Homeಕರ್ನಾಟಕಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

- Advertisement -
- Advertisement -

ಪದೇ ಪದೇ ನಾಲಿಗೆ ಹರಿಬಿಟ್ಟು ಅಶಾಂತಿ ಉಂಟು ಮಾಡುವ ಹಿಂದುತ್ವ ಮುಖಂಡ, ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್‌ ಕೆರೆಹಳ್ಳಿ ಬಂಧನವಾಗಿದೆ. ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ನಿಂದಿಸಿದ್ದ ಪ್ರಕರಣದಲ್ಲಿ ಇದೀಗ ಪುನೀತ್ ಜೈಲು ಸೇರಿದ್ದಾನೆ.

ಪುನೀತ್ ಕೆರೆಹಳ್ಳಿ ಈಗಾಗಲೇ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. 2013ರಲ್ಲಿ ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿ ಬಿದ್ದಿದ್ದ. ಗೋ ರಕ್ಷಣೆ ಹೆಸರಲ್ಲಿ ಇದ್ರೀಸ್ ಪಾಷಾ ಎಂಬ ವ್ಯಕ್ತಿಯನ್ನು ಕೊಂದ ಆರೋಪವೂ ಪುನೀತ್‌ ಕೆರೆಹಳ್ಳಿ ಮತ್ತು ಆತನ ಗ್ಯಾಂಗ್ ಮೇಲೆ ಇದೆ. ವಿಧಾನಸೌಧಕ್ಕೆ ಕಲ್ಲು ಹೊಡೆಯುವ ಮತ್ತು ಬಸ್ಸಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಪ್ರಕರಣ ದಾಖಲಾಗಿತ್ತು. ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದನು. ಈ ವಿಚಾರವಾಗಿಯೂ ದೂರು ದಾಖಲಾಗಿದೆ.

ಇಂತಹ ಅನೇಕ ಗಂಭೀರ ಪ್ರಕರಣಗಳಲ್ಲಿ ಸಿಲುಕಿರುವ ಹಿಂದುತ್ವ ಮುಖಂಡ ಪುನೀತ್ ಕೆರೆಹಳ್ಳಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲವಾಗಿ ಬರೆಯುತ್ತಾ ಕನ್ನಡಪರ ಹೋರಾಟಗಾರ, ದಲಿತ ಮುಖಂಡ ಹರೀಶ್ ಭೈರಪ್ಪ ಅವರ ಕುರಿತು ಕೀಳುಮಟ್ಟದ ಭಾಷೆಯಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದರು. ಈ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಶುಕ್ರವಾರ ಪುನೀತ್ ಬಂಧನವಾಗಿದೆ.

ದೂರಿನಲ್ಲಿ ಏನಿದೆ?

”ನಾನು ದಲಿತನಾಗಿರುವ ಕಾರಣ ಪುನೀತ್ ಕೆರೆಹಳ್ಳಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ” ಎಂದು ಭೈರಪ್ಪ ಹರೀಶ್ ಕುಮಾರ್ ಅವರು ದೂರಿನಲ್ಲಿ ಹೇಳಿದ್ದಾರೆ.

”ನಾನೊಬ್ಬ ಕನ್ನಡಪರ ಹೋರಾಟಗಾರನಾಗಿದ್ದು ಇತ್ತೀಚೆಗೆ ಇದೀಸ್ ಪಾಷಾ ಕೊಲೆ ಆರೋಪದಲ್ಲಿ ಜೈಲು ಶಿಕ್ಷೆಯಿಂದ ಬಿಡುಗಡೆಗೊಂಡ ಬಳಿಕವೂ ಸಮಾಜದ ಸ್ವಾಸ್ಥ್ಯ ಕದಡಲು ಯತ್ನಿಸುತ್ತಿದ್ದ ಪುನೀತ್ ಕೆರೆಹಳ್ಳಿಯ ಬಗ್ಗೆ ಜಾಗೃತರಾಗಿರುವಂತೆ ಸಾಮಾಜಿಕ ಕಳಕಳಿಯಿಂದ ಮಾಧ್ಯಮ ವರದಿಯನ್ನು ಫೇಸ್ ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ದಿನಾಂಕ 17-10-2023 ರಂದು ಪುನೀತ್ ಕೆರೆಹಳ್ಳಿ, ನನ್ನ ಮತ್ತು ನನ್ನ ಪತ್ನಿ ಮಕ್ಕಳ ವಿರುದ್ಧ ನಿಂದನಾತ್ಮಕ ಮಾತುಗಳನ್ನಾಡಿದ್ದಾನೆ. ನನ್ನ ಪತ್ನಿ ,ಮಕ್ಕಳು ತಲೆ ಎತ್ತಿ ನಡೆಯಂದಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪುನೀತ್ ಬಂಧನದ ಬಳಿಕ ಮಾತನಾಡಿದ ಹರೀಶ್ ಭೈರಪ್ಪ ಅವರು, ”ಕೊನೆಗೂ ನನ್ನ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಎನ್ನುವ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ. ನನ್ನ ಹಾಗೂ ನನ್ನ ಕುಟುಂಬದ ಮೇಲೆ ವೈಯಕ್ತಿಕ ದಾಳಿಗೆ ಇಳಿದು ತನ್ನ ಹೀನ ಮನಸ್ಥಿತಿಯನ್ನು ಪ್ರದರ್ಶನ ಮಾಡಿದ, ಸಂಘ ಪರಿವಾರದ ಮುಖಂಡ ಎಂದು ಹೇಳಿಕೊಳ್ಳುವ ವಿಕೃತ ಮನಸ್ಸಿನ ಹಿಂದೂ ಮುಖವಾಡದ ಕೊಲೆ ಆರೋಪಿ ಹಾಗೂ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿ ಸಮಾಜಘಾತಕ ಪುನೀತ್ ಕೆರೆಹಳ್ಳಿಯನ್ನು ನೆನ್ನೆಯಿಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದರು. ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೇಳಿದರು. ಪೊಲೀಸರ ಬೇಡಿಕೆ ಪುರಸ್ಕರಿಸಿದ ನ್ಯಾಯಾಧೀಶರ ಪುನೀತ್ ಕೆರೆಹಳ್ಳಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

”ಇದು ಹೋರಾಟಗಾರರ ಕುಟುಂಬವನ್ನ ಟಾರ್ಗೆಟ್ ಮಾಡುವ ವಿಕೃತ ಮನಸ್ಸಿನ ಹಿಂದೂ ಹೋರಾಟಗಾರರಿಗೆ ಪಾಠವಾಗಬೇಕು. ನಾನು ಹೋರಾಟದ ಜೀವನದಲ್ಲಿ ಎಲ್ಲಾ ಅವಮಾನಗಳನ್ನು ಟೀಕೆಗಳನ್ನು ಅನುಭವಿಸಿದ್ದೇನೆ. ಇನ್ನು ಮುಂದೆಯೂ ಅನುಭವಿಸಲು ತಯಾರಿದ್ದೇನೆ. ಯಾಕೆಂದರೆ ಒಂದು ಸಿದ್ದಾಂತಕ್ಕೆ ಬದ್ಧನಾಗಿರುವ ನಾನು ಎಲ್ಲರಿಗೂ ಒಳ್ಳೆಯವನಾಗಲು ಸಾಧ್ಯವಿಲ್ಲ. ಬಲಪಂಥೀಯರು ನನ್ನನ್ನು ವಿರೋಧಿಸುತ್ತಾರೆ ಎಂದರೆ ನಾನು ಬಾಬಾ ಸಾಹೇಬರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇನೆ ಎಂದರ್ಥ” ಎಂದು ಹೇಳಿದ್ದಾರೆ.

”ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿಯ ಒಂದಷ್ಟು ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಒಂದಷ್ಟು ಮುಖಂಡರು ನನ್ನ ವಿರುದ್ಧ ಬರೆದಿರುವ ಆ ಅಸಹ್ಯಕರವಾದ ಭಾಷೆಯನ್ನು ಯಾರು ಬೆಂಬಲಿಸಿಲ್ಲ. ಈ ವಿಚಾರವಾಗಿ ಇವನ ಜೊತೆ ನಾವು ನಿಲ್ಲಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂಬ ಮಾಹಿತಿ ನನಗಿದೆ. ಈ ರೀತಿಯಾದ ಒಂದು ನೈತಿಕತೆಯ ತೀರ್ಮಾನ ತೆಗೆದುಕೊಂಡಿದ್ದರೆ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ” ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬಂಧನಕ್ಕೂ ಮುನ್ನ ಪುನೀತ್ ಕೆರೆಹಳ್ಳಿ ಬಂಧನಕ್ಕೂ ಮುನ್ನ ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಅದರಲ್ಲಿ ತನಗೆ ಈ ಬಾರಿ ಜಾಮೀನು ಬೇಡ, ನಾನು ಜೈಲಿನಲ್ಲಿಯೇ ಇರುತ್ತೇನೆ ಎಂದು ಹೇಳಿದ್ದ ಹೇಳಿಕೆ ಸಾಕಷ್ಟು ವೈರಲ್ ಆಗಿತ್ತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಪುನೀತ್ ಕೆರೆಹಳ್ಳಿ ಬಂಧನ ಸಾಧ್ಯತೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...