Homeಮುಖಪುಟಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಈ ಪ್ರಕರಣದಲ್ಲಿ ಸಂತ್ರಸ್ತನನ್ನೇ ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ನೀಡಲಾಗಿದೆ. ಆ ನಂತರ ರಾಜೀ ಮಾಡಿಸಲಾಗಿದೆ. ಆದರೆ ಸಂತ್ರಸ್ತ ದೂರು ನೀಡಿ ವಾರವಾದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ.

- Advertisement -
- Advertisement -

ಹಸು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಜಾತಿ ದೌರ್ಜನ್ಯದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದಲಿತ ಯುವಕನನ್ನು ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ವೀಡಿಯೋ ವೈರಲ್ ಆಗಿದ್ದು, ವಾರದ ನಂತರ ಘಟನೆ ಬೆಳಕಿಗೆ ಬಂದಿದೆ. ಮಳವಳ್ಳಿ ತಾಲ್ಲೂಕಿನ ಹಣಕೊಳ ಗ್ರಾಮದ ಸುರೇಶ್ ವರ್ಧನ್ (32) ಹಲ್ಲೆಗೊಳಗಾದ ಯುವಕ. ಆರೋಪಿಗಳಾದ ದುಗ್ಗನಹಳ್ಳಿಯ ರಾಜು, ಹಣಕೊಳ ಗ್ರಾಮದ ಸುಂದರಮ್ಮ, ಮಳವಳ್ಳಿಯ ಮಲ್ಲಯ್ಯ ಮತ್ತು ಗಿರೀಶ್ ಎಂಬುವವರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಪ್ರತಿಕ್ರಿಯಿಸಿದ ಡಿವೈಎಸ್ಪಿ ಲಕ್ಷ್ಮಿ ನಾರಾಯಣ್ “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಆರೋಪಿಗಳನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ವಾಸ್ತವವಾಗಿ ನಡೆದಿದ್ದೇನು?

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಕೊರೊನಾ ತಂದೊಡ್ಡಿದ ಸಂಕಷ್ಟದಿಂದಾಗಿ ತನ್ನ ಹಳ್ಳಿಗೆ ಮರಳಿದ್ದರು. ಹಳ್ಳಿಯಲ್ಲಿಯೇ ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸಬೇಕೆಂದುಕೊಂಡಿದ್ದರು. ಪರಿಚಯಸ್ಥರೊಬ್ಬರಿಂದ ಹಸು ಮಾರಾಟ ಮಾಡುತ್ತಿದ್ದ ರಾಜು ಅವರ ಪರಿಚಯವಾಗಿ, ಅವರ ಹತ್ತಿರ ಹಸು ಕೊಳ್ಳಲು ಮುಂದಾಗಿದ್ದರು. ಈ ಕುರಿತು ಸುರೇಶ್ ನಾನುಗೌರಿ ಜೊತೆ ತಮಗಾದ ಅನ್ಯಾಯವನ್ನು ಹಂಚಿಕೊಂಡಿದ್ದಾರೆ.

ಹಲ್ಲೆಗೊಳಗಾಗಿದ್ದ ಸುರೇಶ್ ಅವರು ವಿವರಿಸುವಂತೆ, ‘ಹಸು ವ್ಯಾಪಾರಿ ದುಗ್ಗನಹಳ್ಳಿ ರಾಜು, ಜೆರ್ಸಿ ಹಸುವೊಂದು ದಿನಕ್ಕೆ 15 ಲೀಟರ್ ಹಾಲು ಕೊಡುತ್ತದೆ ಎಂದು ನಂಬಿಸಿ 44 ಸಾವಿರ ರೂಗಳಿಗೆ ಹಸುವನ್ನು ಮಾರಿದ್ದರು. ಹದಿನೈದು ದಿನಗಳಾದರೂ ಹಸು ದಿನಕ್ಕೆ 3 ಲೀಟರ್ ಅಷ್ಟೇ ಹಾಲು ಕೊಡುತ್ತಿದ್ದರಿಂದ ರಾಜು ಅವರಿಗೆ ಫೋನ್ ಮಾಡಿ ಮೋಸ ಮಾಡಿದ್ದೀರಿ ಎಂದು ಬೇಸರ ತೋಡಿಕೊಂಡಿದ್ದೆ. ನಂತರ ರಾಜು ಇನ್ನೊಂದು ಹಸುವನ್ನು ಕಡಿಮೆ ಬೆಲೆಗೆ ನೀಡುವುದಾಗಿ ತಿಳಿಸಿ 14 ಸಾವಿರ ರೂಗಳಿಗೆ ಗೊಡ್ಡು ಹಸುವನ್ನು ನನಗೆ ಮಾರಿದ್ದರು. ಪಶುವೈದ್ಯರಿಗೆ ಹಸುವನ್ನು ತೋರಿಸಿದಾಗ ಹಸು ಕರು ಹಾಕುವುದಿಲ್ಲ ಎಂಬುದು ತಿಳಿಯಿತು. ಎರೆಡೆರಡು ಬಾರಿ ಮೋಸ ಮಾಡಿದ್ದ ರಾಜು ಅವರ ಬಗ್ಗೆ ಅವರ ಪರಿಚಯಸ್ಥರಿಗೆ ತಿಳಿಸಿದ್ದೆ. ಈ ಎಲ್ಲಾ ಘಟನೆಗಳ ನಂತರ ರಾಜು ಅಕ್ಟೋಬರ್ 12ನೇ ತಾರೀಖಿನಂದು ಊರಿಗೆ ಬಂದು ಇನ್ನೊಂದು ಹಸುವನ್ನು ಹೊಡೆದುಕೊಂಡು ಹೋಗಲು ತಿಳಿಸಿದ್ದರು.

ಅದರಂತೆ ನನ್ನ ಸ್ನೇಹಿತನೊಂದಿಗೆ ಅಕ್ಟೋಬರ್ 12ನೇ ತಾರೀಖಿನಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅವರ ಮನೆಯ ಹತ್ತಿರ ಹೋಗಿದ್ದೆ. ಆದರೆ ರಾಜು ಅವರ ಮನೆಯಲ್ಲಿ ಯಾರು ಇರಲಿಲ್ಲ. ರಾಜು ಅವರು ಗದ್ದೆಯ ಬಳಿ ಇದ್ದಾರೆ ಎಂದು ಅವರ ಮನೆಯ ಹತ್ತಿರದ ಸಂಬಂಧಿಗಳೊಬ್ಬರು ತಿಳಿಸಿದರು. ಹೇಗೂ ಹಸು ಹೊಡೆದುಕೊಂಡು ಹೋಗಲು ತಿಳಿಸಿದ್ದರಿಂದ ಅವರ ಮನೆಯಲ್ಲಿದ್ದ ಹಸುವನ್ನು ಹೊಡೆದುಕೊಂಡು ರಾಜು ಅವರಿದ್ದ ಗದ್ದೆಯ ಬಳಿಗೆ ಹೊರಟಿದ್ದೆ. ನನ್ನ ಸ್ನೇಹಿತ ಹಿಂದೆ ಗಾಡಿಯಲ್ಲಿ ಬರುತ್ತಿದ್ದ. ಆದರೆ ರಾಜು ಅವರ ಗದ್ದೆಗೆ ಹೋಗುವ ಮೊದಲೇ ಅವರು ಪೂರ್ವ ನಿಯೋಜಿತವಾಗಿ ಕಳ್ಳ, ಕಳ್ಳ ಎಂದು ಕೂಗುತ್ತಾ ರಾಜು ಮತ್ತವರ ಸ್ನೇಹಿತರು ನನ್ನನ್ನು ಸುತ್ತುವರೆದು ಹಸು ಕದಿಯುತ್ತಿದ್ದಾನೆ ಎಂದು ಆರೋಪಿಸಿ ಥಳಿಸಿದರು. ನನ್ನ ಕೈಕಾಲುಗಳನ್ನು ಕಟ್ಟಿ ಬಾವಿಗೆ ಎಸೆದು ಕೊಲ್ಲಲು ಪ್ರಯತ್ನಿಸಿದಾಗ, ರಾಜು ಅವರನ್ನು ಕಾಲಿಡಿದುಕೊಂಡು ಸಾಯಿಸಬೇಡಿ ಎಂದು ಬೇಡಿಕೊಂಡೆ. ಆಗ ಜಾತಿನಿಂದನೆ ಮಾಡಿ ನನ್ನ ಕೈಗಳನ್ನು ಹಸುವಿನ ಹಗ್ಗಕ್ಕೆ ಕಟ್ಟಿ ಮೆರವಣಿಗೆ ಮಾಡಿದರು. ಇದನ್ನೆಲ್ಲಾ ಅಲ್ಲಿದ್ದವರು ವೀಡಿಯೋ ಮಾಡುತ್ತಿದ್ದರು. ನಂತರ ನನ್ನನ್ನು ಅವರೇ ಕಳ್ಳನೆಂದು ಪೊಲೀಸರಿಗೆ ಒಪ್ಪಿಸಿದರು. ನಂತರ ರಾಜು ಅವರು ತನ್ನ ಸ್ನೇಹಿತರೊಂದಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ರಾಜಿ ಸಂಧಾನ ನಡೆದು ಕೊನೆಗೆ ನನ್ನನ್ನು ಬಿಡುಗಡೆ ಮಾಡಿದರು ಎಂದು ಸುರೇಶ್ ಇಡೀ ಘಟನೆಯನ್ನು ವಿವರಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ರಾಜು ಮತ್ತವರ ಸ್ನೇಹಿತರು ಮಾಡಿದ್ದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದರ ಬಗ್ಗೆ ಪ್ರತಿಕ್ರಿಯಿಸಿದ ಸುರೇಶ್, ಆ ವೀಡಿಯೋದಿಂದಾಗಿ ನನ್ನ ಇಡೀ ಕುಟುಂಬ ಊರಿನಲ್ಲಿ ತಲೆತಗ್ಗಿಸುವಂತಾಯಿತು. ಮಾಡಿಲ್ಲದ ತಪ್ಪಿಗೆ ದೈಹಿಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ನೋವು ಅನುಭವಿಸಿದೆ. ನಿಜವಾಗಿಯೂ ನಡೆದದ್ದೇನು ಎಂಬುದನ್ನು ನನ್ನ ಸಂಬಂಧಿಕರು ಹಾಗೂ ನಮ್ಮ ಸಮುದಾಯದ ಮುಖಂಡರಿಗೆ ವಿವರಿಸಿದೆ. ಆಗ ನಮ್ಮ ಸಮುದಾಯದ ಹಿರಿಯರ ಸಲಹೆ ಮೇರೆಗೆ ಸ್ನೇಹಿತರೊಟ್ಟಿಗೆ ಸೇರಿ ಪೊಲೀಸ್ ಠಾಣೆಯಲ್ಲಿ ರಾಜು ಮತ್ತು ಅವರ ಸ್ನೇಹಿತರ ವಿರುದ್ಧ ದೂರು ನೀಡಿದ್ದೇನೆ ಎಂದು ಸುರೇಶ್ ತಿಳಿಸಿದರು.

”ಪೊಲೀಸ್‌ ಠಾಣೆಗೆ ದೂರು ದಾಖಲಿಸಲು ಹೋದಾಗ ಸಬ್ ಇನ್ಸ್‌ಪೆಕ್ಟರ್ ರವಿಕುಮಾರ್‌ ಕೂಡ ಆರೋಪಿಗಳ ಪರವಾಗಿ ಮಾತನಾಡಿದ್ದು, ನೀನು ದೂರು ದಾಖಲಿಸುವುದಾದರೆ, ನಿನ್ನ ಮೇಲೆ ಕಳ್ಳತನದ ಆರೋಪ ಹೊರಿಸಿ ದೂರು ದಾಖಲಿಸುತ್ತೇನೆ ಎಂದು ಹೆದರಿಸಿದರು. ನಂತರ ನಮ್ಮ ಸಮುದಾಯದವರ ಸಹಾಯದೊಂದಿಗೆ ಡಿವೈಎಸ್‌ಪಿ ಅವರನ್ನು ಸಂಪರ್ಕಿಸಿ, ಆದ ಘಟನೆಯನ್ನು ವಿವರಿಸಿದ ನಂತರ, ವಿಡಿಯೋ ವೈರಲ್ ಆಗಿರುವುದು ಕೆಲ ಮಾಧ್ಯಮಗಳಲ್ಲಿ ಸುದ್ದಿಯಾದ ನಂತರವಷ್ಟೇ ಎಸ್‌ಸಿ ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿಕೊಂಡರು” ಎಂದು ಸುರೇಶ್ ತಿಳಿಸಿದ್ದಾರೆ.

‘ನಾನು ಮಾಡದ ತಪ್ಪಿಗೆ ನನ್ನ ಮಕ್ಕಳು ತಲೆ ತಗ್ಗಿಸುವಂತಾಗದಿರಲಿ. ಜಾತಿ ಹೆಸರನಲ್ಲಿ ನಡೆಯುತ್ತಿರುವ ಈ ಕ್ರೌರ್ಯ ಇಲ್ಲಿಗೆ ಕೊನೆಗೊಳ್ಳಲಿ. ನನಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ದೊರಕಿಸಿಕೊಡಿ’ ಎನ್ನುವ ಸುರೇಶ್ ಇಂತಹ ಘಟನೆಗಳು ಮರುಕಳಿಸದಿರಲಿ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಮಳವಳ್ಳಿಯ ನಿವೃತ್ತ ಪ್ರಾಂಶುಪಾಲರಾದ ಎಂ.ವಿ ಕೃಷ್ಣರವರು, “ಮಳವಳ್ಳಿ ತಾಲ್ಲೂಕಿನ ಹಳ್ಳಿಗಳಲ್ಲಿ ಇಂದಿಗೂ ಪರಿಶಿಷ್ಟ ಸಮುದಾಯದ ಜನರಿಗೆ ಕ್ಷೌರ ಮಾಡುವುದಿಲ್ಲ, ಹೋಟೆಲ್‌ಗಳಲ್ಲಿ ಪ್ರತ್ಯೇಕವಾಗಿ ಪೇಪರ್ ಲೋಟಗಳಲ್ಲಿ ಟೀ ಕೊಡುವ ಸಂಸ್ಕೃತಿ ಇದೆ. ಈ ಕುರಿತು ಹಲವು ಹೋರಾಟಗಳನ್ನು ನಡೆಸಿದ್ದೇವೆ. ಪರಿಸ್ಥಿತಿ ಇಂದಿಗೂ ಹೀಗೆ ಮುಂದುವರೆದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಸಂತ್ರಸ್ತನನ್ನೇ ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ನೀಡಲಾಗಿದೆ. ಆ ನಂತರ ರಾಜೀ ಮಾಡಿಸಲಾಗಿದೆ. ಆದರೆ ಸಂತ್ರಸ್ತ ದೂರು ನೀಡಿ ವಾರವಾದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರುತ್ತೇವೆ. ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

ಈ ದೇಶದಲ್ಲಿ ವ್ಯಕ್ತಿಯೊಬ್ಬ ದಲಿತ ಎಂಬ ಕಾರಣಕ್ಕೆ ಅವನ ಮೇಲೆ ದೌರ್ಜನ್ಯ ಎಸಗುವುದು, ದಲಿತ ಮಹಿಳೆ ಎಂಬ ಕಾರಣಕ್ಕೆ ಅತ್ಯಾಚಾರ ಎಸಗುವುದು, ಜಾತಿಯ ಹೆಸರಿನಲ್ಲಿ ಅವಹೇಳನ ಮಾಡುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಇಡೀ ಕುಟುಂಬಗಳ ಮೇಲೆ ಹಲ್ಲೆ ನಡೆಸುವುದು ತೀರಾ ಸಾಮಾನ್ಯ ಎನ್ನುವಂತಾಗಿದೆ. ಆರೋಪಿಗಳಿಗೆ ಶಿಕ್ಷೆಯಾಗದಿರುವುದು ಇಂತಹ ಘಟನೆಗಳು ಕೊನೆಗೊಳ್ಳದಿರಲು ಒಂದು ಕಾರಣವಾಗಿದೆ. ಈ ಬಗ್ಗೆ ಸರ್ಕಾರಗಳು ಕಣ್ಣಿದ್ದು ಕುರುಡರಂತೆ, ಕಿವಿಯಿದ್ದು ಕಿವುಡರಂತೆ ವರ್ತಿಸುತ್ತಿರುವುದು ಏಕೆ? ನೊಂದ ಜನರೇ ಕಾನೂನು ಕೈಗೆತ್ತುಕೊಳ್ಳುವ ಮೊದಲು ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಈ ರೀತಿಯ ಜಾತಿ ದೌರ್ಜನ್ಯಗಳಿಗೆ ಕೊನೆ ಹಾಡಲಿ..


ಇದನ್ನೂ ಓದಿ: ದಲಿತ ಕುಟುಂಬದ ಮೇಲೆ ಹಲ್ಲೆ, ಜಾತಿನಿಂದನೆ – ಪ್ರಕರಣ ದಾಖಲಾದರೂ ನಿಲ್ಲದ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...