Homeಕರ್ನಾಟಕಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

- Advertisement -
- Advertisement -

ಪದೇ ಪದೇ ನಾಲಿಗೆ ಹರಿಬಿಟ್ಟು ಅಶಾಂತಿ ಉಂಟು ಮಾಡುವ ಹಿಂದುತ್ವ ಮುಖಂಡ, ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್‌ ಕೆರೆಹಳ್ಳಿ ಬಂಧನವಾಗಿದೆ. ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ನಿಂದಿಸಿದ್ದ ಪ್ರಕರಣದಲ್ಲಿ ಇದೀಗ ಪುನೀತ್ ಜೈಲು ಸೇರಿದ್ದಾನೆ.

ಪುನೀತ್ ಕೆರೆಹಳ್ಳಿ ಈಗಾಗಲೇ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. 2013ರಲ್ಲಿ ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿ ಬಿದ್ದಿದ್ದ. ಗೋ ರಕ್ಷಣೆ ಹೆಸರಲ್ಲಿ ಇದ್ರೀಸ್ ಪಾಷಾ ಎಂಬ ವ್ಯಕ್ತಿಯನ್ನು ಕೊಂದ ಆರೋಪವೂ ಪುನೀತ್‌ ಕೆರೆಹಳ್ಳಿ ಮತ್ತು ಆತನ ಗ್ಯಾಂಗ್ ಮೇಲೆ ಇದೆ. ವಿಧಾನಸೌಧಕ್ಕೆ ಕಲ್ಲು ಹೊಡೆಯುವ ಮತ್ತು ಬಸ್ಸಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಪ್ರಕರಣ ದಾಖಲಾಗಿತ್ತು. ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದನು. ಈ ವಿಚಾರವಾಗಿಯೂ ದೂರು ದಾಖಲಾಗಿದೆ.

ಇಂತಹ ಅನೇಕ ಗಂಭೀರ ಪ್ರಕರಣಗಳಲ್ಲಿ ಸಿಲುಕಿರುವ ಹಿಂದುತ್ವ ಮುಖಂಡ ಪುನೀತ್ ಕೆರೆಹಳ್ಳಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲವಾಗಿ ಬರೆಯುತ್ತಾ ಕನ್ನಡಪರ ಹೋರಾಟಗಾರ, ದಲಿತ ಮುಖಂಡ ಹರೀಶ್ ಭೈರಪ್ಪ ಅವರ ಕುರಿತು ಕೀಳುಮಟ್ಟದ ಭಾಷೆಯಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದರು. ಈ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಶುಕ್ರವಾರ ಪುನೀತ್ ಬಂಧನವಾಗಿದೆ.

ದೂರಿನಲ್ಲಿ ಏನಿದೆ?

”ನಾನು ದಲಿತನಾಗಿರುವ ಕಾರಣ ಪುನೀತ್ ಕೆರೆಹಳ್ಳಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ” ಎಂದು ಭೈರಪ್ಪ ಹರೀಶ್ ಕುಮಾರ್ ಅವರು ದೂರಿನಲ್ಲಿ ಹೇಳಿದ್ದಾರೆ.

”ನಾನೊಬ್ಬ ಕನ್ನಡಪರ ಹೋರಾಟಗಾರನಾಗಿದ್ದು ಇತ್ತೀಚೆಗೆ ಇದೀಸ್ ಪಾಷಾ ಕೊಲೆ ಆರೋಪದಲ್ಲಿ ಜೈಲು ಶಿಕ್ಷೆಯಿಂದ ಬಿಡುಗಡೆಗೊಂಡ ಬಳಿಕವೂ ಸಮಾಜದ ಸ್ವಾಸ್ಥ್ಯ ಕದಡಲು ಯತ್ನಿಸುತ್ತಿದ್ದ ಪುನೀತ್ ಕೆರೆಹಳ್ಳಿಯ ಬಗ್ಗೆ ಜಾಗೃತರಾಗಿರುವಂತೆ ಸಾಮಾಜಿಕ ಕಳಕಳಿಯಿಂದ ಮಾಧ್ಯಮ ವರದಿಯನ್ನು ಫೇಸ್ ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ದಿನಾಂಕ 17-10-2023 ರಂದು ಪುನೀತ್ ಕೆರೆಹಳ್ಳಿ, ನನ್ನ ಮತ್ತು ನನ್ನ ಪತ್ನಿ ಮಕ್ಕಳ ವಿರುದ್ಧ ನಿಂದನಾತ್ಮಕ ಮಾತುಗಳನ್ನಾಡಿದ್ದಾನೆ. ನನ್ನ ಪತ್ನಿ ,ಮಕ್ಕಳು ತಲೆ ಎತ್ತಿ ನಡೆಯಂದಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪುನೀತ್ ಬಂಧನದ ಬಳಿಕ ಮಾತನಾಡಿದ ಹರೀಶ್ ಭೈರಪ್ಪ ಅವರು, ”ಕೊನೆಗೂ ನನ್ನ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಎನ್ನುವ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ. ನನ್ನ ಹಾಗೂ ನನ್ನ ಕುಟುಂಬದ ಮೇಲೆ ವೈಯಕ್ತಿಕ ದಾಳಿಗೆ ಇಳಿದು ತನ್ನ ಹೀನ ಮನಸ್ಥಿತಿಯನ್ನು ಪ್ರದರ್ಶನ ಮಾಡಿದ, ಸಂಘ ಪರಿವಾರದ ಮುಖಂಡ ಎಂದು ಹೇಳಿಕೊಳ್ಳುವ ವಿಕೃತ ಮನಸ್ಸಿನ ಹಿಂದೂ ಮುಖವಾಡದ ಕೊಲೆ ಆರೋಪಿ ಹಾಗೂ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿ ಸಮಾಜಘಾತಕ ಪುನೀತ್ ಕೆರೆಹಳ್ಳಿಯನ್ನು ನೆನ್ನೆಯಿಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದರು. ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೇಳಿದರು. ಪೊಲೀಸರ ಬೇಡಿಕೆ ಪುರಸ್ಕರಿಸಿದ ನ್ಯಾಯಾಧೀಶರ ಪುನೀತ್ ಕೆರೆಹಳ್ಳಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

”ಇದು ಹೋರಾಟಗಾರರ ಕುಟುಂಬವನ್ನ ಟಾರ್ಗೆಟ್ ಮಾಡುವ ವಿಕೃತ ಮನಸ್ಸಿನ ಹಿಂದೂ ಹೋರಾಟಗಾರರಿಗೆ ಪಾಠವಾಗಬೇಕು. ನಾನು ಹೋರಾಟದ ಜೀವನದಲ್ಲಿ ಎಲ್ಲಾ ಅವಮಾನಗಳನ್ನು ಟೀಕೆಗಳನ್ನು ಅನುಭವಿಸಿದ್ದೇನೆ. ಇನ್ನು ಮುಂದೆಯೂ ಅನುಭವಿಸಲು ತಯಾರಿದ್ದೇನೆ. ಯಾಕೆಂದರೆ ಒಂದು ಸಿದ್ದಾಂತಕ್ಕೆ ಬದ್ಧನಾಗಿರುವ ನಾನು ಎಲ್ಲರಿಗೂ ಒಳ್ಳೆಯವನಾಗಲು ಸಾಧ್ಯವಿಲ್ಲ. ಬಲಪಂಥೀಯರು ನನ್ನನ್ನು ವಿರೋಧಿಸುತ್ತಾರೆ ಎಂದರೆ ನಾನು ಬಾಬಾ ಸಾಹೇಬರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇನೆ ಎಂದರ್ಥ” ಎಂದು ಹೇಳಿದ್ದಾರೆ.

”ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿಯ ಒಂದಷ್ಟು ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಒಂದಷ್ಟು ಮುಖಂಡರು ನನ್ನ ವಿರುದ್ಧ ಬರೆದಿರುವ ಆ ಅಸಹ್ಯಕರವಾದ ಭಾಷೆಯನ್ನು ಯಾರು ಬೆಂಬಲಿಸಿಲ್ಲ. ಈ ವಿಚಾರವಾಗಿ ಇವನ ಜೊತೆ ನಾವು ನಿಲ್ಲಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂಬ ಮಾಹಿತಿ ನನಗಿದೆ. ಈ ರೀತಿಯಾದ ಒಂದು ನೈತಿಕತೆಯ ತೀರ್ಮಾನ ತೆಗೆದುಕೊಂಡಿದ್ದರೆ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ” ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬಂಧನಕ್ಕೂ ಮುನ್ನ ಪುನೀತ್ ಕೆರೆಹಳ್ಳಿ ಬಂಧನಕ್ಕೂ ಮುನ್ನ ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಅದರಲ್ಲಿ ತನಗೆ ಈ ಬಾರಿ ಜಾಮೀನು ಬೇಡ, ನಾನು ಜೈಲಿನಲ್ಲಿಯೇ ಇರುತ್ತೇನೆ ಎಂದು ಹೇಳಿದ್ದ ಹೇಳಿಕೆ ಸಾಕಷ್ಟು ವೈರಲ್ ಆಗಿತ್ತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಪುನೀತ್ ಕೆರೆಹಳ್ಳಿ ಬಂಧನ ಸಾಧ್ಯತೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...