Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...