Homeಮುಖಪುಟಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಈ ಪ್ರಕರಣದಲ್ಲಿ ಸಂತ್ರಸ್ತನನ್ನೇ ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ನೀಡಲಾಗಿದೆ. ಆ ನಂತರ ರಾಜೀ ಮಾಡಿಸಲಾಗಿದೆ. ಆದರೆ ಸಂತ್ರಸ್ತ ದೂರು ನೀಡಿ ವಾರವಾದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ.

- Advertisement -
- Advertisement -

ಹಸು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಜಾತಿ ದೌರ್ಜನ್ಯದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದಲಿತ ಯುವಕನನ್ನು ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ವೀಡಿಯೋ ವೈರಲ್ ಆಗಿದ್ದು, ವಾರದ ನಂತರ ಘಟನೆ ಬೆಳಕಿಗೆ ಬಂದಿದೆ. ಮಳವಳ್ಳಿ ತಾಲ್ಲೂಕಿನ ಹಣಕೊಳ ಗ್ರಾಮದ ಸುರೇಶ್ ವರ್ಧನ್ (32) ಹಲ್ಲೆಗೊಳಗಾದ ಯುವಕ. ಆರೋಪಿಗಳಾದ ದುಗ್ಗನಹಳ್ಳಿಯ ರಾಜು, ಹಣಕೊಳ ಗ್ರಾಮದ ಸುಂದರಮ್ಮ, ಮಳವಳ್ಳಿಯ ಮಲ್ಲಯ್ಯ ಮತ್ತು ಗಿರೀಶ್ ಎಂಬುವವರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಪ್ರತಿಕ್ರಿಯಿಸಿದ ಡಿವೈಎಸ್ಪಿ ಲಕ್ಷ್ಮಿ ನಾರಾಯಣ್ “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಆರೋಪಿಗಳನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ವಾಸ್ತವವಾಗಿ ನಡೆದಿದ್ದೇನು?

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಕೊರೊನಾ ತಂದೊಡ್ಡಿದ ಸಂಕಷ್ಟದಿಂದಾಗಿ ತನ್ನ ಹಳ್ಳಿಗೆ ಮರಳಿದ್ದರು. ಹಳ್ಳಿಯಲ್ಲಿಯೇ ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸಬೇಕೆಂದುಕೊಂಡಿದ್ದರು. ಪರಿಚಯಸ್ಥರೊಬ್ಬರಿಂದ ಹಸು ಮಾರಾಟ ಮಾಡುತ್ತಿದ್ದ ರಾಜು ಅವರ ಪರಿಚಯವಾಗಿ, ಅವರ ಹತ್ತಿರ ಹಸು ಕೊಳ್ಳಲು ಮುಂದಾಗಿದ್ದರು. ಈ ಕುರಿತು ಸುರೇಶ್ ನಾನುಗೌರಿ ಜೊತೆ ತಮಗಾದ ಅನ್ಯಾಯವನ್ನು ಹಂಚಿಕೊಂಡಿದ್ದಾರೆ.

ಹಲ್ಲೆಗೊಳಗಾಗಿದ್ದ ಸುರೇಶ್ ಅವರು ವಿವರಿಸುವಂತೆ, ‘ಹಸು ವ್ಯಾಪಾರಿ ದುಗ್ಗನಹಳ್ಳಿ ರಾಜು, ಜೆರ್ಸಿ ಹಸುವೊಂದು ದಿನಕ್ಕೆ 15 ಲೀಟರ್ ಹಾಲು ಕೊಡುತ್ತದೆ ಎಂದು ನಂಬಿಸಿ 44 ಸಾವಿರ ರೂಗಳಿಗೆ ಹಸುವನ್ನು ಮಾರಿದ್ದರು. ಹದಿನೈದು ದಿನಗಳಾದರೂ ಹಸು ದಿನಕ್ಕೆ 3 ಲೀಟರ್ ಅಷ್ಟೇ ಹಾಲು ಕೊಡುತ್ತಿದ್ದರಿಂದ ರಾಜು ಅವರಿಗೆ ಫೋನ್ ಮಾಡಿ ಮೋಸ ಮಾಡಿದ್ದೀರಿ ಎಂದು ಬೇಸರ ತೋಡಿಕೊಂಡಿದ್ದೆ. ನಂತರ ರಾಜು ಇನ್ನೊಂದು ಹಸುವನ್ನು ಕಡಿಮೆ ಬೆಲೆಗೆ ನೀಡುವುದಾಗಿ ತಿಳಿಸಿ 14 ಸಾವಿರ ರೂಗಳಿಗೆ ಗೊಡ್ಡು ಹಸುವನ್ನು ನನಗೆ ಮಾರಿದ್ದರು. ಪಶುವೈದ್ಯರಿಗೆ ಹಸುವನ್ನು ತೋರಿಸಿದಾಗ ಹಸು ಕರು ಹಾಕುವುದಿಲ್ಲ ಎಂಬುದು ತಿಳಿಯಿತು. ಎರೆಡೆರಡು ಬಾರಿ ಮೋಸ ಮಾಡಿದ್ದ ರಾಜು ಅವರ ಬಗ್ಗೆ ಅವರ ಪರಿಚಯಸ್ಥರಿಗೆ ತಿಳಿಸಿದ್ದೆ. ಈ ಎಲ್ಲಾ ಘಟನೆಗಳ ನಂತರ ರಾಜು ಅಕ್ಟೋಬರ್ 12ನೇ ತಾರೀಖಿನಂದು ಊರಿಗೆ ಬಂದು ಇನ್ನೊಂದು ಹಸುವನ್ನು ಹೊಡೆದುಕೊಂಡು ಹೋಗಲು ತಿಳಿಸಿದ್ದರು.

ಅದರಂತೆ ನನ್ನ ಸ್ನೇಹಿತನೊಂದಿಗೆ ಅಕ್ಟೋಬರ್ 12ನೇ ತಾರೀಖಿನಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅವರ ಮನೆಯ ಹತ್ತಿರ ಹೋಗಿದ್ದೆ. ಆದರೆ ರಾಜು ಅವರ ಮನೆಯಲ್ಲಿ ಯಾರು ಇರಲಿಲ್ಲ. ರಾಜು ಅವರು ಗದ್ದೆಯ ಬಳಿ ಇದ್ದಾರೆ ಎಂದು ಅವರ ಮನೆಯ ಹತ್ತಿರದ ಸಂಬಂಧಿಗಳೊಬ್ಬರು ತಿಳಿಸಿದರು. ಹೇಗೂ ಹಸು ಹೊಡೆದುಕೊಂಡು ಹೋಗಲು ತಿಳಿಸಿದ್ದರಿಂದ ಅವರ ಮನೆಯಲ್ಲಿದ್ದ ಹಸುವನ್ನು ಹೊಡೆದುಕೊಂಡು ರಾಜು ಅವರಿದ್ದ ಗದ್ದೆಯ ಬಳಿಗೆ ಹೊರಟಿದ್ದೆ. ನನ್ನ ಸ್ನೇಹಿತ ಹಿಂದೆ ಗಾಡಿಯಲ್ಲಿ ಬರುತ್ತಿದ್ದ. ಆದರೆ ರಾಜು ಅವರ ಗದ್ದೆಗೆ ಹೋಗುವ ಮೊದಲೇ ಅವರು ಪೂರ್ವ ನಿಯೋಜಿತವಾಗಿ ಕಳ್ಳ, ಕಳ್ಳ ಎಂದು ಕೂಗುತ್ತಾ ರಾಜು ಮತ್ತವರ ಸ್ನೇಹಿತರು ನನ್ನನ್ನು ಸುತ್ತುವರೆದು ಹಸು ಕದಿಯುತ್ತಿದ್ದಾನೆ ಎಂದು ಆರೋಪಿಸಿ ಥಳಿಸಿದರು. ನನ್ನ ಕೈಕಾಲುಗಳನ್ನು ಕಟ್ಟಿ ಬಾವಿಗೆ ಎಸೆದು ಕೊಲ್ಲಲು ಪ್ರಯತ್ನಿಸಿದಾಗ, ರಾಜು ಅವರನ್ನು ಕಾಲಿಡಿದುಕೊಂಡು ಸಾಯಿಸಬೇಡಿ ಎಂದು ಬೇಡಿಕೊಂಡೆ. ಆಗ ಜಾತಿನಿಂದನೆ ಮಾಡಿ ನನ್ನ ಕೈಗಳನ್ನು ಹಸುವಿನ ಹಗ್ಗಕ್ಕೆ ಕಟ್ಟಿ ಮೆರವಣಿಗೆ ಮಾಡಿದರು. ಇದನ್ನೆಲ್ಲಾ ಅಲ್ಲಿದ್ದವರು ವೀಡಿಯೋ ಮಾಡುತ್ತಿದ್ದರು. ನಂತರ ನನ್ನನ್ನು ಅವರೇ ಕಳ್ಳನೆಂದು ಪೊಲೀಸರಿಗೆ ಒಪ್ಪಿಸಿದರು. ನಂತರ ರಾಜು ಅವರು ತನ್ನ ಸ್ನೇಹಿತರೊಂದಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ರಾಜಿ ಸಂಧಾನ ನಡೆದು ಕೊನೆಗೆ ನನ್ನನ್ನು ಬಿಡುಗಡೆ ಮಾಡಿದರು ಎಂದು ಸುರೇಶ್ ಇಡೀ ಘಟನೆಯನ್ನು ವಿವರಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ರಾಜು ಮತ್ತವರ ಸ್ನೇಹಿತರು ಮಾಡಿದ್ದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದರ ಬಗ್ಗೆ ಪ್ರತಿಕ್ರಿಯಿಸಿದ ಸುರೇಶ್, ಆ ವೀಡಿಯೋದಿಂದಾಗಿ ನನ್ನ ಇಡೀ ಕುಟುಂಬ ಊರಿನಲ್ಲಿ ತಲೆತಗ್ಗಿಸುವಂತಾಯಿತು. ಮಾಡಿಲ್ಲದ ತಪ್ಪಿಗೆ ದೈಹಿಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ನೋವು ಅನುಭವಿಸಿದೆ. ನಿಜವಾಗಿಯೂ ನಡೆದದ್ದೇನು ಎಂಬುದನ್ನು ನನ್ನ ಸಂಬಂಧಿಕರು ಹಾಗೂ ನಮ್ಮ ಸಮುದಾಯದ ಮುಖಂಡರಿಗೆ ವಿವರಿಸಿದೆ. ಆಗ ನಮ್ಮ ಸಮುದಾಯದ ಹಿರಿಯರ ಸಲಹೆ ಮೇರೆಗೆ ಸ್ನೇಹಿತರೊಟ್ಟಿಗೆ ಸೇರಿ ಪೊಲೀಸ್ ಠಾಣೆಯಲ್ಲಿ ರಾಜು ಮತ್ತು ಅವರ ಸ್ನೇಹಿತರ ವಿರುದ್ಧ ದೂರು ನೀಡಿದ್ದೇನೆ ಎಂದು ಸುರೇಶ್ ತಿಳಿಸಿದರು.

”ಪೊಲೀಸ್‌ ಠಾಣೆಗೆ ದೂರು ದಾಖಲಿಸಲು ಹೋದಾಗ ಸಬ್ ಇನ್ಸ್‌ಪೆಕ್ಟರ್ ರವಿಕುಮಾರ್‌ ಕೂಡ ಆರೋಪಿಗಳ ಪರವಾಗಿ ಮಾತನಾಡಿದ್ದು, ನೀನು ದೂರು ದಾಖಲಿಸುವುದಾದರೆ, ನಿನ್ನ ಮೇಲೆ ಕಳ್ಳತನದ ಆರೋಪ ಹೊರಿಸಿ ದೂರು ದಾಖಲಿಸುತ್ತೇನೆ ಎಂದು ಹೆದರಿಸಿದರು. ನಂತರ ನಮ್ಮ ಸಮುದಾಯದವರ ಸಹಾಯದೊಂದಿಗೆ ಡಿವೈಎಸ್‌ಪಿ ಅವರನ್ನು ಸಂಪರ್ಕಿಸಿ, ಆದ ಘಟನೆಯನ್ನು ವಿವರಿಸಿದ ನಂತರ, ವಿಡಿಯೋ ವೈರಲ್ ಆಗಿರುವುದು ಕೆಲ ಮಾಧ್ಯಮಗಳಲ್ಲಿ ಸುದ್ದಿಯಾದ ನಂತರವಷ್ಟೇ ಎಸ್‌ಸಿ ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿಕೊಂಡರು” ಎಂದು ಸುರೇಶ್ ತಿಳಿಸಿದ್ದಾರೆ.

‘ನಾನು ಮಾಡದ ತಪ್ಪಿಗೆ ನನ್ನ ಮಕ್ಕಳು ತಲೆ ತಗ್ಗಿಸುವಂತಾಗದಿರಲಿ. ಜಾತಿ ಹೆಸರನಲ್ಲಿ ನಡೆಯುತ್ತಿರುವ ಈ ಕ್ರೌರ್ಯ ಇಲ್ಲಿಗೆ ಕೊನೆಗೊಳ್ಳಲಿ. ನನಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ದೊರಕಿಸಿಕೊಡಿ’ ಎನ್ನುವ ಸುರೇಶ್ ಇಂತಹ ಘಟನೆಗಳು ಮರುಕಳಿಸದಿರಲಿ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಮಳವಳ್ಳಿಯ ನಿವೃತ್ತ ಪ್ರಾಂಶುಪಾಲರಾದ ಎಂ.ವಿ ಕೃಷ್ಣರವರು, “ಮಳವಳ್ಳಿ ತಾಲ್ಲೂಕಿನ ಹಳ್ಳಿಗಳಲ್ಲಿ ಇಂದಿಗೂ ಪರಿಶಿಷ್ಟ ಸಮುದಾಯದ ಜನರಿಗೆ ಕ್ಷೌರ ಮಾಡುವುದಿಲ್ಲ, ಹೋಟೆಲ್‌ಗಳಲ್ಲಿ ಪ್ರತ್ಯೇಕವಾಗಿ ಪೇಪರ್ ಲೋಟಗಳಲ್ಲಿ ಟೀ ಕೊಡುವ ಸಂಸ್ಕೃತಿ ಇದೆ. ಈ ಕುರಿತು ಹಲವು ಹೋರಾಟಗಳನ್ನು ನಡೆಸಿದ್ದೇವೆ. ಪರಿಸ್ಥಿತಿ ಇಂದಿಗೂ ಹೀಗೆ ಮುಂದುವರೆದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಸಂತ್ರಸ್ತನನ್ನೇ ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ನೀಡಲಾಗಿದೆ. ಆ ನಂತರ ರಾಜೀ ಮಾಡಿಸಲಾಗಿದೆ. ಆದರೆ ಸಂತ್ರಸ್ತ ದೂರು ನೀಡಿ ವಾರವಾದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರುತ್ತೇವೆ. ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

ಈ ದೇಶದಲ್ಲಿ ವ್ಯಕ್ತಿಯೊಬ್ಬ ದಲಿತ ಎಂಬ ಕಾರಣಕ್ಕೆ ಅವನ ಮೇಲೆ ದೌರ್ಜನ್ಯ ಎಸಗುವುದು, ದಲಿತ ಮಹಿಳೆ ಎಂಬ ಕಾರಣಕ್ಕೆ ಅತ್ಯಾಚಾರ ಎಸಗುವುದು, ಜಾತಿಯ ಹೆಸರಿನಲ್ಲಿ ಅವಹೇಳನ ಮಾಡುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಇಡೀ ಕುಟುಂಬಗಳ ಮೇಲೆ ಹಲ್ಲೆ ನಡೆಸುವುದು ತೀರಾ ಸಾಮಾನ್ಯ ಎನ್ನುವಂತಾಗಿದೆ. ಆರೋಪಿಗಳಿಗೆ ಶಿಕ್ಷೆಯಾಗದಿರುವುದು ಇಂತಹ ಘಟನೆಗಳು ಕೊನೆಗೊಳ್ಳದಿರಲು ಒಂದು ಕಾರಣವಾಗಿದೆ. ಈ ಬಗ್ಗೆ ಸರ್ಕಾರಗಳು ಕಣ್ಣಿದ್ದು ಕುರುಡರಂತೆ, ಕಿವಿಯಿದ್ದು ಕಿವುಡರಂತೆ ವರ್ತಿಸುತ್ತಿರುವುದು ಏಕೆ? ನೊಂದ ಜನರೇ ಕಾನೂನು ಕೈಗೆತ್ತುಕೊಳ್ಳುವ ಮೊದಲು ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಈ ರೀತಿಯ ಜಾತಿ ದೌರ್ಜನ್ಯಗಳಿಗೆ ಕೊನೆ ಹಾಡಲಿ..


ಇದನ್ನೂ ಓದಿ: ದಲಿತ ಕುಟುಂಬದ ಮೇಲೆ ಹಲ್ಲೆ, ಜಾತಿನಿಂದನೆ – ಪ್ರಕರಣ ದಾಖಲಾದರೂ ನಿಲ್ಲದ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...