Homeಮುಖಪುಟಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಈ ಪ್ರಕರಣದಲ್ಲಿ ಸಂತ್ರಸ್ತನನ್ನೇ ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ನೀಡಲಾಗಿದೆ. ಆ ನಂತರ ರಾಜೀ ಮಾಡಿಸಲಾಗಿದೆ. ಆದರೆ ಸಂತ್ರಸ್ತ ದೂರು ನೀಡಿ ವಾರವಾದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ.

- Advertisement -
- Advertisement -

ಹಸು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಜಾತಿ ದೌರ್ಜನ್ಯದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದಲಿತ ಯುವಕನನ್ನು ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ವೀಡಿಯೋ ವೈರಲ್ ಆಗಿದ್ದು, ವಾರದ ನಂತರ ಘಟನೆ ಬೆಳಕಿಗೆ ಬಂದಿದೆ. ಮಳವಳ್ಳಿ ತಾಲ್ಲೂಕಿನ ಹಣಕೊಳ ಗ್ರಾಮದ ಸುರೇಶ್ ವರ್ಧನ್ (32) ಹಲ್ಲೆಗೊಳಗಾದ ಯುವಕ. ಆರೋಪಿಗಳಾದ ದುಗ್ಗನಹಳ್ಳಿಯ ರಾಜು, ಹಣಕೊಳ ಗ್ರಾಮದ ಸುಂದರಮ್ಮ, ಮಳವಳ್ಳಿಯ ಮಲ್ಲಯ್ಯ ಮತ್ತು ಗಿರೀಶ್ ಎಂಬುವವರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಪ್ರತಿಕ್ರಿಯಿಸಿದ ಡಿವೈಎಸ್ಪಿ ಲಕ್ಷ್ಮಿ ನಾರಾಯಣ್ “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಆರೋಪಿಗಳನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ವಾಸ್ತವವಾಗಿ ನಡೆದಿದ್ದೇನು?

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಕೊರೊನಾ ತಂದೊಡ್ಡಿದ ಸಂಕಷ್ಟದಿಂದಾಗಿ ತನ್ನ ಹಳ್ಳಿಗೆ ಮರಳಿದ್ದರು. ಹಳ್ಳಿಯಲ್ಲಿಯೇ ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸಬೇಕೆಂದುಕೊಂಡಿದ್ದರು. ಪರಿಚಯಸ್ಥರೊಬ್ಬರಿಂದ ಹಸು ಮಾರಾಟ ಮಾಡುತ್ತಿದ್ದ ರಾಜು ಅವರ ಪರಿಚಯವಾಗಿ, ಅವರ ಹತ್ತಿರ ಹಸು ಕೊಳ್ಳಲು ಮುಂದಾಗಿದ್ದರು. ಈ ಕುರಿತು ಸುರೇಶ್ ನಾನುಗೌರಿ ಜೊತೆ ತಮಗಾದ ಅನ್ಯಾಯವನ್ನು ಹಂಚಿಕೊಂಡಿದ್ದಾರೆ.

ಹಲ್ಲೆಗೊಳಗಾಗಿದ್ದ ಸುರೇಶ್ ಅವರು ವಿವರಿಸುವಂತೆ, ‘ಹಸು ವ್ಯಾಪಾರಿ ದುಗ್ಗನಹಳ್ಳಿ ರಾಜು, ಜೆರ್ಸಿ ಹಸುವೊಂದು ದಿನಕ್ಕೆ 15 ಲೀಟರ್ ಹಾಲು ಕೊಡುತ್ತದೆ ಎಂದು ನಂಬಿಸಿ 44 ಸಾವಿರ ರೂಗಳಿಗೆ ಹಸುವನ್ನು ಮಾರಿದ್ದರು. ಹದಿನೈದು ದಿನಗಳಾದರೂ ಹಸು ದಿನಕ್ಕೆ 3 ಲೀಟರ್ ಅಷ್ಟೇ ಹಾಲು ಕೊಡುತ್ತಿದ್ದರಿಂದ ರಾಜು ಅವರಿಗೆ ಫೋನ್ ಮಾಡಿ ಮೋಸ ಮಾಡಿದ್ದೀರಿ ಎಂದು ಬೇಸರ ತೋಡಿಕೊಂಡಿದ್ದೆ. ನಂತರ ರಾಜು ಇನ್ನೊಂದು ಹಸುವನ್ನು ಕಡಿಮೆ ಬೆಲೆಗೆ ನೀಡುವುದಾಗಿ ತಿಳಿಸಿ 14 ಸಾವಿರ ರೂಗಳಿಗೆ ಗೊಡ್ಡು ಹಸುವನ್ನು ನನಗೆ ಮಾರಿದ್ದರು. ಪಶುವೈದ್ಯರಿಗೆ ಹಸುವನ್ನು ತೋರಿಸಿದಾಗ ಹಸು ಕರು ಹಾಕುವುದಿಲ್ಲ ಎಂಬುದು ತಿಳಿಯಿತು. ಎರೆಡೆರಡು ಬಾರಿ ಮೋಸ ಮಾಡಿದ್ದ ರಾಜು ಅವರ ಬಗ್ಗೆ ಅವರ ಪರಿಚಯಸ್ಥರಿಗೆ ತಿಳಿಸಿದ್ದೆ. ಈ ಎಲ್ಲಾ ಘಟನೆಗಳ ನಂತರ ರಾಜು ಅಕ್ಟೋಬರ್ 12ನೇ ತಾರೀಖಿನಂದು ಊರಿಗೆ ಬಂದು ಇನ್ನೊಂದು ಹಸುವನ್ನು ಹೊಡೆದುಕೊಂಡು ಹೋಗಲು ತಿಳಿಸಿದ್ದರು.

ಅದರಂತೆ ನನ್ನ ಸ್ನೇಹಿತನೊಂದಿಗೆ ಅಕ್ಟೋಬರ್ 12ನೇ ತಾರೀಖಿನಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅವರ ಮನೆಯ ಹತ್ತಿರ ಹೋಗಿದ್ದೆ. ಆದರೆ ರಾಜು ಅವರ ಮನೆಯಲ್ಲಿ ಯಾರು ಇರಲಿಲ್ಲ. ರಾಜು ಅವರು ಗದ್ದೆಯ ಬಳಿ ಇದ್ದಾರೆ ಎಂದು ಅವರ ಮನೆಯ ಹತ್ತಿರದ ಸಂಬಂಧಿಗಳೊಬ್ಬರು ತಿಳಿಸಿದರು. ಹೇಗೂ ಹಸು ಹೊಡೆದುಕೊಂಡು ಹೋಗಲು ತಿಳಿಸಿದ್ದರಿಂದ ಅವರ ಮನೆಯಲ್ಲಿದ್ದ ಹಸುವನ್ನು ಹೊಡೆದುಕೊಂಡು ರಾಜು ಅವರಿದ್ದ ಗದ್ದೆಯ ಬಳಿಗೆ ಹೊರಟಿದ್ದೆ. ನನ್ನ ಸ್ನೇಹಿತ ಹಿಂದೆ ಗಾಡಿಯಲ್ಲಿ ಬರುತ್ತಿದ್ದ. ಆದರೆ ರಾಜು ಅವರ ಗದ್ದೆಗೆ ಹೋಗುವ ಮೊದಲೇ ಅವರು ಪೂರ್ವ ನಿಯೋಜಿತವಾಗಿ ಕಳ್ಳ, ಕಳ್ಳ ಎಂದು ಕೂಗುತ್ತಾ ರಾಜು ಮತ್ತವರ ಸ್ನೇಹಿತರು ನನ್ನನ್ನು ಸುತ್ತುವರೆದು ಹಸು ಕದಿಯುತ್ತಿದ್ದಾನೆ ಎಂದು ಆರೋಪಿಸಿ ಥಳಿಸಿದರು. ನನ್ನ ಕೈಕಾಲುಗಳನ್ನು ಕಟ್ಟಿ ಬಾವಿಗೆ ಎಸೆದು ಕೊಲ್ಲಲು ಪ್ರಯತ್ನಿಸಿದಾಗ, ರಾಜು ಅವರನ್ನು ಕಾಲಿಡಿದುಕೊಂಡು ಸಾಯಿಸಬೇಡಿ ಎಂದು ಬೇಡಿಕೊಂಡೆ. ಆಗ ಜಾತಿನಿಂದನೆ ಮಾಡಿ ನನ್ನ ಕೈಗಳನ್ನು ಹಸುವಿನ ಹಗ್ಗಕ್ಕೆ ಕಟ್ಟಿ ಮೆರವಣಿಗೆ ಮಾಡಿದರು. ಇದನ್ನೆಲ್ಲಾ ಅಲ್ಲಿದ್ದವರು ವೀಡಿಯೋ ಮಾಡುತ್ತಿದ್ದರು. ನಂತರ ನನ್ನನ್ನು ಅವರೇ ಕಳ್ಳನೆಂದು ಪೊಲೀಸರಿಗೆ ಒಪ್ಪಿಸಿದರು. ನಂತರ ರಾಜು ಅವರು ತನ್ನ ಸ್ನೇಹಿತರೊಂದಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ರಾಜಿ ಸಂಧಾನ ನಡೆದು ಕೊನೆಗೆ ನನ್ನನ್ನು ಬಿಡುಗಡೆ ಮಾಡಿದರು ಎಂದು ಸುರೇಶ್ ಇಡೀ ಘಟನೆಯನ್ನು ವಿವರಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ರಾಜು ಮತ್ತವರ ಸ್ನೇಹಿತರು ಮಾಡಿದ್ದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದರ ಬಗ್ಗೆ ಪ್ರತಿಕ್ರಿಯಿಸಿದ ಸುರೇಶ್, ಆ ವೀಡಿಯೋದಿಂದಾಗಿ ನನ್ನ ಇಡೀ ಕುಟುಂಬ ಊರಿನಲ್ಲಿ ತಲೆತಗ್ಗಿಸುವಂತಾಯಿತು. ಮಾಡಿಲ್ಲದ ತಪ್ಪಿಗೆ ದೈಹಿಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ನೋವು ಅನುಭವಿಸಿದೆ. ನಿಜವಾಗಿಯೂ ನಡೆದದ್ದೇನು ಎಂಬುದನ್ನು ನನ್ನ ಸಂಬಂಧಿಕರು ಹಾಗೂ ನಮ್ಮ ಸಮುದಾಯದ ಮುಖಂಡರಿಗೆ ವಿವರಿಸಿದೆ. ಆಗ ನಮ್ಮ ಸಮುದಾಯದ ಹಿರಿಯರ ಸಲಹೆ ಮೇರೆಗೆ ಸ್ನೇಹಿತರೊಟ್ಟಿಗೆ ಸೇರಿ ಪೊಲೀಸ್ ಠಾಣೆಯಲ್ಲಿ ರಾಜು ಮತ್ತು ಅವರ ಸ್ನೇಹಿತರ ವಿರುದ್ಧ ದೂರು ನೀಡಿದ್ದೇನೆ ಎಂದು ಸುರೇಶ್ ತಿಳಿಸಿದರು.

”ಪೊಲೀಸ್‌ ಠಾಣೆಗೆ ದೂರು ದಾಖಲಿಸಲು ಹೋದಾಗ ಸಬ್ ಇನ್ಸ್‌ಪೆಕ್ಟರ್ ರವಿಕುಮಾರ್‌ ಕೂಡ ಆರೋಪಿಗಳ ಪರವಾಗಿ ಮಾತನಾಡಿದ್ದು, ನೀನು ದೂರು ದಾಖಲಿಸುವುದಾದರೆ, ನಿನ್ನ ಮೇಲೆ ಕಳ್ಳತನದ ಆರೋಪ ಹೊರಿಸಿ ದೂರು ದಾಖಲಿಸುತ್ತೇನೆ ಎಂದು ಹೆದರಿಸಿದರು. ನಂತರ ನಮ್ಮ ಸಮುದಾಯದವರ ಸಹಾಯದೊಂದಿಗೆ ಡಿವೈಎಸ್‌ಪಿ ಅವರನ್ನು ಸಂಪರ್ಕಿಸಿ, ಆದ ಘಟನೆಯನ್ನು ವಿವರಿಸಿದ ನಂತರ, ವಿಡಿಯೋ ವೈರಲ್ ಆಗಿರುವುದು ಕೆಲ ಮಾಧ್ಯಮಗಳಲ್ಲಿ ಸುದ್ದಿಯಾದ ನಂತರವಷ್ಟೇ ಎಸ್‌ಸಿ ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿಕೊಂಡರು” ಎಂದು ಸುರೇಶ್ ತಿಳಿಸಿದ್ದಾರೆ.

‘ನಾನು ಮಾಡದ ತಪ್ಪಿಗೆ ನನ್ನ ಮಕ್ಕಳು ತಲೆ ತಗ್ಗಿಸುವಂತಾಗದಿರಲಿ. ಜಾತಿ ಹೆಸರನಲ್ಲಿ ನಡೆಯುತ್ತಿರುವ ಈ ಕ್ರೌರ್ಯ ಇಲ್ಲಿಗೆ ಕೊನೆಗೊಳ್ಳಲಿ. ನನಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ದೊರಕಿಸಿಕೊಡಿ’ ಎನ್ನುವ ಸುರೇಶ್ ಇಂತಹ ಘಟನೆಗಳು ಮರುಕಳಿಸದಿರಲಿ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಮಳವಳ್ಳಿಯ ನಿವೃತ್ತ ಪ್ರಾಂಶುಪಾಲರಾದ ಎಂ.ವಿ ಕೃಷ್ಣರವರು, “ಮಳವಳ್ಳಿ ತಾಲ್ಲೂಕಿನ ಹಳ್ಳಿಗಳಲ್ಲಿ ಇಂದಿಗೂ ಪರಿಶಿಷ್ಟ ಸಮುದಾಯದ ಜನರಿಗೆ ಕ್ಷೌರ ಮಾಡುವುದಿಲ್ಲ, ಹೋಟೆಲ್‌ಗಳಲ್ಲಿ ಪ್ರತ್ಯೇಕವಾಗಿ ಪೇಪರ್ ಲೋಟಗಳಲ್ಲಿ ಟೀ ಕೊಡುವ ಸಂಸ್ಕೃತಿ ಇದೆ. ಈ ಕುರಿತು ಹಲವು ಹೋರಾಟಗಳನ್ನು ನಡೆಸಿದ್ದೇವೆ. ಪರಿಸ್ಥಿತಿ ಇಂದಿಗೂ ಹೀಗೆ ಮುಂದುವರೆದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಸಂತ್ರಸ್ತನನ್ನೇ ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ನೀಡಲಾಗಿದೆ. ಆ ನಂತರ ರಾಜೀ ಮಾಡಿಸಲಾಗಿದೆ. ಆದರೆ ಸಂತ್ರಸ್ತ ದೂರು ನೀಡಿ ವಾರವಾದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರುತ್ತೇವೆ. ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

ಈ ದೇಶದಲ್ಲಿ ವ್ಯಕ್ತಿಯೊಬ್ಬ ದಲಿತ ಎಂಬ ಕಾರಣಕ್ಕೆ ಅವನ ಮೇಲೆ ದೌರ್ಜನ್ಯ ಎಸಗುವುದು, ದಲಿತ ಮಹಿಳೆ ಎಂಬ ಕಾರಣಕ್ಕೆ ಅತ್ಯಾಚಾರ ಎಸಗುವುದು, ಜಾತಿಯ ಹೆಸರಿನಲ್ಲಿ ಅವಹೇಳನ ಮಾಡುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಇಡೀ ಕುಟುಂಬಗಳ ಮೇಲೆ ಹಲ್ಲೆ ನಡೆಸುವುದು ತೀರಾ ಸಾಮಾನ್ಯ ಎನ್ನುವಂತಾಗಿದೆ. ಆರೋಪಿಗಳಿಗೆ ಶಿಕ್ಷೆಯಾಗದಿರುವುದು ಇಂತಹ ಘಟನೆಗಳು ಕೊನೆಗೊಳ್ಳದಿರಲು ಒಂದು ಕಾರಣವಾಗಿದೆ. ಈ ಬಗ್ಗೆ ಸರ್ಕಾರಗಳು ಕಣ್ಣಿದ್ದು ಕುರುಡರಂತೆ, ಕಿವಿಯಿದ್ದು ಕಿವುಡರಂತೆ ವರ್ತಿಸುತ್ತಿರುವುದು ಏಕೆ? ನೊಂದ ಜನರೇ ಕಾನೂನು ಕೈಗೆತ್ತುಕೊಳ್ಳುವ ಮೊದಲು ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಈ ರೀತಿಯ ಜಾತಿ ದೌರ್ಜನ್ಯಗಳಿಗೆ ಕೊನೆ ಹಾಡಲಿ..


ಇದನ್ನೂ ಓದಿ: ದಲಿತ ಕುಟುಂಬದ ಮೇಲೆ ಹಲ್ಲೆ, ಜಾತಿನಿಂದನೆ – ಪ್ರಕರಣ ದಾಖಲಾದರೂ ನಿಲ್ಲದ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...