ರೆಕಾರ್ಡರ್ ಒಳಗೆ ಈ ಕ್ಯಾಸೆಟ್ ಟೇಪ್ ಸಿಕ್ಕಿಕೊಂಡರೆ, ಅದನ್ನು ಹೊರತೆಗೆದು ಮತ್ತೆ ಸುತ್ತಿ ಕ್ಯಾಸೆಟ್‌ ಒಳಗೆ ಸೇರಿಸುವುದು ನಿಜಕ್ಕೂ ಧ್ಯಾನಸ್ಥ ಕೆಲಸವಾಗಿರುತ್ತಿತ್ತು. ಇನ್ನು ಅದು ತುಂಡಾಗಿಬಿಟ್ಟರಂತೂ, ಅದಕ್ಕೆ ಕಳ್ಳಿಹಾಲು ಹಾಕಿ ಅಂಟಿಸಿ, ನೆರಳಿನಲ್ಲಿಯೇ ಒಣಗಿಸಿ ಸುತ್ತುವುದು ಯಾವ ಕರಕುಶಲ ಕೆಲಸಕ್ಕೂ ಕಡಿಮೆಯಿಲ್ಲ. ಇನ್ನು ನಮ್ಮ ಅಚ್ಚುಮೆಚ್ಚಿನ ಚಲನಚಿತ್ರ ಗೀತೆಗಳು, ದೇವರ ಹಾಡುಗಳು, ಜನಪದ ಕಥನಗಳು, ಸಿನಿಮಾಗಳನ್ನು ಕ್ಯಾಸೆಟ್‌ಗಳಲ್ಲಿಯೇ ಕೇಳುತ್ತಿದ್ದೆವು. 1960ರ ದಶಕದಲ್ಲಿ ಅನ್ವೇಷಿಸಲಾದ ಈ ಕ್ಯಾಸೆಟ್ ಬಹುಪಾಲು ಜನರಿಗೆ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದುದರಲ್ಲಿ ಸಂದೇಹವಿಲ್ಲ.

ಇಂತಹ ನೆನಪಿನ ಸುರುಳಿ ನಮ್ಮೊಂದಿಗಿರಲು ಕಾರಣ ಈ ಕ್ಯಾಸೆಟ್‌ ಅನ್ನು ಅನ್ವೇಷಿಸಿದ ಲಾವೊ ಒಟೆನ್ಸ್. ಆದರೆ ಅವರೂ ಕೂಡ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ. ಹೌದು, ಧ್ವನಿ ಸುರುಳಿಯ ಕ್ಯಾಸೆಟ್ (ಟೇಪ್) ಕಂಡುಹಿಡಿದಿದ್ದ ಲಾವೊ ಒಟೆನ್ಸ್ ಇತ್ತೀಚೆಗೆ ನಿಧನರಾಗಿದ್ದಾರೆ. ನೆದರ್ಲೆಂಡ್ ಮೂಲದವರಾದ 94 ವರ್ಷದ ಲಾವೊ ಒಟೆನ್ಸ್ ನಿಧನರಾಗಿದ್ದಾರೆ ಎಂದು ಫಿಲಿಪ್ಸ್‌ ಕಂಪನಿ ದೃಢಪಡಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಟಿಎಂಸಿ ಸೇರ್ಪಡೆ!

21, ಜೂನ್ 1926 ರಲ್ಲಿ ಜನಿಸಿದ ಲಾವೊ ಒಟೆನ್ಸ್ ಡೆಲ್ಫ್‌ನ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದು, 1952ರಲ್ಲಿ ಫಿಲಿಪ್ಸ್‌ ಕಂಪನಿ ಸೇರಿದ್ದರು. ಕಂಪನಿಯ ಉತ್ಪನ್ನಗಳ ಅಭಿವೃದ್ಧಿ ವಿಭಾಗದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಆಗ ಟೇಪ್‌ ರೆಕಾರ್ಡರ್‌ಗೆ ಪರ್ಯಾಯವನ್ನು ಅನ್ವೇಷಿಸಲು ಹೆಚ್ಚಿನ ಒತ್ತು ನೀಡಿದ್ದರು. ಕಾಂಪ್ಯಾಕ್ಟ್‌ ಡಿಸ್ಕ್‌ ಅಭಿವೃದ್ಧಿಪಡಿಸಲು ಒಟೆನ್ಸ್‌ ಅವರು ಫಿಲಿಪ್ಸ್‌ ಕಂಪನಿಗೆ ನೆರವಾಗಿದ್ದರು. ಸಿಡಿ, ಡಿವಿಡಿ ಕ್ಯಾಸೆಟ್‌ಗಳ ಅನ್ವೇಷಣೆಗೂ ಲಾವೊ ಒಟೆನ್ಸ್ ಅವರ ಕೊಡುಗೆಯಿದೆ.

ಧ್ವನಿ ಸಂಗ್ರಹಣ ಟೇಪ್‌ ಮತ್ತು ಪ್ಲೇಯರ್‌ಗಳು ಸುಲಭವಾಗಿ ಬಳಸುವಂತೆ ಇರಬೇಕು ಮತ್ತು ದೊರೆಯಬೇಕು ಎಂಬುದು ಇವರ ಗುರಿಯಾಗಿತ್ತು.

ರೇಡಿಯೋ ನಂತರ ಮನುಷ್ಯನಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಟೇಪ್‌ ರೇಕಾರ್ಡರ್‌ಗಳು. 20ನೇ ಶತಮಾನದ ಅಂತ್ಯದವರೆಗೂ ಜಗತ್ತಿನಾದ್ಯಂತ ಬಹುಪಾಲು ಸಂಗೀತ, ಸಿನಿಮಾಗಳನ್ನು ಧ್ವನಿಸುರುಳಿ ಮತ್ತು ಟೇಪ್‌ ರೆಕಾರ್ಡರ್‌ಗಳಲ್ಲಿಯೇ ಕೇಳಲಾಗುತ್ತಿತ್ತು. ಅದು ಅಂದಿನವರಿಗೆ ಬಹುಪ್ರಿಯವಾದ ಮಾಧ್ಯಮವಾಗಿತ್ತು. ಇಂದಿಗೂ ಕೂಡ ಹಲವರು ಕ್ಯಾಸೆಟ್‌ಗಳನ್ನು ಭಾವನಾತ್ಮವಾಗಿ ನೋಡುತ್ತಾ, ಅವುಗಳನ್ನು ಕಾಪಿಟ್ಟುಕೊಂಡಿದ್ದಾರೆ.


ಇದನ್ನೂ ಓದಿ: ವಿಧಾನಸಭೆಯಲ್ಲೇ ಸ್ಯಾನಿಟೈಸರ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...