Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...