Homeಮುಖಪುಟಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಈ ಪ್ರಕರಣದಲ್ಲಿ ಸಂತ್ರಸ್ತನನ್ನೇ ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ನೀಡಲಾಗಿದೆ. ಆ ನಂತರ ರಾಜೀ ಮಾಡಿಸಲಾಗಿದೆ. ಆದರೆ ಸಂತ್ರಸ್ತ ದೂರು ನೀಡಿ ವಾರವಾದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ.

- Advertisement -
- Advertisement -

ಹಸು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಜಾತಿ ದೌರ್ಜನ್ಯದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದಲಿತ ಯುವಕನನ್ನು ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ವೀಡಿಯೋ ವೈರಲ್ ಆಗಿದ್ದು, ವಾರದ ನಂತರ ಘಟನೆ ಬೆಳಕಿಗೆ ಬಂದಿದೆ. ಮಳವಳ್ಳಿ ತಾಲ್ಲೂಕಿನ ಹಣಕೊಳ ಗ್ರಾಮದ ಸುರೇಶ್ ವರ್ಧನ್ (32) ಹಲ್ಲೆಗೊಳಗಾದ ಯುವಕ. ಆರೋಪಿಗಳಾದ ದುಗ್ಗನಹಳ್ಳಿಯ ರಾಜು, ಹಣಕೊಳ ಗ್ರಾಮದ ಸುಂದರಮ್ಮ, ಮಳವಳ್ಳಿಯ ಮಲ್ಲಯ್ಯ ಮತ್ತು ಗಿರೀಶ್ ಎಂಬುವವರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಪ್ರತಿಕ್ರಿಯಿಸಿದ ಡಿವೈಎಸ್ಪಿ ಲಕ್ಷ್ಮಿ ನಾರಾಯಣ್ “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಆರೋಪಿಗಳನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ವಾಸ್ತವವಾಗಿ ನಡೆದಿದ್ದೇನು?

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಕೊರೊನಾ ತಂದೊಡ್ಡಿದ ಸಂಕಷ್ಟದಿಂದಾಗಿ ತನ್ನ ಹಳ್ಳಿಗೆ ಮರಳಿದ್ದರು. ಹಳ್ಳಿಯಲ್ಲಿಯೇ ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸಬೇಕೆಂದುಕೊಂಡಿದ್ದರು. ಪರಿಚಯಸ್ಥರೊಬ್ಬರಿಂದ ಹಸು ಮಾರಾಟ ಮಾಡುತ್ತಿದ್ದ ರಾಜು ಅವರ ಪರಿಚಯವಾಗಿ, ಅವರ ಹತ್ತಿರ ಹಸು ಕೊಳ್ಳಲು ಮುಂದಾಗಿದ್ದರು. ಈ ಕುರಿತು ಸುರೇಶ್ ನಾನುಗೌರಿ ಜೊತೆ ತಮಗಾದ ಅನ್ಯಾಯವನ್ನು ಹಂಚಿಕೊಂಡಿದ್ದಾರೆ.

ಹಲ್ಲೆಗೊಳಗಾಗಿದ್ದ ಸುರೇಶ್ ಅವರು ವಿವರಿಸುವಂತೆ, ‘ಹಸು ವ್ಯಾಪಾರಿ ದುಗ್ಗನಹಳ್ಳಿ ರಾಜು, ಜೆರ್ಸಿ ಹಸುವೊಂದು ದಿನಕ್ಕೆ 15 ಲೀಟರ್ ಹಾಲು ಕೊಡುತ್ತದೆ ಎಂದು ನಂಬಿಸಿ 44 ಸಾವಿರ ರೂಗಳಿಗೆ ಹಸುವನ್ನು ಮಾರಿದ್ದರು. ಹದಿನೈದು ದಿನಗಳಾದರೂ ಹಸು ದಿನಕ್ಕೆ 3 ಲೀಟರ್ ಅಷ್ಟೇ ಹಾಲು ಕೊಡುತ್ತಿದ್ದರಿಂದ ರಾಜು ಅವರಿಗೆ ಫೋನ್ ಮಾಡಿ ಮೋಸ ಮಾಡಿದ್ದೀರಿ ಎಂದು ಬೇಸರ ತೋಡಿಕೊಂಡಿದ್ದೆ. ನಂತರ ರಾಜು ಇನ್ನೊಂದು ಹಸುವನ್ನು ಕಡಿಮೆ ಬೆಲೆಗೆ ನೀಡುವುದಾಗಿ ತಿಳಿಸಿ 14 ಸಾವಿರ ರೂಗಳಿಗೆ ಗೊಡ್ಡು ಹಸುವನ್ನು ನನಗೆ ಮಾರಿದ್ದರು. ಪಶುವೈದ್ಯರಿಗೆ ಹಸುವನ್ನು ತೋರಿಸಿದಾಗ ಹಸು ಕರು ಹಾಕುವುದಿಲ್ಲ ಎಂಬುದು ತಿಳಿಯಿತು. ಎರೆಡೆರಡು ಬಾರಿ ಮೋಸ ಮಾಡಿದ್ದ ರಾಜು ಅವರ ಬಗ್ಗೆ ಅವರ ಪರಿಚಯಸ್ಥರಿಗೆ ತಿಳಿಸಿದ್ದೆ. ಈ ಎಲ್ಲಾ ಘಟನೆಗಳ ನಂತರ ರಾಜು ಅಕ್ಟೋಬರ್ 12ನೇ ತಾರೀಖಿನಂದು ಊರಿಗೆ ಬಂದು ಇನ್ನೊಂದು ಹಸುವನ್ನು ಹೊಡೆದುಕೊಂಡು ಹೋಗಲು ತಿಳಿಸಿದ್ದರು.

ಅದರಂತೆ ನನ್ನ ಸ್ನೇಹಿತನೊಂದಿಗೆ ಅಕ್ಟೋಬರ್ 12ನೇ ತಾರೀಖಿನಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅವರ ಮನೆಯ ಹತ್ತಿರ ಹೋಗಿದ್ದೆ. ಆದರೆ ರಾಜು ಅವರ ಮನೆಯಲ್ಲಿ ಯಾರು ಇರಲಿಲ್ಲ. ರಾಜು ಅವರು ಗದ್ದೆಯ ಬಳಿ ಇದ್ದಾರೆ ಎಂದು ಅವರ ಮನೆಯ ಹತ್ತಿರದ ಸಂಬಂಧಿಗಳೊಬ್ಬರು ತಿಳಿಸಿದರು. ಹೇಗೂ ಹಸು ಹೊಡೆದುಕೊಂಡು ಹೋಗಲು ತಿಳಿಸಿದ್ದರಿಂದ ಅವರ ಮನೆಯಲ್ಲಿದ್ದ ಹಸುವನ್ನು ಹೊಡೆದುಕೊಂಡು ರಾಜು ಅವರಿದ್ದ ಗದ್ದೆಯ ಬಳಿಗೆ ಹೊರಟಿದ್ದೆ. ನನ್ನ ಸ್ನೇಹಿತ ಹಿಂದೆ ಗಾಡಿಯಲ್ಲಿ ಬರುತ್ತಿದ್ದ. ಆದರೆ ರಾಜು ಅವರ ಗದ್ದೆಗೆ ಹೋಗುವ ಮೊದಲೇ ಅವರು ಪೂರ್ವ ನಿಯೋಜಿತವಾಗಿ ಕಳ್ಳ, ಕಳ್ಳ ಎಂದು ಕೂಗುತ್ತಾ ರಾಜು ಮತ್ತವರ ಸ್ನೇಹಿತರು ನನ್ನನ್ನು ಸುತ್ತುವರೆದು ಹಸು ಕದಿಯುತ್ತಿದ್ದಾನೆ ಎಂದು ಆರೋಪಿಸಿ ಥಳಿಸಿದರು. ನನ್ನ ಕೈಕಾಲುಗಳನ್ನು ಕಟ್ಟಿ ಬಾವಿಗೆ ಎಸೆದು ಕೊಲ್ಲಲು ಪ್ರಯತ್ನಿಸಿದಾಗ, ರಾಜು ಅವರನ್ನು ಕಾಲಿಡಿದುಕೊಂಡು ಸಾಯಿಸಬೇಡಿ ಎಂದು ಬೇಡಿಕೊಂಡೆ. ಆಗ ಜಾತಿನಿಂದನೆ ಮಾಡಿ ನನ್ನ ಕೈಗಳನ್ನು ಹಸುವಿನ ಹಗ್ಗಕ್ಕೆ ಕಟ್ಟಿ ಮೆರವಣಿಗೆ ಮಾಡಿದರು. ಇದನ್ನೆಲ್ಲಾ ಅಲ್ಲಿದ್ದವರು ವೀಡಿಯೋ ಮಾಡುತ್ತಿದ್ದರು. ನಂತರ ನನ್ನನ್ನು ಅವರೇ ಕಳ್ಳನೆಂದು ಪೊಲೀಸರಿಗೆ ಒಪ್ಪಿಸಿದರು. ನಂತರ ರಾಜು ಅವರು ತನ್ನ ಸ್ನೇಹಿತರೊಂದಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ರಾಜಿ ಸಂಧಾನ ನಡೆದು ಕೊನೆಗೆ ನನ್ನನ್ನು ಬಿಡುಗಡೆ ಮಾಡಿದರು ಎಂದು ಸುರೇಶ್ ಇಡೀ ಘಟನೆಯನ್ನು ವಿವರಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ರಾಜು ಮತ್ತವರ ಸ್ನೇಹಿತರು ಮಾಡಿದ್ದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದರ ಬಗ್ಗೆ ಪ್ರತಿಕ್ರಿಯಿಸಿದ ಸುರೇಶ್, ಆ ವೀಡಿಯೋದಿಂದಾಗಿ ನನ್ನ ಇಡೀ ಕುಟುಂಬ ಊರಿನಲ್ಲಿ ತಲೆತಗ್ಗಿಸುವಂತಾಯಿತು. ಮಾಡಿಲ್ಲದ ತಪ್ಪಿಗೆ ದೈಹಿಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ನೋವು ಅನುಭವಿಸಿದೆ. ನಿಜವಾಗಿಯೂ ನಡೆದದ್ದೇನು ಎಂಬುದನ್ನು ನನ್ನ ಸಂಬಂಧಿಕರು ಹಾಗೂ ನಮ್ಮ ಸಮುದಾಯದ ಮುಖಂಡರಿಗೆ ವಿವರಿಸಿದೆ. ಆಗ ನಮ್ಮ ಸಮುದಾಯದ ಹಿರಿಯರ ಸಲಹೆ ಮೇರೆಗೆ ಸ್ನೇಹಿತರೊಟ್ಟಿಗೆ ಸೇರಿ ಪೊಲೀಸ್ ಠಾಣೆಯಲ್ಲಿ ರಾಜು ಮತ್ತು ಅವರ ಸ್ನೇಹಿತರ ವಿರುದ್ಧ ದೂರು ನೀಡಿದ್ದೇನೆ ಎಂದು ಸುರೇಶ್ ತಿಳಿಸಿದರು.

”ಪೊಲೀಸ್‌ ಠಾಣೆಗೆ ದೂರು ದಾಖಲಿಸಲು ಹೋದಾಗ ಸಬ್ ಇನ್ಸ್‌ಪೆಕ್ಟರ್ ರವಿಕುಮಾರ್‌ ಕೂಡ ಆರೋಪಿಗಳ ಪರವಾಗಿ ಮಾತನಾಡಿದ್ದು, ನೀನು ದೂರು ದಾಖಲಿಸುವುದಾದರೆ, ನಿನ್ನ ಮೇಲೆ ಕಳ್ಳತನದ ಆರೋಪ ಹೊರಿಸಿ ದೂರು ದಾಖಲಿಸುತ್ತೇನೆ ಎಂದು ಹೆದರಿಸಿದರು. ನಂತರ ನಮ್ಮ ಸಮುದಾಯದವರ ಸಹಾಯದೊಂದಿಗೆ ಡಿವೈಎಸ್‌ಪಿ ಅವರನ್ನು ಸಂಪರ್ಕಿಸಿ, ಆದ ಘಟನೆಯನ್ನು ವಿವರಿಸಿದ ನಂತರ, ವಿಡಿಯೋ ವೈರಲ್ ಆಗಿರುವುದು ಕೆಲ ಮಾಧ್ಯಮಗಳಲ್ಲಿ ಸುದ್ದಿಯಾದ ನಂತರವಷ್ಟೇ ಎಸ್‌ಸಿ ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿಕೊಂಡರು” ಎಂದು ಸುರೇಶ್ ತಿಳಿಸಿದ್ದಾರೆ.

‘ನಾನು ಮಾಡದ ತಪ್ಪಿಗೆ ನನ್ನ ಮಕ್ಕಳು ತಲೆ ತಗ್ಗಿಸುವಂತಾಗದಿರಲಿ. ಜಾತಿ ಹೆಸರನಲ್ಲಿ ನಡೆಯುತ್ತಿರುವ ಈ ಕ್ರೌರ್ಯ ಇಲ್ಲಿಗೆ ಕೊನೆಗೊಳ್ಳಲಿ. ನನಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ದೊರಕಿಸಿಕೊಡಿ’ ಎನ್ನುವ ಸುರೇಶ್ ಇಂತಹ ಘಟನೆಗಳು ಮರುಕಳಿಸದಿರಲಿ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಮಳವಳ್ಳಿಯ ನಿವೃತ್ತ ಪ್ರಾಂಶುಪಾಲರಾದ ಎಂ.ವಿ ಕೃಷ್ಣರವರು, “ಮಳವಳ್ಳಿ ತಾಲ್ಲೂಕಿನ ಹಳ್ಳಿಗಳಲ್ಲಿ ಇಂದಿಗೂ ಪರಿಶಿಷ್ಟ ಸಮುದಾಯದ ಜನರಿಗೆ ಕ್ಷೌರ ಮಾಡುವುದಿಲ್ಲ, ಹೋಟೆಲ್‌ಗಳಲ್ಲಿ ಪ್ರತ್ಯೇಕವಾಗಿ ಪೇಪರ್ ಲೋಟಗಳಲ್ಲಿ ಟೀ ಕೊಡುವ ಸಂಸ್ಕೃತಿ ಇದೆ. ಈ ಕುರಿತು ಹಲವು ಹೋರಾಟಗಳನ್ನು ನಡೆಸಿದ್ದೇವೆ. ಪರಿಸ್ಥಿತಿ ಇಂದಿಗೂ ಹೀಗೆ ಮುಂದುವರೆದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಸಂತ್ರಸ್ತನನ್ನೇ ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ನೀಡಲಾಗಿದೆ. ಆ ನಂತರ ರಾಜೀ ಮಾಡಿಸಲಾಗಿದೆ. ಆದರೆ ಸಂತ್ರಸ್ತ ದೂರು ನೀಡಿ ವಾರವಾದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರುತ್ತೇವೆ. ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

ಈ ದೇಶದಲ್ಲಿ ವ್ಯಕ್ತಿಯೊಬ್ಬ ದಲಿತ ಎಂಬ ಕಾರಣಕ್ಕೆ ಅವನ ಮೇಲೆ ದೌರ್ಜನ್ಯ ಎಸಗುವುದು, ದಲಿತ ಮಹಿಳೆ ಎಂಬ ಕಾರಣಕ್ಕೆ ಅತ್ಯಾಚಾರ ಎಸಗುವುದು, ಜಾತಿಯ ಹೆಸರಿನಲ್ಲಿ ಅವಹೇಳನ ಮಾಡುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಇಡೀ ಕುಟುಂಬಗಳ ಮೇಲೆ ಹಲ್ಲೆ ನಡೆಸುವುದು ತೀರಾ ಸಾಮಾನ್ಯ ಎನ್ನುವಂತಾಗಿದೆ. ಆರೋಪಿಗಳಿಗೆ ಶಿಕ್ಷೆಯಾಗದಿರುವುದು ಇಂತಹ ಘಟನೆಗಳು ಕೊನೆಗೊಳ್ಳದಿರಲು ಒಂದು ಕಾರಣವಾಗಿದೆ. ಈ ಬಗ್ಗೆ ಸರ್ಕಾರಗಳು ಕಣ್ಣಿದ್ದು ಕುರುಡರಂತೆ, ಕಿವಿಯಿದ್ದು ಕಿವುಡರಂತೆ ವರ್ತಿಸುತ್ತಿರುವುದು ಏಕೆ? ನೊಂದ ಜನರೇ ಕಾನೂನು ಕೈಗೆತ್ತುಕೊಳ್ಳುವ ಮೊದಲು ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಈ ರೀತಿಯ ಜಾತಿ ದೌರ್ಜನ್ಯಗಳಿಗೆ ಕೊನೆ ಹಾಡಲಿ..


ಇದನ್ನೂ ಓದಿ: ದಲಿತ ಕುಟುಂಬದ ಮೇಲೆ ಹಲ್ಲೆ, ಜಾತಿನಿಂದನೆ – ಪ್ರಕರಣ ದಾಖಲಾದರೂ ನಿಲ್ಲದ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...